Mangaluru ಸೆಂಟ್ರಲ್‌ಗೆ ರೈಲುಗಳ ವಿಸ್ತರಣೆ ಇಲ್ಲ

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮನವಿಗೆ ದಕ್ಷಿಣ ರೈಲ್ವೇ ಉತ್ತರ

Team Udayavani, Jan 2, 2024, 12:58 AM IST

manMangaluru ಸೆಂಟ್ರಲ್‌ಗೆ ರೈಲುಗಳ ವಿಸ್ತರಣೆ ಇಲ್ಲ

ಮಂಗಳೂರು: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ಪ್ಲಾಟ್‌ಫಾರಂಗಳ ನಿರ್ಮಾಣದ ಹೊರತಾಗಿಯೂ ಬಹುಬೇಡಿಕೆಯ ರೈಲುಗಳನ್ನು ಸೆಂಟ್ರಲ್‌ಗೆ ವಿಸ್ತರಿಸುವ ಪ್ರಸ್ತಾವವನ್ನು ದಕ್ಷಿಣ ರೈಲ್ವೇ ತಿರಸ್ಕರಿಸಿದೆ.

ನಂ. 12133/134 ಮುಂಬಯಿ ಸಿಎಸ್‌ಎಂಟಿ-ಮಂಗಳೂರು ಜಂಕ್ಷನ್‌-ಮುಂಬಯಿ ಸಿಎಸ್‌ಎಂಟಿ ಸೂಪರ್‌ಫಾಸ್ಟ್‌ ರೈಲು, ನಂ.16575/576 ಯಶವಂತ ಪುರ-ಮಂಗಳೂರು ಜಂಕ್ಷನ್‌-ಯಶವಂತಪುರ ಟ್ರೈ ವೀಕ್ಲಿ ಎಕ್ಸ್‌ಪ್ರೆಸ್‌, ನಂ.16539/540 ಯಶವಂತಪುರ -ಮಂಗಳೂರು ಜಂಕ್ಷನ್‌-ಯಶವಂತಪುರ ಗೋಮಟೇಶ್ವರ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ಮತ್ತು ನಂ 07337/338 ವಿಜಯಪುರ -ಮಂಗಳೂರು ಜಂಕ್ಷನ್‌-ವಿಜಯಪುರ ಡೈಲಿ ಎಕ್ಸ್‌ಪ್ರೆಸ್‌ ರೈಲನ್ನು ಮಂಗಳೂರಿಗೆ ವಿಸ್ತರಿಸುವಂತೆ ಪ್ರಯಾಣಿಕ ಸಂಘಟನೆಗಳು, ಪ್ರಯಾಣಿಕರು ಮತ್ತು ಸಾರ್ವಜನಿಕರು ಕಳೆದ ಹಲವು ಸಮಯದಿಂದ ಆಗ್ರಹಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸೆಂಟ್ರಲ್‌ನಲ್ಲಿ 4-5ನೇ ಪ್ಲಾಟ್‌ಫಾರಂಗಳೂ ನಿರ್ಮಾಣವಾಗಿವೆ. ಇದು ಸಂಘಟನೆಗಳಿಗೆ ಹೊಸ ಆಶಾಭಾವನೆ ಮೂಡಿಸಿತ್ತು. ಆದರೆ ಇದಕ್ಕೆ ದಕ್ಷಿಣ ರೈಲ್ವೇ ತಣ್ಣೀರು ಎರಚಿದೆ.

ರೈಲುಗಳ ವಿಸ್ತರಣೆಗೆ ಸಂಬಂಧಿಸಿದಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ಮಾಡಿದ್ದ ಮನವಿಗೆ ದಕ್ಷಿಣ ರೈಲ್ವೇ ಜನರಲ್‌ ಮ್ಯಾನೇಜರ್‌ ಆರ್‌.ಎನ್‌. ಸಿಂಗ್‌ ಉತ್ತರ ಬರೆದಿದ್ದು, ಪ್ಲಾಟ್‌ಫಾರಂ ಮತ್ತು ಖಾಲಿ ಲೈನ್‌ಗಳ ಕೊರತೆಯ ಕಾರಣ ನೀಡಿ ತಿರಸ್ಕರಿಸಿದ್ದಾರೆ. ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮತ್ತು ಯಶವಂತಪುರ- ಮಂಗಳೂರು ಜಂಕ್ಷನ್‌ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲುಗಳು ಸಂಜೆ 4.40ಕ್ಕೆ ಜಂಕ್ಷನ್‌ಗೆ ಆಗಮಿಸುತ್ತವೆ. ಇದನ್ನು ಸೆಂಟ್ರಲ್‌ಗೆ ವಿಸ್ತರಿಸುವುದರಿಂದ ಸಂಜೆಯ ಒತ್ತಡ ಹೆಚ್ಚಾಗುತ್ತದೆ. ಜತೆಗೆ ವಿವಿಧ ರೈಲುಗಳ ಆಗಮನ ನಿರ್ಗಮನ, ಕ್ರಾಸಿಂಗ್‌ ಮೇಲೆ ಪರಿಣಾಮ, ಪ್ಲಾಟ್‌ಫಾರಂ ಕೊರತೆ ಮೊದಲಾದ ಸಮಸ್ಯೆಗಳು ತಲೆದೋರಲಿವೆ.

ವಿಜಯಪುರ ಎಕ್ಸ್‌ಪ್ರೆಸ್‌ ಮತ್ತು ಸಿಎಸ್‌ಟಿ ಸೂಪರ್‌ಫಾಸ್ಟ್‌ ರೈಲುಗಳಿಗೆ ಮಂಗಳೂರು ಜಂಕ್ಷನ್‌ನಲ್ಲಿ ಕ್ರಮವಾಗಿ 2 ಗಂಟೆ 10 ನಿಮಿಷ ಮತ್ತು 55 ನಿಮಿಷ ಮಾತ್ರ ವಿರಾಮದ ಅವಧಿಯಿದೆ. ಈ ಕಿರು ಸಮಯದಲ್ಲಿ ರೈಲನ್ನು ಸೆಂಟ್ರಲ್‌ಗೆ ವಿಸ್ತರಿಸಲು ಅಸಾಧ್ಯ ಎಂದು ಅವರು ಉತ್ತರದಲ್ಲಿ ವಿವರಿಸಿದ್ದಾರೆ.

ದಕ್ಷಿಣ ರೈಲ್ವೇಯಿಂದ ನಕಾರಾತ್ಮಕ ಧೋರಣೆ
ದಕ್ಷಿಣ ರೈಲ್ವೇ ಪ್ರತೀ ಬಾರಿಯೂ ಮಂಗಳೂರಿಗೆ ಸಂಬಂಧಿಸಿದಂತೆ ನಕಾರಾತ್ಮಕ ಧೋರಣೆಯನ್ನೇ ಅನುಸರಿಸುತ್ತಿದೆ. ಹೆಚ್ಚವರಿ ರೈಲುಗಳ ಓಡಾಟಕ್ಕೆಂದೇ ಸೆಂಟ್ರಲ್‌ನಲ್ಲಿ ಹೊಸ ಪ್ಲಾಟ್‌ಫಾರಂಗಳು ನಿರ್ಮಾಣ ಮಾಡಲಾಗಿದೆ. ನೈಋತ್ಯ ರೈಲ್ವೇ ವಿಜಯಪುರ ರೈಲನ್ನು 1.30ಕ್ಕೆ ಮಂಗಳೂರು ತಲುಪುವಂತೆ ಸಿದ್ಧತೆ ನಡೆಸಿದೆ. ಇದರಿಂದ ಸೆಂಟ್ರಲ್‌ಗೆ ವಿಸ್ತರಿಸಲು ಸಾಧ್ಯವಾಗಲಿದೆ. ಸಿಎಸ್‌ಟಿ ಮುಂಬಯಿ ಎಕ್ಸ್‌ಪ್ರೆಸ್‌ ರೈಲು ಪ್ರತೀ ಬಾರಿಯೂ ವಿಳಂಬವಾಗಿ ಸಂಚರಿಸುತ್ತಿದ್ದು, ವೇಳಾಪಟ್ಟಿಯನ್ನು ಸಮರ್ಪಕವಾಗಿ ಬದಲಾಯಿಸಬೇಕಾದ ಅಗತ್ಯವಿದೆ ಎಂದು ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ. ಹನುಮಂತ ಕಾಮತ್‌ ಅಭಿಪ್ರಾಯಪಟ್ಟಿದ್ದಾರೆ.

ಅಮೃತ್‌ ಭಾರತ್‌ ಯೋಜನೆ
ಕಾಸರಗೋಡು ರೈಲು ನಿಲ್ದಾಣ ಆಯ್ಕೆ
ಕಾಸರಗೋಡು: ಕಾಸರಗೋಡು ಸಹಿತ ಕೇರಳದ 30 ರೈಲು ನಿಲ್ದಾಣಗಳನ್ನು ಕೇಂದ್ರ ಸರಕಾರದ ಹೊಸ ಅಮೃತ್‌ ಭಾರತ್‌ ಯೋಜನೆಯಲ್ಲಿ ಸೇರ್ಪಡೆಗೊಳಿಸಲಾಗಿದೆ.

ಪ್ರತೀ ನಿಲ್ದಾಣವನ್ನು 15 ಕೋಟಿ ರೂ. ವ್ಯಯಿಸಿ ಮೇಲ್ದರ್ಜೆಗೇರಿಸಲಾಗುವುದು. ಕೇರಳ ಸಹಿತ ದೇಶದಲ್ಲಿ 1,309 ನಿಲ್ದಾಣಗಳನ್ನು ಅಮೃತ್‌ ಭಾರತ್‌ ಯೋಜನೆಯಲ್ಲಿ ಕೇಂದ್ರ ರೈಲ್ವೇ ಇಲಾಖೆ ಸೇರಿಸಿದೆ. ಈ ಪೈಕಿ 509 ನಿಲ್ದಾಣಗಳ ನವೀಕರಣ ಶೀಘ್ರ ಆರಂಭಗೊಳ್ಳಲಿದೆ. ಹಳೆ ಕಟ್ಟಡಗಳನ್ನು ಕೆಡವಿ ಹೊಸ ಕಟ್ಟಡ ನಿರ್ಮಿಸುವುದು, ಎಕ್ಸಲೇಟರ್‌, ಮೇಲ್ಸೇತುವೆ, ಲಿಫ್ಟ್‌, ಪಾರ್ಕಿಂಗ್‌, ಪ್ಲಾಟ್‌ಫಾರಂ, ವಿಶ್ರಾಂತಿ ಕೊಠಡಿ ಇತ್ಯಾದಿಗಳನ್ನು ಅಭಿವೃದ್ಧಿಪಡಿಸುವುದು, ಸಿಸಿ
ಕೆಮರಾ, ವೈಫೈ ಸೌಕರ್ಯಗಳನ್ನು ಕಲ್ಪಿಸುವುದು ಇದರಲ್ಲಿ ಸೇರಿದೆ.

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.