ಕೊಂಕಣಿ ಸಾಹಿತ್ಯಕ್ಕೆ ಅನನ್ಯ ಕೊಡುಗೆ ನೀಡಿದ ಕ್ರೈಸ್ತರಿಗೆ ಪ್ರಾತಿನಿಧ್ಯವಿಲ್ಲ !

ಬ್ಯಾರಿ, ತುಳು ಅಕಾಡೆಮಿಗಳಲ್ಲೂ ಅಸಮಾಧಾನ

Team Udayavani, Oct 22, 2019, 2:58 AM IST

Udayavani Kannada Newspaper

ಮಂಗಳೂರು: ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ-ಸದಸ್ಯರ ನೇಮಕಾತಿ ವೇಳೆ ಕೊಂಕಣಿಯಲ್ಲಿ ಅತ್ಯಧಿಕ ಸಾಹಿತ್ಯ ರಚಿಸಿದ ಮತ್ತು ಕೊಂಕಣಿ ಭಾಷಿಕರು ಹೆಚ್ಚು ಸಂಖ್ಯೆಯಲ್ಲಿರುವ ಕೆಥೋಲಿಕ್‌ ಕ್ರೈಸ್ತ ಸಮುದಾಯವನ್ನು ಕಡೆಗಣಿಸಲಾಗಿದೆ ಎಂಬ ಅಸಮಾಧಾನ ವ್ಯಕ್ತವಾಗಿದೆ.

ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಈಗಾಗಲೇ ಈ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದು, ತಾರತಮ್ಯ ಸರಿಪಡಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
1994ರಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿ ರಚನೆಯಾದ ಬಳಿಕ 9 ಅವಧಿಗಳಲ್ಲಿಯೂ ಅಕಾಡೆಮಿಯಲ್ಲಿ ಕೊಂಕಣಿ ಕ್ರೈಸ್ತರ ಪ್ರಾತಿನಿಧ್ಯ ಇತ್ತು. ಅಕಾಡೆಮಿಯ ಮೊದಲ ಅಧ್ಯಕ್ಷ, ಖ್ಯಾತ ಕೊಂಕಣಿ ಸಾಹಿತಿ ವಿ.ಜೆ.ಪಿ. ಸಲ್ದಾನ್ಹಾ ಸೇರಿದಂತೆ ಇದುವರೆಗಿನ 10 ಅಧ್ಯಕ್ಷರಲ್ಲಿ ನಾಲ್ವರು ಕೆಥೋಲಿಕ್‌ ಸಮುದಾಯಕ್ಕೆ ಸೇರಿದವರು.

ಉತ್ತರದ ಕಾರವಾರದಿಂದ ದಕ್ಷಿಣದ ಕಾಸರಗೋಡು ತನಕದ ಕರಾವಳಿಯಲ್ಲಿ ಕೆಥೋಲಿಕ್‌ ಕೊಂಕಣಿ ಕ್ರೈಸ್ತರಿದ್ದಾರೆ. ರಾಜ್ಯದಲ್ಲಿ ಸುಮಾರು 12.5 ಲಕ್ಷ ಕೊಂಕಣಿ ಭಾಷಿಕರಿದ್ದು, ಕೆಥೋಲಿಕ್‌ ಕ್ರೈಸ್ತರೇ ಅಧಿಕ. ಕೊಂಕಣಿ ಸಾಹಿತ್ಯ ರಚನೆಯಲ್ಲಿಯೂ ಅವರದೇ ಮೇಲುಗೈ. ಮಂಗಳೂರು ಧರ್ಮ ಪ್ರಾಂತದ ಅಧಿಕೃತ ಭಾಷೆ ಕೊಂಕಣಿಯಾಗಿದ್ದು, ಎಲ್ಲ ಧಾರ್ಮಿಕ ವಿಧಿಗಳು ಅದರಲ್ಲಿಯೇ ನಡೆಯುತ್ತಿವೆ. ಧರ್ಮ ಪ್ರಾಂತದ ಆಡಳಿತದಡಿ ಇರುವ ಶಾಲೆಗಳಲ್ಲಿ ಕೊಂಕಣಿ ಕಲಿಕೆ ಇದೆ.

ಮರು ನೇಮಕ
ಇನ್ನೊಂದೆಡೆ ಈ ಹಿಂದೆ ಅಕಾಡೆಮಿ ಸದಸ್ಯರಾಗಿದ್ದವರನ್ನು ಮಾತ್ರವಲ್ಲದೆ ಅಧ್ಯಕ್ಷರಾಗಿದ್ದವರನ್ನೂ ಮತ್ತೆ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈಗ ನೇಮಕಗೊಂಡಿರುವ 11 ಮಂದಿಯಲ್ಲಿ ನಾರಾಯಣ ಖಾರ್ವಿ 2008-2011ಯಲ್ಲಿ ಅಧ್ಯಕ್ಷರಾಗಿದ್ದರು, ಅದಕ್ಕೂ ಮೊದಲು ಸದಸ್ಯರಾಗಿದ್ದರು. ಈಗ ಮೂರನೇ ಅವಧಿಗೆ ಸದಸ್ಯರಾಗಿದ್ದಾರೆ. ಚಿದಾನಂದ ಭಂಡಾರಿ ಮತ್ತು ವಸಂತ ಬಾಂದೇಕರ್‌ ಈ ಹಿಂದೆಯೂ ಸದಸ್ಯರಾಗಿದ್ದವರೇ.

ತುಳು ಅಕಾಡೆಮಿಯಲ್ಲಿಯೂ ಅಪಸ್ವರಗಳು ಎದ್ದಿವೆ. ತುಳು ಅಕಾಡೆಮಿಗೆ ನೇಮಕಗೊಂಡ ಇಬ್ಬರು ಸದಸ್ಯತ್ವದಿಂದ ಹೊರಗೆ ಹೋಗುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಬ್ಯಾರಿ ಅಕಾಡೆಮಿಯಲ್ಲಿಯೂ ಅಪಸ್ವರಗಳು ಎದ್ದಿವೆ. ಒಬ್ಬರು ಸದಸ್ಯತ್ವ ಸ್ವೀಕರಿಸುವುದಿಲ್ಲ ಎಂದು ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಇನ್ನಿಬ್ಬರು ತಾವು ಸಾಹಿತಿಗಳಲ್ಲ ಎಂದು ಹೇಳಿ ಸದಸ್ಯತ್ವ ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ.

ಕೊಂಕಣಿ ಭಾಷೆಯ ಏಳಿಗೆಗೆ ಕ್ರೈಸ್ತರ
ಕೊಡುಗೆ ಅನನ್ಯ. ಅಕಾಡೆಮಿಯ ಅಧ್ಯಕ್ಷರು ಮುಂದಿನ ದಿನಗಳಲ್ಲಿ ಕೊಂಕಣಿ ಭಾಷಿಕ ಕ್ರೈಸ್ತ ಸಮುದಾಯದ ಒಬ್ಬರನ್ನಾದರೂ ಸೇರ್ಪಡೆ ಮಾಡಬೇಕು. ಈ ಬಗ್ಗೆ ನೂತನ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ.
– ಕಾಸರಗೋಡು ಚಿನ್ನಾ, ಮಾಜಿ ಅಧ್ಯಕ್ಷರು, ಕೊಂಕಣಿ ಅಕಾಡೆಮಿ

ಕೊಂಕಣಿ ಭಾಷಿಕ ಕೈಸ್ತರು ಕೊಂಕಣಿ ಸಮಗ್ರ ಬೆಳವಣಿಗೆಗೆ ಅನನ್ಯ ಕೊಡುಗೆ ನೀಡಿದ್ದಾರೆ. ಈ ಸಮುದಾಯದ ಅವಗಣನೆ ಕೊಂಕಣಿಯ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಒಳ್ಳೆಯ ಕ್ರಮ ಅಲ್ಲ.
– ರೋಯ್‌ ಕ್ಯಾಸ್ತೆಲಿನೊ, ಮಾಜಿ ಅಧ್ಯಕ್ಷರು, ಕೊಂಕಣಿ ಅಕಾಡೆಮಿ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.