ತಿಂಗಳು ಎಂಟು ಕಳೆದರೂ ಚುನಾಯಿತ ಆಡಳಿತವಿಲ್ಲ

ಪುತ್ತೂರು: ಅಭಿವೃದ್ಧಿ ಕೆಲಸ-ಕಾರ್ಯಗಳಿಗೆ ತೊಡಕು

Team Udayavani, May 4, 2019, 5:00 AM IST

30

ಪುತ್ತೂರು: ನಗರ ಸ್ಥಳೀಯ ಸಂಸ್ಥೆಗಳ ದ್ವಿತೀಯ ಹಂತದ ಚುನಾವಣೆಗೆ ದಿನ ನಿಗದಿಯಾಗಿದೆ. ಆದರೆ ಇಲ್ಲಿ 8 ತಿಂಗಳ ಹಿಂದೆ ಚುನಾವಣೆ ನಡೆದ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಇನ್ನೂ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬಂದಿಲ್ಲ.

ರಾಜ್ಯದಲ್ಲಿ 2018ರ ಆ. 31ರಂದು ನಗರ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ನಡೆದಿತ್ತು. ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಂಡು 8 ತಿಂಗಳು ಕಳೆದರೂ ಇನ್ನೂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಜನಪ್ರತಿನಿಧಿಗಳ ಆಡಳಿತ ರಚನೆಯಾಗದೇ ಇರುವ ಮೂಲಕ ಜನರ ಆಯ್ಕೆಯ ಆಡಳಿತಕ್ಕೆ ಕಾಲ ಕೂಡಿ ಬಂದಿಲ್ಲ. ಅನಿವಾರ್ಯವಾಗಿ ನಗರದ ಜನರು ಅಧಿಕಾರಿಗಳ ಆಡಳಿತದಲ್ಲೇ ಕಾಲ ಕಳೆಯಬೇಕಾಗಿದೆ. ಇದು ಅಭಿವೃದ್ಧಿ ಕೆಲಸಗಳಿಗೂ ತೊಡಕಾಗಿ ಪರಿಣಮಿಸಿದೆ.

ಬಿಜೆಪಿಗೆ ಭರ್ಜರಿ ಬಹುಮತ
ಪುತ್ತೂರು ನಗರಸಭೆಯ 31 ಸ್ಥಾನಗಳ ಪೈಕಿ ಬಿಜೆಪಿ 25 ವಾರ್ಡ್‌ಗಳನ್ನು ಗೆದ್ದು ಭರ್ಜರಿ ಬಹುಮತ ಪಡೆದಿತ್ತು. ಕಾಂಗ್ರೆಸ್‌ 5 ಮತ್ತು ಎಸ್‌ಡಿಪಿಐ 1 ಸ್ಥಾನ ಸಂಪಾದಿಸಿತ್ತು. ಹಿಂದಿನ 5 ವರ್ಷಗಳಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ ಚುನಾವಣೆಯ ಬಳಿಕ ಅಧಿಕಾರ ಕಳೆದುಕೊಂಡಿತ್ತು. ಸದ್ಯ ಗೆದ್ದರೂ ಆಡಳಿತ ತೆಕ್ಕೆಯನ್ನು ಸಂಪೂರ್ಣ ಬಾಚಿಕೊಳ್ಳಲು ಸಾಧ್ಯವಾಗದ ಸ್ಥಿತಿ ಬಿಜೆಪಿಯದ್ದು.

ಆಡಳಿತಾಧಿಕಾರಿ ಕಾರ್ಯ
ನಗರಸಭೆಗಳಲ್ಲಿ ಜಿಲ್ಲಾಧಿಕಾರಿ ಆಡಳಿತಾಧಿಕಾರಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಪುರಸಭೆಗಳಲ್ಲಿ ಸಹಾಯಕ ಕಮಿಷನರ್‌ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಆಡಳಿತದ ಜತೆಗೆ ವಾರ್ಷಿಕ ಮುಂಗಡಪತ್ರ ಮಂಡನೆಯೂ ಅಧಿಕಾರಿಗಳ ನೇತೃತ್ವದಲ್ಲೇ ನಡೆದಿದೆ. ಜನಪ್ರತಿನಿಧಿ ಆಡಳಿತ ಇನ್ನೂ ಬಾರದೇ ಇರುವ ಕುರಿತು ಸಾರ್ವಜನಿಕ ವಲಯದಿಂದ ಅಸಮಾಧಾನ ವ್ಯಕ್ತವಾಗುತ್ತಿದೆ. ಪ್ರಸ್ತುತ ಮೇ 29ರಂದು ಎರಡನೇ ಹಂತದ ನಗರ ಸ್ಥಳೀಯಾಡಳಿತದ ಚುನಾವಣೆ ನಡೆಯಲಿದ್ದು, ಈ ಚುನಾವಣೆ ಮುಗಿದ ಮೇಲೆ ಎರಡೂ ಹಂತಕ್ಕೂಜನಪ್ರತಿನಿಧಿ ಆಡಳಿತ ಬರಬಹುದು ಎನ್ನುವ ನಿರೀಕ್ಷೆ ಇದೆ.

ಕಾರಣ ಏನು ?
ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿ ಮೀಸಲಾತಿ ಪಟ್ಟಿಯೂ ಘೋಷಣೆಯಾಗಿತ್ತು. ಅದರಂತೆ ಪುತ್ತೂರಿನಲ್ಲಿ ಅಧ್ಯಕ್ಷತೆ ಹಿಂದುಳಿದ ವರ್ಗ 2ಎ, ಉಪಾಧ್ಯಕ್ಷತೆಯು ಪರಿಶಿಷ್ಟ ಪಂಗಡ ಮಹಿಳೆಗೆ ನಿಗದಿಯಾಗಿತ್ತು. ಬೆಳ್ತಂಗಡಿಯಲ್ಲೂ ಮೀಸಲಾತಿ ಪಟ್ಟಿ ಪ್ರಕಟವಾಗಿತ್ತು. ಬಂಟ್ವಾಳದಲ್ಲಿ ಅಧ್ಯಕ್ಷತೆ ಮತ್ತು ಉಪಾಧ್ಯಕ್ಷತೆ ಮೀಸಲಾತಿ ಎರಡು ಬಾರಿ ಪ್ರಕಟವಾದ ಕಾರಣ ವಿವಾದವೂ ಉಂಟಾಗಿತ್ತು. ಇದೇ ಮೀಸಲು ವಿಚಾರದಲ್ಲಿ ಅಸಮಾಧಾನ ವ್ಯಕ್ತವಾಗಿ ಪ್ರಕರಣ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ ಕಾರಣ ಆಡಳಿತ ವ್ಯವಸ್ಥೆ ಜಾರಿಗೆ ಬಂದಿಲ್ಲ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.