ಮಂದಾರ ಸಂತ್ರಸ್ತರ ಮರೆತುಬಿಟ್ಟ ಆಡಳಿತ ವ್ಯವಸ್ಥೆ!

ತ್ಯಾಜ್ಯರಾಶಿ ನಿರ್ವಹಣೆಯೂ ಇಲ್ಲ; ಪರಿಹಾರವೂ ಸಿಕ್ಕಿಲ್ಲ

Team Udayavani, Dec 17, 2019, 5:25 AM IST

1512MLR33

ಮಹಾನಗರ: ಪಚ್ಚನಾಡಿಯ ತ್ಯಾಜ್ಯರಾಶಿಯು ಜರಿದು ಮಂದಾರಬೈಲು ಪರಿಸರವನ್ನೇ ಆಹುತಿ ಪಡೆದು ತಿಂಗಳು ಐದು ಆಗುತ್ತಿದ್ದರೂ, ಇನ್ನೂ ನಿರ್ವಸಿತರಿಗೆ ಪರಿಹಾರ ಎಂಬುದು ಗಗನಕುಸುಮವಾಗಿದೆ.

ಪ್ರಾರಂಭದಲ್ಲಿ ಭಾರೀ ಆಸಕ್ತಿಯಿಂದ ಸ್ಪಂದಿಸಿದ ಜನಪ್ರತಿನಿಧಿಗಳು ಇದೀಗ ಮಂದಾರದ ಬವಣೆಯನ್ನು ಮರೆತು ಬಿಟ್ಟ ಪರಿಣಾಮ ನಿರ್ವಸಿತರು ಪರಿಹಾರಕ್ಕಾಗಿ ಗೋಗರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದೆಡೆ ತ್ಯಾಜ್ಯ ರಾಶಿಯ ನಿರ್ವಹಣೆ ಆಗಿಲ್ಲ; ಇನ್ನೊಂದೆಡೆ ನಿರ್ವಸಿತರಾಗಿರುವವರಿಗೆ ಪರಿಹಾರವೇ ದಕ್ಕಿಲ್ಲ. ಹೀಗಾಗಿ ಜನಪ್ರತಿನಿಧಿಗಳ, ಅಧಿಕಾರಿಗಳ ಭರವಸೆಯ ಮಾತು ಕಡತದಲ್ಲೇ ಬಾಕಿಯಾಗಿದೆ.

ಪರಿಹಾರ ಇನ್ನೂ ಸಿಕ್ಕಿಲ್ಲ
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ವೀರಪ್ಪ ಮೊಲಿ, ಹಾಲಿ ಆರೋಗ್ಯ ಸಚಿವ ಶ್ರೀರಾಮುಲು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಹಿತ ಅಗ್ರಗಣ್ಯ ರಾಜಕೀಯ ನೇತಾರರು ಪಚ್ಚನಾಡಿ-ಮಂದಾರದ ತ್ಯಾಜ್ಯ ವ್ಯಾಪಿಸಿದ ಪ್ರದೇಶಕ್ಕೆ ಭೇಟಿ ನೀಡಿದ್ದರೂ ಶಾಶ್ವತ ಪರಿಹಾರ ಇನ್ನೂ ಸಿಕ್ಕಿಲ್ಲ.

ಶಾಸಕರಾದ ಯು.ಟಿ. ಖಾದರ್‌, ಡಾ| ಭರತ್‌ ಶೆಟ್ಟಿ ವೈ., ವೇದವ್ಯಾಸ ಕಾಮತ್‌, ಉಮಾನಾಥ ಕೋಟ್ಯಾನ್‌, ರಾಜೇಶ್‌ ನಾೖಕ್‌, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಮೊದಿನ್‌ ಬಾವಾ ಸಹಿತ ಜನಪ್ರತಿನಿಧಿಗಳು ಇಲ್ಲಿಗೆ ಆಗಾಗ್ಗೆ ಭೇಟಿ ನೀಡಿದವರು ಕೂಡ ಈಗ ಮಾತ್ರ ಮೌನವಾಗಿದ್ದಾರೆ. ಪಾಲಿಕೆಯಲ್ಲಿ ಬಿಜೆಪಿಯ ಹೊಸ ಆಡಳಿತ ಬಂದಿದ್ದರೂ ಯಾರೂ ಈ ಬಗ್ಗೆ ಗಮನಹರಿಸಿದಂತಿಲ್ಲ.

ವರದಿಯ ಕಡತಗಳು ಮಾತ್ರ ಇಲ್ಲಿವೆ!
ಪರಿಹಾರ ಪ್ಯಾಕೇಜ್‌ಗಾಗಿ ರಾಜ್ಯ ಸರಕಾರದ ತಂಡ ಆಗಮಿಸಿ ವಿವಿಧ ಆಯಾಮಗಳಲ್ಲಿ ವರದಿ ಸಿದ್ಧಪಡಿಸಿ ಜಿಲ್ಲಾಡಳಿತ/ಸರಕಾರಕ್ಕೆ ವರದಿ ನೀಡಿದೆಯಾದರೂ ಸರಕಾರದಿಂದ ಪರಿಹಾರ ಮಾತ್ರ ದೊರಕಿಲ್ಲ. ಬೇರೆ ಬೇರೆ ರಾಜ್ಯಗಳಿಂದ ತಜ್ಞರ ತಂಡಗಳು ಮಂದಾರಕ್ಕೆ ಆಗಮಿಸಿ ವಿಧ-ವಿಧದ ವರದಿ ನೀಡಿದ್ದು ಬಿಟ್ಟರೆ ಇಲ್ಲಿ ಅನುಷ್ಠಾನವಾಗಿಲ್ಲ. ಪಾಲಿಕೆ ಎಡವಟ್ಟಿನಿಂದ ಘಟನೆ ನಡೆದು ತಿಂಗಳುಗಳೇ ಕ್ರಮಿಸಿದರೂ ಇಲ್ಲಿನವರು ಇನ್ನೂ ಕೂಡ ಪರಿಹಾರಕ್ಕೆ ಆಡಳಿತ ವ್ಯವಸ್ಥೆಯ ಎದುರು ಕೈಚಾಚುವ ಪ್ರಮೇಯ ಎದುರಾಗಿದೆ.

ಈ ಹಿಂದಿನ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಈಗಿನ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌, ಮನಪಾ ಹಿಂದಿನ ಆಯುಕ್ತ ಮೊಹಮ್ಮದ್‌ ನಝೀರ್‌, ಈಗಿನ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ಪ್ರಾದೇಶಿಕ ಅಧಿಕಾರಿಗಳು ಸಹಿತ ವಿವಿಧ ಇಲಾಖೆ ಅಧಿಕಾರಿಗಳ ತಂಡ ಇಲ್ಲಿನ ವಾಸ್ತವ ಸ್ಥಿತಿಯನ್ನು ಅರಿತಿದ್ದರೂ, ಪರಿಹಾರ ಮಾತ್ರ ಇಲ್ಲಿನವರಿಗೆ ದೊರಕಿಲ್ಲ ಎಂಬುದು ವಾಸ್ತವ ಸ್ಥಿತಿ.

ಆಗಸ್ಟ್‌ನಲ್ಲಿ ಆಗಿದ್ದೇನು?
ಆ. 1ನೇ ವಾರದಲ್ಲಿ ಭಾರೀ ಮಳೆ ಸಂದರ್ಭ ಪಚ್ಚನಾಡಿಯ ತ್ಯಾಜ್ಯ ನಿಧಾನ ವಾಗಿ ಕುಸಿದು ಸುಮಾರು ಒಂದೂವರೆ ಕಿ.ಮೀ. ದೂರದ ಮಂದಾರ ಪ್ರದೇಶಕ್ಕೆ ಹರಿಯಿತು. ನೋಡ ನೋಡುತ್ತಿದ್ದಂತೆ ಹಚ್ಚ ಹಸಿರಿನ ಪ್ರದೇಶವಾಗಿದ್ದ ಮಂದಾರ ಇಡೀ ಕಸದ ರಾಶಿಯಲ್ಲಿ ಮುಳುಗಿಹೋಯಿತು. ಮಾನವ ನಿರ್ಮಿತ ಈ ದುರಂತದಲ್ಲಿ ಬರೋಬ್ಬರಿ 27 ಕುಟುಂಬಗಳ ನೂರಕ್ಕೂ ಅಧಿಕ ಜನರು ಸಂತ್ರಸ್ತರಾದರು.

ಔಷಧ, ಅಗತ್ಯ ವಸ್ತು ಖರೀದಿಗೆ ಹಣವಿಲ್ಲ!
ಸಂತ್ರಸ್ತರಿಗೆ ಸದ್ಯ ಕರ್ನಾಟಕ ಹೌಸಿಂಗ್‌ ಬೋರ್ಡ್‌ನ ಸಮುಚ್ಚಯದಲ್ಲಿ ತಾತ್ಕಾಲಿಕ ನೆಲೆ ಕಲ್ಪಿಸಲಾಗಿದೆ. ತಾತ್ಕಾಲಿಕವಾಗಿ ಆಗಸ್ಟ್‌ನಲ್ಲಿ ಪ್ರತೀ ಕುಟುಂಬಕ್ಕೆ 10,000 ರೂ. ಮಾತ್ರ ನೀಡಲಾಗಿದೆ. ಬಳಿಕ ಪರಿಹಾರವೇ ಇಲ್ಲ. ಆದರೆ ನಿತ್ಯ ಉಪಯೋಗಿ ವಸ್ತುಗಳಿಗೆ, ಔಷಧ, ದಿನನಿತ್ಯದ ಖರ್ಚಿಗೆ ನಿರ್ವಸಿತರು ಸಾವಿರಾರು ರೂ. ವೆಚ್ಚ ಮಾಡಬೇಕಾಗುತ್ತದೆ. ಕೆಲವು ನಿರ್ವಸಿತರ ಮನೆಯಲ್ಲಿ ನಿತ್ಯ ಉದ್ಯೋಗ ಮಾಡುವವರೂ ಇಲ್ಲವಾದ್ದರಿಂದ ದಿನನಿತ್ಯದ ಖರ್ಚಿಗೆ ಪರದಾಡುತ್ತಿದ್ದಾರೆ. ಕೆಲವೊಂದು ಸಂಘ – ಸಂಸ್ಥೆಗಳು ಅಕ್ಕಿ, ಇತರ ದಿನಸಿ ಸಾಮಗ್ರಿ, ಬಟ್ಟೆಬರೆಯನ್ನು ನೆರವಾಗಿ ಕೊಟ್ಟದ್ದು ಬಿಟ್ಟರೆ ಸರಕಾರದ ವತಿಯಿಂದ ಯಾವುದೇ ಪರಿಹಾರದ ಕಿಟ್‌ ವಿತರಿಸಿಲ್ಲ. ಬೆಳೆ ಪರಿಹಾರ, ಅರಣ್ಯ ಉತ್ಪತ್ತಿ ನಾಶದ ಪರಿಹಾರವೂ ಇಲ್ಲಿ ದೊರಕಿಲ್ಲ. ಸಂತ್ರಸ್ತರಿಗೆ ಯಾವುದೇ ಆದಾಯ, ದುಡಿಮೆ ಇಲ್ಲದ ಕಾರಣ ಅಗತ್ಯ ವಸ್ತುಗಳ ಖರೀದಿಗೆ, ಔಷಧಕ್ಕೆ ಸಂತ್ರಸ್ತರು ಸಂಕಷ್ಟಕ್ಕೊಳಗಾಗಿದ್ದಾರೆ. ಇದು ಗೊತ್ತಿದ್ದೂ ಜನಪ್ರತಿನಿಧಿಗಳು ಮಾತ್ರ ಮೌನವಾಗಿದ್ದಾರೆ ಎನ್ನುವುದು ಸಂತ್ರಸ್ತರ ಅಳಲು.

ಸೂಕ್ತ ಪರಿಹಾರ
ಪಚ್ಚನಾಡಿ ದುರಂತದಿಂದ ನಿರ್ವಸಿತರಾದ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವ ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ಸಿದ್ಧಪಡಿಸಲಾದ ವರದಿಯನ್ನು ಆರ್ಥಿಕ ಇಲಾಖೆಗೆ ಕಳುಹಿಸಲಾಗಿದೆ. ಅಲ್ಲಿ ಒಪ್ಪಿಗೆ ದೊರೆತ ತತ್‌ಕ್ಷಣದಿಂದಲೇ ಸೂಕ್ತ ಪರಿಹಾರ ನೀಡುವ ಕಾರ್ಯ ನಡೆಯಲಿದೆ.
– ಅಜಿತ್‌ ಕುಮಾರ್‌ ಹೆಗ್ಡೆ ಶಾನಾಡಿ, ಆಯುಕ್ತರು, ಮನಪಾ

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.