ಕರೋಪಾಡಿ: ಮೊಬೈಲ್‌ ಸಿಗ್ನಲ್‌ ಇಲ್ಲ, ವಿದ್ಯುತ್‌ ಇಲ್ಲ


Team Udayavani, Jun 29, 2018, 2:55 AM IST

electricity-distribution-900.jpg

ಕರೋಪಾಡಿ: ಬಂಟ್ವಾಳ ತಾ|ನ ಕರೋಪಾಡಿ ಗ್ರಾಮ ದ್ವೀಪದಂತಾಗಿದೆ. ಕೇರಳ ಕರ್ನಾಟಕ ಗಡಿಭಾಗದಲ್ಲಿರುವ ತೀರಾ ಹಳ್ಳಿ ಪ್ರದೇಶವಾದ ಕರೋಪಾಡಿ ಗ್ರಾಮದಲ್ಲಿ ವಿದ್ಯುತ್‌ ಮಾಯವಾಗಿದೆ. ಮೊಬೈಲ್‌ ಟವರ್‌ ಸಿಗ್ನಲ್‌ ತೋರಿಸುತ್ತಿಲ್ಲ. ದೂರವಾಣಿ ಸಂಪರ್ಕವೇ ಇಲ್ಲ. ಪರಿಣಾಮವಾಗಿ ಈ ಭಾಗದ ಜನತೆ ನಾಡಿನ ಸಂಪರ್ಕವನ್ನೇ ಕಡಿದುಕೊಂಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಸಮಸ್ಯೆ ಅಂದೇ ಇತ್ತು
ಗ್ರಾಮದ ಪದ್ಯಾಣ, ಮುಗುಳಿ, ಪಾದೆ ಕಲ್ಲು ಮೊದಲಾದೆಡೆ ಬೇಸಗೆಯಲ್ಲಿಯೂ ವಿದ್ಯುತ್‌ ಕಣ್ಣಾಮುಚ್ಚಾಲೆ ಯಾಡುತ್ತಲೇ ಇತ್ತು. ಮಳೆಗಾಲ ಆರಂಭವಾದ ಬಳಿಕ ವಿದ್ಯುತ್‌ ಇಲ್ಲವೇ ಇಲ್ಲ. ನಿತ್ಯವೂ ಸೀಮೆಎಣ್ಣೆ ದೀಪವೇ ಬೆಳಕು ನೀಡುತ್ತ, ಜನತೆಯ ನೆನಪು 50 ವರ್ಷ ಹಿಂದಕ್ಕೆ ಓಡುವಂತಾಗಿದೆ. ಈ ಸಮಸ್ಯೆಗೆ ಸ್ಪಂದಿಸುವವರೇ ಇಲ್ಲ ಎನ್ನುವ ಈ ಭಾಗದ ನಾಗರಿಕರು ಗಡಿಭಾಗದಲ್ಲಿರುವ ನಮ್ಮನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಮೊಬೈಲ್‌ ಸಿಗ್ನಲ್‌ ಇಲ್ಲ
BSNL ಮೊಬೈಲ್‌ ಟವರ್‌ ಇದೆ. ಸಿಗ್ನಲ್‌ ಇಲ್ಲ. ಪರಿಣಾಮವಾಗಿ ಯಾರನ್ನೂ ಸಂಪರ್ಕಿಸಲಾಗುವುದಿಲ್ಲ. ಸ್ಥಿರ ದೂರವಾಣಿ ಸಂಪರ್ಕ ಸಮರ್ಪಕವಾಗಿರಲಿಲ್ಲ. ಅದೇ ಕಾರಣಕ್ಕೆ ಮೊಬೈಲ್‌ ಪಡೆದುಕೊಂಡ ಗ್ರಾಹಕರಿಗೆ ಅದಾವ ವ್ಯವಸ್ಥೆಯೂ ಇಲ್ಲದೇ ಅರಣ್ಯರೋದನ ಮಾಡುತ್ತಿದ್ದಾರೆ.

ಕನ್ಯಾನವೂ ಹೀಗೆಯೇ!
ಕನ್ಯಾನದಲ್ಲಿ ಪರಿಸ್ಥಿತಿ ಭಿನ್ನವಾಗಿಲ್ಲ. ಈ ಪರಿಸರದಲ್ಲಿ ಮಂಗಳವಾರ ಮಾಯವಾದ ವಿದ್ಯುತ್‌ ಬುಧವಾರ ಮಧ್ಯಾಹ್ನವೂ ಬಂದಿಲ್ಲ. ಇದು ದಿನನಿತ್ಯದ ಪರಿಸ್ಥಿತಿ. ಈ ಅವ್ಯವಸ್ಥೆಯನ್ನು ಹೋಗಲಾಡಿಸುವ ಕ್ರಮ ಅಧಿಕಾರಿಗಳಿಂದಾಗಲಿಲ್ಲ. ಬೇಸಗೆಯಲ್ಲೂ ಮಳೆಗಾಲದಲ್ಲೂ ಹಲವಾರು ಕಾರಣಗಳಿಂದ ವಿದ್ಯುತ್‌ ಇಲ್ಲ, ಫೋನ್‌ ಇಲ್ಲ. ಆದರೆ ತಿಂಗಳ ಬಾಡಿಗೆಯನ್ನು ಪಾವತಿಸುತ್ತಿರಬೇಕು. ವಿದ್ಯುತ್‌ ಅಥವಾ ಫೋನ್‌ ಸಂಪರ್ಕ ಸಿಗದೇ ಇದ್ದರೂ ಎರಡೂ ಇಲಾಖೆಗಳು ನಿಗದಿಪಡಿಸಿದ ಬಿಲ್ಲಿನಲ್ಲಿ ಯಾವ ರಿಯಾಯಿತಿಯನ್ನೂ ತೋರುವುದಿಲ್ಲ. ಗ್ರಾಹಕರ ಬಗ್ಗೆ ಕನಿಕರವನ್ನೇ ತೋರುವುದಿಲ್ಲ. ಈ ಹೀನಾಯ ಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

ಪ್ರತಿಭಟನೆಗೂ ನಾವು ಸಿದ್ಧ
ನಮ್ಮ ಸಮಸ್ಯೆಯನ್ನು ಪರಿಹರಿಸುವವರಿಲ್ಲದೇ ಹತಾಶರಾಗಿದ್ದೇವೆ. ಇಲಾಖೆಗಳು ತೀವ್ರ ನಿರಾಶಾದಾಯಕವಾಗಿ ಉತ್ತರಿಸುತ್ತಾರೆ. ಗಾಳಿ, ಮಳೆಗೆ ಹಾನಿಯಾಗುವುದುಂಟು. ಆದರೆ ಕಳೆದ ಕೆಲವು ತಿಂಗಳುಗಳಿಂದ ಈ ರೀತಿಯಲ್ಲಿ ಗ್ರಾಮೀಣ ಪ್ರದೇಶವನ್ನು ನಿರ್ಲಕ್ಷಿಸುತ್ತಿರುವುದು, ಕಡೆಗಣಿಸುವುದು ತೀವ್ರ ಖಂಡನೀಯ. ನಮಗೆ ನ್ಯಾಯ ಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆಗೂ ನಾವು ಸಿದ್ಧ.
– ಗಣಪತಿ ಭಟ್‌, ಶಿಕ್ಷಕರು

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.