ದಂತ ವೈದ್ಯಕೀಯ ಕ್ಷೇತ್ರದಲ್ಲಿ ವಿಪುಲ ಅವಕಾಶ: ಪ್ರೊ| ಕ್ರಿಸ್ ಲೂಕಾ
Team Udayavani, Mar 24, 2018, 9:40 AM IST
ಮಂಗಳೂರು: ಆರೋಗ್ಯ ಸೇವಾ ಕ್ಷೇತ್ರದಲ್ಲಿ ದಂತ ವೈದ್ಯಕೀಯ ವಿಭಾಗವು ಮಹತ್ತರ ಸ್ಥಾನವನ್ನು ಹೊಂದಿದ್ದು, ಇಲ್ಲಿರುವ ವಿಪುಲ ಅವಕಾಶಗಳನ್ನು ಸಮರ್ಪಕವಾಗಿ ದಂತ ವೈದ್ಯರು ಬಳಸಿಕೊಳ್ಳಬೇಕು ಎಂದು ಇಂಗ್ಲೆಂಡ್ನ ಯುನಿವರ್ಸಿಟಿ ಆಫ್ ಪೋರ್ಟ್ಸ್ಮೌತ್ ಡೆಂಟಲ್ ಆಕಾಡೆಮಿಯ ನಿರ್ದೇಶಕ ಪ್ರೊ| ಕ್ರಿಸ್ ಲೂಕಾ ಅವರು ಹೇಳಿದರು.
ನಗರದ ಡಾ| ಟಿ.ಎಂ.ಎ. ಪೈ ಇಂಟರ್ನ್ಯಾಶನಲ್ ಕನ್ವೆನ್ಶನ್ ಸೆಂಟರ್ನಲ್ಲಿ ಶುಕ್ರವಾರ ಜರಗಿದ ಮಂಗಳೂರಿನ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ (ಎಂಕೋಡ್ಸ್) ವಾರ್ಷಿಕ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರದಲ್ಲೂ ಉನ್ನತ ಸಾಧನೆಗಳಿಗೆ ಅವಕಾಶಗಳಿವೆ. ಅದೇ ರೀತಿ ದಂತ ವೈದ್ಯಕೀಯ ಕ್ಷೇತ್ರದಲ್ಲೂ ಕೂಡ ಇವೆ. ಪ್ರತಿ ರೋಗಿಗೂ ನೀಡುವ ಚಿಕಿತ್ಸೆ ಹೊಸ ಹೊಸ ವಿಚಾರಗಳನ್ನು ತಿಳಿಸಿಕೊಡುತ್ತದೆ ಎಂದರು. ಜ್ಞಾನಕ್ಕೆ ಮಿತಿ ಎಂಬುದಿಲ್ಲ. ಪ್ರಸ್ತುತ ಕಾಲಘಟ್ಟದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಆವಿಷ್ಕಾರಗಳು, ಸಂಶೋಧನೆಗಳು ತ್ವರಿತಗತಿಯಲ್ಲಿ ಆಗುತ್ತಿವೆ. ಆದುದರಿಂದ ಜ್ಞಾನದ ಉನ್ನತೀಕರಣ ಅತೀ ಅಗತ್ಯ. ಈ ನಿಟ್ಟಿನಲ್ಲೂ ದಂತ ವೈದ್ಯಕೀಯ ಪದವೀಧರರು ಗಮನ ಹರಿಸಬೇಕು ಎಂದವರು ಹೇಳಿದರು.
ಮಾಹೆ ಸಹ ಉಪಕುಲಪತಿ (ಮಂಗಳೂರು ಕ್ಯಾಂಪಸ್) ಡಾ| ವಿ. ಸುರೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಹಉಪಕುಲಪತಿ ಡಾ| ಪೂರ್ಣಿಮಾ ಬಾಳಿಗ ಅವರು ಕಾಲೇಜಿನ ಮ್ಯಾಗಸಿನ್ ಬಿಡುಗಡೆಗೊಳಿಸಿದರು. ಮಂಗಳೂರಿನ ಮಣಿಪಾಲ ದಂತ ವೈದ್ಯಕೀಯ ಕಾಲೇಜಿನ ಡೀನ್ ಡಾ| ದಿಲೀಪ್ ನಾೖಕ್ ಕಾಲೇಜಿನ ಸಾಧನೆಗಳನ್ನು ವಿವರಿಸಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಅಸೋಸಿಯೇಟೆಡ್ ಡೀನ್ ಡಾ| ಆಶಿತಾ ಉಪ್ಪೂರು ಸ್ವಾಗತಿಸಿದರು. ಅಸೋಸಿಯೇಟೆಡ್ ಡೀನ್ ಡಾ| ಪ್ರೇಮಲತಾ ಶೆಟ್ಟಿ, ವಿದ್ಯಾರ್ಥಿ ನಾಯಕ ಆಯನ್ ಉಪಸ್ಥಿತರಿದ್ದರು. ಡಾ| ಆರತಿ ರಾವ್ ಮುಖ್ಯಅತಿಥಿಯನ್ನು ಪರಿಚಯಿಸಿದರು. ಡಾ| ನಂದಿತಾ ಹಾಗೂ ಡಾ| ಕಾರ್ತಿಕ್ ಶೆಟ್ಟಿ ನಿರೂಪಿಸಿದರು.
ವಿಶ್ವ ಮನ್ನಣೆ
ಮಣಿಪಾಲ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿವೆ. ಮಣಿಪಾಲ ದಂತ ವೈದ್ಯಕೀಯ ಕಾಲೇಜುಗಳು ಪ್ರತಿಷ್ಠಿತ ದಂತ ವೈದ್ಯಕೀಯ ಸಂಸ್ಥೆಗಳಾಗಿ ಮನ್ನಣೆಗೆ ಪಾತ್ರವಾಗಿವೆ. ಅತ್ಯಾಧುನಿಕ ಸೌಲಭ್ಯಗಳು, ಉತ್ತಮ ಬೋಧಕ ವರ್ಗ ಇಲ್ಲಿದೆ ಎಂದು ಪ್ರೊ| ಕ್ರಿಸ್ ಲೂಕಾ ಶ್ಲಾಘಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್