ಹಾಲಿ ತಂಗುದಾಣಗಳಲ್ಲಿ ನಿಲ್ಲಲು ಆಗಲ್ಲ- ಕೂರಲು ಜಾಗವಿಲ್ಲ


Team Udayavani, Sep 29, 2018, 10:19 AM IST

29-sepctember-1.gif

ಸ್ಮಾರ್ಟ್‌ ಸಿಟಿ ಬಸ್‌ ನಿಲ್ದಾಣಗಳಿಗೆ ಹೈಟೆಕ್‌ ಸೌಲಭ್ಯ!

ಮಹಾನಗರ: ಸ್ಮಾರ್ಟ್‌ಸಿಟಿ ಯೋಜನೆಯಡಿ ನಗರದ ವಿವಿಧೆಡೆ ಈಗ ಹೈಟೆಕ್‌ ಮಾದರಿಯ ಸ್ಮಾರ್ಟ್‌ ಬಸ್‌ ನಿಲ್ದಾಣಗಳ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಆದರೆ, ಈಗಿರುವ ಅನೇಕ ಬಸ್‌ ನಿಲ್ದಾಣಗಳ ನಿರ್ವಹಣೆಯಿಲ್ಲದೆಗಳ ಸ್ಥಿತಿ ಅಧೋಗತಿಯಾಗಿದ್ದು, ಎಷ್ಟೋ ಕಡೆಗಳಲ್ಲಿ ಪ್ರಯಾಣಿಕರು ಸೂಕ್ತ ಬಸ್‌ ಶೆಲ್ಟರ್‌ ಇಲ್ಲದೆ ಪರದಾಡುತ್ತಿದ್ದಾರೆ.

ಹೀಗಿರುವಾಗ, ಸರಕಾರವು ಲಕ್ಷಾಂತರ ರೂ. ಖರ್ಚು ಮಾಡಿ ಎಸಿಯಂಥಹ ಸುಖಾಸೀನ ಹೈಟೆಕ್‌ ಸೌಲಭ್ಯ ಹೊಂದಿರುವ ಸ್ಮಾರ್ಟ್‌ ಬಸ್‌ ನಿಲ್ದಾಣಗಳನ್ನು ನಿರ್ಮಿಸುತ್ತಿರುವುದರ ಔಚಿತ್ಯವಾದರೂ ಏನು ಎಂಬ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಮೂಡಿದ್ದು, ಪಾಲಿಕೆಯ ಈ ಹೈಟೆಕ್‌ ಬಸ್‌ ನಿಲ್ದಾಣಗಳ ನಿರ್ಮಾಣಕ್ಕೆ ವಿಪಕ್ಷದವರು ಹಾಗೂ ನಗರವಾಸಿಗಳಿಂದ ಅಪಸ್ವರ ಎದ್ದಿದೆ.

ನಗರದ ಅನೇಕ ಕಡೆಗಳಲ್ಲಿ ಈಗಿರುವ ಬಸ್‌ ನಿಲ್ದಾಣಕ್ಕೆ ಹಾಸಿರುವ ಶೀಟ್‌ಗಳು ತುಕ್ಕು ಹಿಡಿದಿದ್ದು, ಕೆಲವೆಡೆ ತುಂಡಾಗಿವೆ. ಇದರಿಂದ ಮಳೆಗಾಲ ಬರುವಾಗ ಪ್ರಯಾಣಿಕರು ಕೊಡೆ ಹಿಡಿದು ನಿಲ್ಲಬೇಕಾದ ಸ್ಥಿತಿ ಇದೆ. ರಾತ್ರಿ ವೇಳೆ ಕೆಲವು ನಿಲ್ದಾಣಗಳಲ್ಲಿ ವಿದ್ಯುತ್‌ ದೀಪ ಉರಿಯುವುದಿಲ್ಲ. ಇದರಿಂದಾಗಿ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ. 

ಮೂರು ಶ್ರೇಣಿಗಳಲ್ಲಿ ನಿರ್ಮಾಣ
ನಗರದ ಕಾವೂರು, ಮಣ್ಣಗುಡ್ಡ ಸೇರಿದಂತೆ ಅನೇಕ ಕಡೆಗಳಲ್ಲಿ ಸ್ಮಾಟ್‌ ಬಸ್‌ ನಿಲ್ದಾಣದ ಕಾಮಗಾರಿ ಆರಂಭವಾಗಿದೆ. ‘ಎ’, ‘ಬಿ’ ಹಾಗೂ ‘ಸಿ’ ಶ್ರೇಣಿಗಳಲ್ಲಿ ತಂಗುದಾಣ ನಿರ್ಮಿಸಲು ಯೋಚಿಸಲಾಗಿದೆ. ‘ಎ’ ಮಾದರಿಯ ಬಸ್‌ ನಿಲ್ದಾಣಗಳು 24 ಲಕ್ಷಗಳಲ್ಲಿ ‘ಬಿ’ ಮತ್ತು ‘ಸಿ’ ಮಾದರಿಯ ಬಸ್‌ ನಿಲ್ದಾಣಗಳು 12 ಲಕ್ಷ ರೂ.ಗಳಲ್ಲಿ ನಿರ್ಮಾಣವಾಗಲಿದೆ. ಕೆಲವೊಂದು ಪ್ರದೇಶಗಳಲ್ಲಿ ಈಗಿರುವ ಬಸ್‌ ನಿಲ್ದಾಣದ ಸ್ಥಳಾವಕಾಶವನ್ನು ಪರಿಗಣಿಸಿ ಬಸ್‌ತಂಗುದಾಣ ನಿರ್ಮಾಣ ಆಗಲಿದೆ.

‘ಎ’ ಮತ್ತು ‘ಬಿ’ ಶ್ರೇಣಿಯ ಬಸ್‌ ತಂಗುದಾಣವು 7.5 ಮೀ. ಉದ್ದ ಹಾಗೂ 2.5 ಮೀ. ಅಗಲವಿರಲಿದ್ದು, ‘ಸಿ’ ಶ್ರೇಣಿ ಬಸ್‌ ನಿಲ್ದಾಣ 6 ಮೀ. ಉದ್ದ ಹಾಗೂ 2.2 ಮೀ ಅಗಲವಿರಲಿದೆ. ಸ್ಮಾರ್ಟ್‌ ಬಸ್‌ ನಿಲ್ದಾಣಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳು ದೊರಕಲಿದ್ದು, ಸಿ.ಸಿ. ಕೆಮರಾ, ರಿಯಲ್‌ ಟೈಮರ್‌ ಬಸ್‌ ಟ್ರ್ಯಾಕಿಂಗ್‌ ಸಿಸ್ಟಮ್‌, ಎಲ್‌ ಇಡಿ ಡಿಸ್‌ಪ್ಲೇ, ಜಾಹಿರಾತು ಪ್ಯಾನಲ್‌, ಇ-ಟಾಯ್ಲೆಟ್‌, ಅಟೋಮ್ಯಾಟಿಕ್‌ ಲೈಟಿಂಗ್‌ ಸಿಸ್ಟಮ್‌, 225 ಲೀ. ಸಾಮರ್ಥ್ಯದ ನೀರಿನ ಟ್ಯಾಂಕ್‌, ಎಕ್ಸಾಸ್ಟ್‌ ಪ್ಯಾನ್‌ ಮುಂತಾದ ಸೌಲಭ್ಯಗಳು ಇರಲಿದೆ.

ಬಸ್‌ ನಿಲಾಣವೇ ಇಲ್ಲ .. ಬಸ್‌ ನಿಲ್ಲುತ್ತೆ 
ನಗರದ ಪಿವಿಎಸ್‌ ಸರ್ಕಲ್‌ ಬಳಿ, ಬಂಟ್ಸ್‌ ಹಾಸ್ಟೆಲ್‌, ಪಂಪ್‌ ವೆಲ್‌, ಕಂಕನಾಡಿ, ಲಾಲ್‌ಬಾಗ್‌, ಪಡೀಲ್‌, ಬಲ್ಲಾಳ್‌ಬಾಗ್‌, ಬೆಸೆಂಟ್‌ ಕಾಲೇಜು, ಹಂಪನಕಟ್ಟೆ, ಮಿಲಾಗ್ರಿಸ್‌, ಬಂಟ್ಸ್‌ ಹಾಸ್ಟೆಲ್‌ ನಿಂದ ಜ್ಯೋತಿ ವೃತ್ತ ಮಾರ್ಗ, ಆ್ಯಗ್ನೆಸ್‌ ಕಾಲೇಜು ಬಳಿ ಸೇರಿದಂತೆ ನಗರದ ಇನ್ನಿತರ ಪ್ರದೇಶಗಳಲ್ಲಿ ಬಸ್‌ ನಿಲ್ಲಿಸಲಾಗುತ್ತಿದೆ. ಆದರೆ ಆ ಜಾಗದಲ್ಲಿ ಬಸ್‌ ನಿಲ್ದಾಣವಿಲ್ಲ. ಕೆಲವೆಡೆ ನಿಲ್ದಾಣವಿಲ್ಲದರೂ ಬಸ್‌ ನಿಲ್ಲಿಸುವುದಿಲ್ಲ.

ಮೂಲ ಸೌಕರ್ಯವಿಲ್ಲ
ನಗರದ ಕೆಲವು ಬಸ್‌ ನಿಲ್ದಾಣಗಳಲ್ಲಿ ಮೂಲ ಸೌಕರ್ಯವಿಲ್ಲ. ಸ್ಮಾರ್ಟ್‌ ಬಸ್‌ ನಿಲ್ದಾಣ ನಿರ್ಮಾಣಕ್ಕೂ ಮುನ್ನ ಪಾಲಿಕೆ ಈ ಬಗ್ಗೆ ಗಮನಹರಿಸಬೇಕಿತ್ತು. ಸ್ಮಾರ್ಟ್‌ ಬಸ್‌ ತಂಗುದಾಣದ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ. ಈ ಬಗ್ಗೆ ಪಾಲಿಕೆ ಸಭೆಯಲ್ಲಿಯೂ ಚರ್ಚಿಸುತ್ತೇನೆ.
– ಪ್ರೇಮಾನಂದ ಶೆಟ್ಟಿ,
ಮನಪಾ ವಿಪಕ್ಷ ನಾಯಕ

ಸೌಕರ್ಯಕ್ಕೆ ಆದ್ಯತೆ
ನಗರದ ಕೆಲವು ಪ್ರದೇಶದ ಬಸ್‌ ನಿಲ್ದಾಣಗಳಲ್ಲಿ ಮೂಲ ಸೌಕರ್ಯದ ಕೊರತೆಯಿದೆ. ಈ ಬಗ್ಗೆ ಪಾಲಿಕೆ ಗಮನಕ್ಕೆ ಬಂದಿದ್ದು, ಅಂತಹ ಬಸ್‌ ನಿಲ್ದಾಣಗಳನ್ನು ಗುರುತಿಸಿ, ಸೌಲಭ್ಯ ಕಲ್ಪಿಸಲಾಗುವುದು.
– ಭಾಸ್ಕರ್‌ ಕೆ.,
ಪಾಲಿಕೆ ಮೇಯರ್‌

ಬಸ್‌ ಬೇ ಅಗತ್ಯ
ಸ್ಮಾರ್ಟ್‌ ಬಸ್‌ ನಿಲ್ದಾಣದ ಕಾಮಗಾರಿಗೂ ಮುನ್ನ ಬಸ್‌ ಬೇ ನಿರ್ಮಾಣ ಮಾಡಬೇಕಿತ್ತು. ಇದೀಗ ಕಾಮಗಾರಿ ಆರಂಭಗೊಂಡಿದ್ದು, ರಸ್ತೆಯ ಬದಿಗಳ ವರೆಗೆ ಬಸ್‌ ನಿಲ್ದಾಣ ಬರಲಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ.
– ಪ್ರದೀಪ್‌ ಕುಮಾರ್‌,
ಸಾರ್ವಜನಿಕರು, ಕೊಟ್ಟಾರ 

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.