ಹಲವು ವರ್ಷಗಳಿಂದ ಪೂರ್ಣಕಾಲಿಕ ಪಶುವೈದ್ಯರೇ ಇಲ್ಲ

ಸುಬ್ರಹ್ಮಣ್ಯ: ವಾರಕ್ಕೆ ಎರಡೇ ದಿನ ವೈದ್ಯರು ಲಭ್ಯ

Team Udayavani, Apr 24, 2022, 9:48 AM IST

doctor

ಸುಬ್ರಹ್ಮಣ್ಯ: ಪಶು ವೈದ್ಯ ಆಸ್ಪತ್ರೆ ಇದ್ದರೂ, ಕೆಲವೊಂದು ಸಂದರ್ಭದಲ್ಲಿ ಬೇರೆಡೆಗೆ ಅಲೆದಾಟ ನಡೆಸಬೇಕಾದ ದುಸ್ಥಿತಿ. ಹತ್ತು ವರ್ಷಗಳಿಂದ ಇಲ್ಲಿ ಪೂರ್ಣಕಾಲಿಕ ಪಶುವೈದ್ಯರೇ ನೇಮಕವಾಗಿಲ್ಲ. ಪ್ರಸ್ತುತ ಇಲ್ಲಿ ವಾರಕ್ಕೆ ಎರಡೇ ದಿನ ಪಶು ವೈದ್ಯರು ಲಭ್ಯವಾಗುತ್ತಿದ್ದಾರೆ-ಇದು ಸುಬ್ರಹ್ಮಣ್ಯ ಪಶು ವೈದ್ಯ ಆಸ್ಪತ್ರೆಯ ಸ್ಥಿತಿ.

ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಸಮಸ್ಯೆ ಹೈನುಗಾರರಿಗೆ ಸವಾಲಾಗಿ ಪರಿಣಮಿಸಿದೆ. ಇಲ್ಲಿ ಪೂರ್ಣಕಾಲಿಕ ಪಶು ವೈದ್ಯರು ಇಲ್ಲದೆ ಗ್ರಾಮಸ್ಥರು ತುರ್ತು ಸಂದರ್ಭದಲ್ಲಿ ದೂರದ ಊರಿಗೆ ಅಲೆದಾಟ ನಡೆಸಬೇಕಾದ ಅನಿವಾರ್ಯತೆ ಇದೆ.

ಪಶು ವೈದ್ಯರಿಲ್ಲ

ಸುಬ್ರಹ್ಮಣ್ಯದ‌ಲ್ಲಿ ಕೋಟಿ ರೂ. ವೆಚ್ಚ ದಲ್ಲಿ ಸುಸಜ್ಜಿತ ಪಶು ವೈದ್ಯ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಆದರೆ ಸುಸಜ್ಜಿತ ಕಟ್ಟಡ ಕೇಂದ್ರ ವಿದ್ದರೂ, ಪಶು, ಪ್ರಾಣಿಗಳ ಆರೈಕೆ, ಪರೀಕ್ಷೆ, ಚಿಕಿತ್ಸೆ ನೀಡಬೇಕಾದ ವೈದ್ಯರೇ ಇಲ್ಲಿ ಇಲ್ಲ. ಪರಿಣಾಮ ಈ ವ್ಯಾಪ್ತಿಯಲ್ಲಿ ಪ್ರಾಣಿಗಳಿಗೆ ಸಮಸ್ಯೆ ಉಂಟಾದಲ್ಲಿ ಹೆಚ್ಚಿನ ಸಂದರ್ಭದಲ್ಲಿ ದೂರದ ಪಶು ವೈದ್ಯರನ್ನು ಸಂಪರ್ಕಿಸಿ ಬೇಕಾಗಿದೆ. ಇಲ್ಲವೇ ದೂರದ ಊರಿಗೆ ಅಲೆದಾಟ ನಡೆಸಬೇಕಾಗುತ್ತದೆ ಎನ್ನುತ್ತಾರೆ ಸಾರ್ವಜನಿಕರು.

ಸುಬ್ರಹ್ಮಣ್ಯ ಪೇಟೆ ಹೊರತು ಪಡಿಸಿ ಈ ವ್ಯಾಪ್ತಿ ಗ್ರಾಮೀಣ ಭಾಗವನ್ನು ಒಳಗೊಂಡಿದ್ದು, ಇಲ್ಲಿರುವ ಬಹುತೇಕರು ಕೃಷಿಕರು. ಹೈನುಗಾರರೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಹೈನುಗಾರಿಕೆಯ ಪಶು, ಪ್ರಾಣಿಗಳ ನಿರ್ವಹಣೆ, ಸಮಸ್ಯೆಗಳಿಗೆ ಪರಿವಾರ ಕಂಡುಕೊಳ್ಳುವ ಕೇಂದ್ರದಲ್ಲಿ ವೈದ್ಯರ ಕೊರತೆಯಿಂದ ಈ ವ್ಯಾಪ್ತಿಯ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಪಶುವೈದ್ಯರ ಕೊರತೆ ಮಧ್ಯೆ ಸಿಬಂದಿ ಕೊರತೆಯೂ ಕಾಡುತ್ತಿದೆ. ಆದರೆ ಇಲ್ಲಿನ ಡಿ ದರ್ಜೆಯ ಸಿಬಂದಿ ನಿವೃತ್ತರಾಗಿದ್ದು, ಸಿಬಂದಿ ನೇಮಕವಾಗಿಲ್ಲ.

ನೇಮಕಕ್ಕೆ ಆಗ್ರಹ

ಸುಬ್ರಹ್ಮಣ್ಯದಲ್ಲಿ ಪೂರ್ಣಕಾಲಿಕ ಪಶುವೈದ್ಯರನ್ನು ನೇಮಕ ಮಾಡುವಂತೆ ಹಲವು ವರ್ಷಗಳಿಂದ ಆಗ್ರಹಿಸುತ್ತಾ ಬರುತ್ತಿದ್ದರೂ, ಈ ಬಗ್ಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಗ್ರಾಮಸಭೆಯಲ್ಲಿ ಈ ಬಗ್ಗೆ ಪ್ರಸ್ತಾವಿಸಲಾಗುತ್ತಿತ್ತು. ಇತ್ತೀಚೆಗೆ ನಡೆದ ಗ್ರಾಮ ವಾಸ್ತವ್ಯದಲ್ಲೂ ಇದು ಪ್ರಸ್ತಾವಗೊಂಡಿದ್ದು, ಸಮಸ್ಯೆ ಬಗೆ ಹರಿಯದಿದ್ದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಲಾಗಿತ್ತು.

ಹಲವು ವರ್ಷಗಳ ಬೇಡಿಕೆ

ಪೂರ್ಣಕಾಲಿಕ ವೈದ್ಯರನ್ನು ನೇಮಿಸುವಂತೆ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದರೂ ಪ್ರಯೋಜನವಾಗಿಲ್ಲ. ಪರಿಣಾಮ ಪಶು, ಪ್ರಾಣಿಗಳಿಗೆ ಸಮಸ್ಯೆ ಕಂಡುಬಂದಲ್ಲಿ ದೂರದ ವೈದ್ಯರ ಬಳಿ ತೆರಳಬೇಕಾದ ಪರಿಸ್ಥಿತಿ ಇದೆ. ಶೀಘ್ರ ಇಲ್ಲಿಗೆ ಪೂರ್ಣಕಾಲಿಕ ಪಶು ವೈದ್ಯರನ್ನು ನೇಮಿಸಬೇಕು. ಇಲ್ಲವೇ ಪ್ರತಿಭಟನೆ ನಡೆಸಲಾಗುವುದು. ಹರೀಶ್‌ ಇಂಜಾಡಿ, ಗ್ರಾಮ ಪಂಚಾಯತ್‌ ಸದಸ್ಯರು, ಸುಬ್ರಹ್ಮಣ್ಯ  

ದಯಾನಂದ ಕಲ್ಚಾರ್‌

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.