ತುಂಬೆ ನೀರಾ ಘಟಕ ಬಾಗಿಲು ಹಾಕಿ ಸಂದಿತು ವರ್ಷ


Team Udayavani, May 2, 2017, 4:34 PM IST

tumbe-neera-gataka.jpg

ಬಂಟ್ವಾಳ : ರಾಜ್ಯದ ಪ್ರಥಮ ನೀರಾ ಘಟಕ ಎಂಬ ಹೆಗ್ಗಳಿಕೆ ಪಡೆದಿದ್ದ ತುಂಬೆಯ ನೀರಾ ಘಟಕ ಮುಚ್ಚಲ್ಪಟ್ಟು ಇಂದಿಗೆ ವರ್ಷ ಒಂದು ಸಂದಿದೆ. ನೀರಾ ಉತ್ಪಾದನೆ, ಮಾರುಕಟ್ಟೆ ಕ್ಷೇತ್ರದಲ್ಲಿ ಹೊಸ ಭರವಸೆ, ಆಶಾಭಾವನೆ ಮೂಡಿಸಿದ್ದ ಘಟಕ ಸರಕಾರದ ನಿರ್ಲಕ್ಷ್ಯಕ್ಕೊಳಗಾಗಿ ಇತಿಹಾಸ ಸೇರಿದೆ.

ಘಟಕ ಸಾಗಿದ ಹಾದಿ
ಅತ್ಯಂತ ಆಧುನಿಕ ತಂತ್ರಜ್ಞಾನವನ್ನೊಳಗೊಂಡ ಈ ಘಟಕ 2011-12ನೇ ಸಾಲಿನಲ್ಲಿ ಬಂಟ್ವಾಳ ತಾಲೂಕು ತುಂಬೆ ತೋಟಗಾರಿಕಾ ಕ್ಷೇತ್ರದಲ್ಲಿ ಆರಂಭವಾಗಿತ್ತು. ತೋಟಗಾರಿಕಾ ಇಲಾಖೆ, ತೆಂಗು ಅಭಿವೃದ್ದಿ ಮಂಡಳಿ, ಪಾಲಕ್ಕಾಡ್‌ ತೆಂಗು ಉತ್ಪಾದಕರ ಕಂಪೆನಿಗಳು ಈ ಘಟಕವನ್ನು ನಿರ್ವಹಿಸಲು ಒಪ್ಪಿಕೊಂಡು ಘಟಕ ಆರಂಭವಾಗಿತ್ತು. ಮೂರ್ತೆದಾರರ ಮಹಾ ಮಂಡಲದ ತಾತ್ವಿಕ ಒಪ್ಪಿಗೆಯಿಂದ ಮಾರಾಟ ಆರಂಭವಾಗಿತ್ತು. ಪ್ರಾಯೋಗಿಕ ಮಾರಾಟಕ್ಕಾಗಿ 2014 ಮೇ 6ರಂದು ನೀರಾ ತಂಪು ಪಾನೀಯವನ್ನು ಪ್ಯಾಕೆಟ್‌ ಮಾದರಿಯಲ್ಲಿ ಮಂಗಳೂರು ಹಾಫ್ಕಾಮ್‌ ಘಟಕಕ್ಕೆ ರವಾನಿಸಲಾಗಿತ್ತು.  

ತುಂಬೆ ಘಟಕವು ದಿನಕ್ಕೆ ಗರಿಷ್ಠ ಎರಡು ಸಾವಿರ ಲೀಟರ್‌ ಸಂಗ್ರಹ ಮತ್ತು ಸಂಸ್ಕರಣೆ  ಸಾಮರ್ಥ್ಯ ಹೊಂದಿತ್ತು. ಕನಿಷ್ಠ ನೂರು ಮಂದಿ ನೀರಾ ಮೂರ್ತೆದಾರರು, ಅಷ್ಟೆ ಸಂಖ್ಯೆಯ ಸಹಾಯಕರು, ಸಂಸ್ಕರಣೆ, ಮಾರಾಟ ಮತ್ತು ವಿತರಣೆಗೆ ಸುಮಾರು ಐವತ್ತು ಮಂದಿ ಸಿಬಂದಿ ಇದರಲ್ಲಿ ತೊಡಗಿಸಿಕೊಂಡಿದ್ದರು. ಇದೊಂದು ಪ್ರಥಮ ಪ್ರಾಯೋಗಿಕ ಘಟಕದಂತಿತ್ತು. ಇನ್ನಷ್ಟು ಸುಧಾರಣೆಯ ಬಳಿಕ ಗ್ರಾಮಾಂತರ ತೆಂಗು ಕೃಷಿಕರಿಗೆ ವರದಾನ ಆಗಲಿದೆ ಎಂಬ ನಿರೀಕ್ಷೆ ಮೂಡಿಸಿತ್ತು. 2011-12 ಸಾಲಿನ ರಾಜ್ಯ ಮುಂಗಡ ಪತ್ರದಲ್ಲಿ ಒಂದು ಕೋಟಿ ರೂ. ಅನುದಾನವು ಇದಕ್ಕೆ ಬಿಡುಗಡೆ ಆಗಿತ್ತು. ಆದರೆ ಸಂಬಂಧಪಟ್ಟ ಇಲಾಖೆಯ ಸಂಪೂರ್ಣ ನಿರ್ಲಕ್ಷ್ಯದಿಂದಾಗಿ ನೀರಾ ಘಟಕ ನಿಂತು ಹೋಯಿತು. ಅನಂತರ ಸರಕಾರ ಕೂಡ ಈ ಬಗ್ಗೆ ಗಮನ ಹರಿಸಲೇ ಇಲ್ಲ. 

ಒರಿಸ್ಸಾದಲ್ಲಿ ಖಾಸಗಿ ವ್ಯವಸ್ಥೆ ಅಡಿಯಲ್ಲಿ  2005ರಲ್ಲಿ ನೀರಾ ಘಟಕಕ್ಕೆ ಅನುಮತಿ ದೊರೆತಿದೆ. ತಮಿಳುನಾಡು, ಆಂಧ್ರದಲ್ಲೂ ಖಾಸಗಿ ವ್ಯವಸ್ಥೆ ನಡೆಸುತ್ತದೆ ಮತ್ತು ಕೇರಳದಲ್ಲಿ ಸರಕಾರಿ ಪ್ರಾಯೋಜಕತ್ವದಲ್ಲಿ ಘಟಕ ಸ್ಥಾಪಿಸಲಾಗಿದೆ. ಭಾರತ, ಶ್ರೀಲಂಕಾ, ಆಫ್ರಿಕ, ಮಲೇಶಿಯಾ, ತೈಲಾಂಡ್‌, ಮ್ಯಾನ್ಮರ್‌ ದೇಶಗಳಲ್ಲಿ ಇದರ ಉತ್ಪಾದನೆ ಮತ್ತು ಬಳಕೆ ಇದೆ ಪರಂಪರಾಗತ ಪದ್ದತಿಯಲ್ಲಿದೆ. ನೀರಾ ಘಟಕ ಸರಿಯಾಗಿ ರಾಜ್ಯದಾದ್ಯಂತ ಆರಂಭವಾದರೆ ತೆಂಗಿನಕಾಯಿಗೆ ಇಂದಿನ ಬೆಲೆಯ ಹತ್ತು ಪಟ್ಟು ಉತ್ತಮ ಧಾರಣೆ ಸಿಗಬಹುದು. ಯಶಸ್ವಿ ಅನುಷ್ಠಾನದ ಬಳಿಕ ಲಕ್ಷಾಂತರ ಮಂದಿಗೆ ಉದ್ಯೋಗ ಸಿಗಲಿದೆ ಎಂಬ ನಿರೀಕ್ಷೆ-ಲೆಕ್ಕಾಚಾರಗಳಿವೆ. ತೆಂಗಿನ ಕೃಷಿಗೆ ಬರುವ ನುಸಿ ಪೀಡೆ ಸಂಪೂರ್ಣ ನಿವಾರಣೆ ಆಗುತ್ತದೆ ಎಂದು ಕೂಡ ಹೇಳಲಾಗುತ್ತದೆ.

ಟಾಪ್ ನ್ಯೂಸ್

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.