‘ಯೋಗ, ಪ್ರಕೃತಿ ಚಿಕಿತ್ಸೆಗೆ ಉಜ್ವಲ ಭವಿಷ್ಯ’
Team Udayavani, Jul 3, 2017, 3:45 AM IST
ಬೆಳ್ತಂಗಡಿ: ವೈದ್ಯರು ಹಾಗೂ ದೇವರನ್ನು ಕಷ್ಟ ಕಾಲದಲ್ಲಿ ಮಾತ್ರ ನೆನೆಯದೆ, ಪ್ರತಿಯೊಬ್ಬನೂ ಯೋಗಾಭ್ಯಾಸವನ್ನು ಮಾಡಿದರೆ ಮಾತ್ರ ರೋಗರಹಿತ ಜೀವನ ಸಾಧ್ಯ. ಯೋಗ ಪ್ರಕೃತಿ ಚಿಕಿತ್ಸೆಗಳನ್ನು ಸಮಗ್ರ ಚಿಕಿತ್ಸೆಯನ್ನಾಗಿ ಪರಿವರ್ತಿಸುವ ಗುರುತರವಾದ ಜವಾಬ್ದಾರಿ ಎಲ್ಲರ ಮೇಲಿದೆ. ಇದಕ್ಕೆ ಉಜ್ವಲ ಭವಿಷ್ಯವಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ವಿನಯ ಕುಲಕರ್ಣಿ ಹೇಳಿದರು. ಅವರು ಶನಿವಾರ ಸಂಜೆ ಭಾರತರತ್ನ ಡಾ| ಬಿ. ಸಿ. ರಾಯ್ ಜನ್ಮದಿನಾಚರಣೆ ಅಂಗವಾಗಿ ಉಜಿರೆಯ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ನಡೆದ ವೈದ್ಯರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪ್ರಕೃತಿಚಿಕಿತ್ಸೆ ವೈದ್ಯಪದ್ಧತಿಯಿಂದ ನಾನು ಆರೋಗ್ಯವಂತನಾಗಿದ್ದೇನೆ. ಈ ಔಷಧವಿಲ್ಲದ ಚಿಕಿತ್ಸೆ ಇಷ್ಟೊಂದು ಪರಿಣಾಮಕಾರಿ ಎಂಬುದನ್ನು ಇಲ್ಲಿಯ ಚಿಕಿತ್ಸೆಗಳಿಂದ ಮನಗಂಡಿದ್ದೇನೆ ಎಂದವರು ತಿಳಿಸಿದರು. ಕೇಂದ್ರ ಆಯುಷ್ ಮಂತ್ರಾಲಯದ ಯೋಗ ವಿಭಾಗದ ಜಂಟಿ ಸಲಹೆಗಾರ ಹಾಗೂ ಕೇಂದ್ರೀಯ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಸಂಶೋಧನಾ ಕೇಂದ್ರ ದಿಲ್ಲಿಯ ನಿರ್ದೇಶಕ ಡಾ| ಈಶ್ವರ ಎನ್. ಆಚಾರ್ಯ ಮಾತನಾಡಿ, ಸಾರ್ವಜನಿಕ ಜೀವನದಲ್ಲಿ ವೈದ್ಯರಿಗೆ ಉತ್ತಮ ಸ್ಥಾನವಿದೆ. ಅದರಲ್ಲಿ ಇಂದಿನ ಆಧುನಿಕ ಜೀವನ ಶೈಲಿಯಿಂದ ಬರುವ ದೇಹದ ಮನಸ್ಸಿನ ಅಸಮತೋಲನಕ್ಕೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳೇ ಪರಿಹಾರ ಎಂದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ| ಪ್ರಶಾಂತ್ ಶೆಟ್ಟಿ ವಹಿಸಿದ್ದರು. ಬಿ.ಎನ್.ವೈ.ಎಸ್. ಕಾಲೇಜಿನ ಯೋಗ ವಿಭಾಗದ ಡೀನ್ ಡಾ| ಶಿವಪ್ರಸಾದ್ ಶೆಟ್ಟಿ, ಸ್ವಾಗತಿಸಿದರು. ಪ್ರಕೃತಿಚಿಕಿತ್ಸಾ ವಿಭಾಗದ ಡೀನ್ ಡಾ| ಸುಜಾತಾ ವಂದಿಸಿದರು. ಯೋಗ ವಿಭಾಗದ ಸಹ ಪ್ರಾಧ್ಯಾಪಕ ಡಾ| ಕಿರಣ್ಕುಮಾರ್ ರೆಡ್ಡಿ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ