ಪ್ರತಿ ವರ್ಷದ ಸಮಸ್ಯೆಗೆ ಶಾಶ್ವತ ಪರಿಹಾರವಿಲ್ಲ
ದೊಡ್ಡ ಗಾತ್ರದ ಹೊಂಡ-ಗುಂಡಿಗಳಿಂದ ಸಂಚಾರಕ್ಕೆ ತೊಡಕು
Team Udayavani, Sep 23, 2019, 5:25 AM IST
ದರ್ಬೆ: ನಗರದ ಮುಖ್ಯ ರಸ್ತೆಯ ದರ್ಬೆ ಸರ್ಕಲ್ ಬಳಿ ಪ್ರತಿ ವರ್ಷದಂತೆ ಈ ಬಾರಿಯೂ ಎರಡು ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದ್ದು, ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ.
ಸುಳ್ಯ ಭಾಗದಿಂದ ಪುತ್ತೂರು ನಗರಕ್ಕೆ ಸಂಪರ್ಕಿಸುವ ದ್ವಿಪಥ ರಸ್ತೆಯ ಒಂದು ಭಾಗದಲ್ಲಿ ಎರಡು ದೊಡ್ಡ ಗಾತ್ರದ ಹೊಂಡಗಳು ನಿರ್ಮಾಣವಾಗಿವೆ. ಕಳೆದ ಎರಡು ವಾರಗಳ ಹಿಂದೆ ಈ ಹೊಂಡ ನಿರ್ಮಾಣ ವಾಗಿದ್ದರೂ ಯಾರೋ ಅಪಾಯ ವನ್ನು ಸೂಚಿಸಲು ಬ್ಯಾರಿಕೇಡ್ಗಳನ್ನು ತಂದಿರಿಸಿದ್ದು ಬಿಟ್ಟರೆ ದುರಸ್ತಿಗೆ ಕ್ರಮ ಕೈಗೊಂಡಿಲ್ಲ.
ಈ ಭಾಗದಲ್ಲಿ ಮೂರು ನಾಲ್ಕು ವರ್ಷಗಳಿಂದ ಮಳೆಗಾಲದಲ್ಲಿ ಪ್ರತಿ ಬಾರಿಯೂ ಹೊಂಡ ನಿರ್ಮಾಣವಾಗುತ್ತದೆ. ಸಾರ್ವಜನಿಕ ಮನವಿಯ ಬಳಿಕ ಸ್ಥಳೀಯಾಡಳಿತ ತಾತ್ಕಾಲಿಕ ದುರಸ್ತಿ ಮಾಡುತ್ತದೆ. ಮುಂದಿನ ವರ್ಷಕ್ಕೆ ಮತ್ತೆ ಅದೇ ಸಂಕಟ ಎದುರಾಗುತ್ತದೆ.
ಅಪಾಯವಿದೆ
ಎರಡೂ ಹೊಂಡಗಳಿಗೆ ಲಿಂಕ್ ಇರುವಂತೆ ಒಳಭಾಗದಲ್ಲಿ ದೊಡ್ಡ ಪ್ರಮಾಣದ ಕುಸಿತ ಉಂಟಾಗಿದೆ. ಘನ ವಾಹನಗಳೂ ಸಂಚರಿಸುವುದರಿಂದ ಈ ಕುಸಿತ ಅಧಿಕವಾಗುವ ಅಪಾಯವಿದೆ. ಪ್ರಸ್ತುತ ಬ್ಯಾರಿಕೇಡ್ ಅಳವಡಿಸಿ ರಸ್ತೆ ಕಿರಿದಾಗಿರುವುದರಿಂದ ವಾಹನಗಳ ದಟ್ಟಣೆ ಇರುವ ಸಂದರ್ಭ ಟ್ರಾಫಿಕ್ ಜಾಂ ಉಂಟಾಗುತ್ತಿದೆ.
ಶಾಶ್ವತ ಪರಿಹಾರ ಬೇಕು
ಇಲ್ಲಿ ರಸ್ತೆ ಹೊಂಡ ನಿರ್ಮಾಣವಾಗುವ ಸ್ಥಿತಿ ಪ್ರತಿ ವರ್ಷವೂ ಮುಂದುವರಿಯುತ್ತಿರುವ ಕಾರಣ ತಾತ್ಕಾಲಿಕ ದುರಸ್ತಿ ಮಾಡಿ ಹಣ ಪೋಲು ಮಾಡುವ ಬದಲು ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ವಲಯದಿಂದ ಆಗ್ರಹ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯಾಡಳಿತ ಚಿಂತನೆ ನಡೆಸಬೇಕಿದೆ ಮತ್ತು ತ್ವರಿತ ಕ್ರಮ ಕೈಗೊಳ್ಳಬೇಕಾಗಿದೆ.
ಶೀಘ್ರ ತೀರ್ಮಾನ
ರಸ್ತೆಯಲ್ಲಿ ದೊಡ್ಡ ಗಾತ್ರದ ಹೊಂಡಗಳು ಸೃಷ್ಟಿಯಾಗಿರುವುದನ್ನು ಗಮನಿಸಿದ್ದೇವೆ. ಶಾಶ್ವತ ಪರಿಹಾರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸ್ವಲ್ಪ ದೊಡ್ಡ ಅನುದಾನ ಬೇಕಾಗುತ್ತದೆ. ಈ ಕುರಿತು ಶೀಘ್ರ ನಗರಸಭೆಯಲ್ಲಿ ತೀರ್ಮಾನ ಕೈಗೊಂಡು ಟೆಂಡರ್ ಕರೆದು ಸರಿಪಡಿಸುತ್ತೇವೆ.
– ರೂಪಾ ಟಿ. ಶೆಟ್ಟಿ,
ಪೌರಾಯುಕ್ತರು, ನಗರಸಭೆ ಪುತ್ತೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು