ಬೀರಮಲೆ ಅಭಿವೃದ್ಧಿಗೆ ಮುನ್ನುಡಿ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ


Team Udayavani, Oct 15, 2019, 5:09 AM IST

l-32

ಪುತ್ತೂರು: ಪರಿಸರ ಉಳಿವಿನ ಕಾಳಜಿ ತೋರಿದ ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಸರಕಾರದ ಆದೇಶದಂತೆ ಅರಣ್ಯ ಇಲಾಖೆಯ ಮೂಲಕ ಪುತ್ತೂರಿನಲ್ಲೂ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ನಿರ್ಮಾಣಗೊಂಡಿದೆ. ಪ್ರಕೃತಿ ರಮಣೀಯ ಪರಿಸರವಾದರೂ ಅಭಿವೃದ್ಧಿಯಲ್ಲಿ ಅವಗಣನೆಗೆ ಒಳಗಾಗಿರುವ ಬೀರಮಲೆ ಗುಡ್ಡಕ್ಕೆ ಈ ವೃಕ್ಷೋದ್ಯಾನವನ ಒಂದಷ್ಟು ಮೆರುಗು ನೀಡಲಿದೆ.

ರಾಜ್ಯ ಸರಕಾರ ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ವಿವಿಧ ಕಡೆಗಳಲ್ಲಿ ವೃಕ್ಷೋದ್ಯಾನವನ ನಿರ್ಮಿಸಲು ತೀರ್ಮಾನ ಕೈಗೊಂಡು ಅಂದಿನ ಅರಣ್ಯ ಸಚಿವ ರಮಾನಾಥ ರೈ ಅವರ ಮುತುವರ್ಜಿಯಿಂದ ಪುತ್ತೂರಿಗೂ ಮಂಜೂರಾಗಿತ್ತು. ಬೀರಮಲೆ ಬೆಟ್ಟದಲ್ಲಿ 16 ಎಕ್ರೆ ಜಾಗವನ್ನು ಗುರುತಿಸಲಾಗಿತ್ತು.

60.50 ಲಕ್ಷ ರೂ.
2016ರಲ್ಲಿ ವೃಕ್ಷೋದ್ಯಾನವನಕ್ಕೆ ಮಂಜೂರಾತಿ ಲಭಿಸಿ, 2017-18ರಲ್ಲಿ 41.50 ಲಕ್ಷ ರೂ. ಹಾಗೂ 2018 -19ನೇ ಸಾಲಿನಲ್ಲಿ 19 ಲಕ್ಷ ರೂ. ಸೇರಿ ಒಟ್ಟು 60.50 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ. ಮುಖ್ಯವಾಗಿ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಉದ್ದೇಶದ ಅಭಿವೃದ್ಧಿಗಳನ್ನು ಮಾಡಲಾಗಿದೆ.

ಏನೆಲ್ಲ ಇದೆ
ಹೆಚ್ಚಿನ ಪ್ರಮಾಣದಲ್ಲಿ ಕಾಂಕ್‌ವುಡ್‌ ಬಳಕೆಯ ಮೂಲಕ ನಿರ್ಮಾಣ ಕೆಲಸಗಳನ್ನು ಮಾಡಲಾಗಿದೆ. ಆ ಮೂಲಕ ಪ್ರಾಕೃತಿಕ ಟಚ್‌ ನೀಡಲಾಗಿದೆ. ಪ್ರಕೃತಿಯ ರಮಣೀಯತೆಯ ಆಸ್ವಾದನೆಗಾಗಿ ಅಲ್ಲಲ್ಲಿ ಸುಖಾಸೀನಗಳನ್ನು ಅಳವಡಿಸಲಾಗಿದೆ. ಇದರ ಜತೆಗೆ ಗಿಡಮರಗಳ ಸುಂದರ ಪರಿಸರದ ಮಧ್ಯೆ ನಡೆದಾಡುವವರಿಗಾಗಿ “ವಾಕಿಂಗ್‌ ಪಾಥ್‌’ ನಿರ್ಮಿಸಲಾಗಿದೆ. ಮಕ್ಕಳ ಮನೋರಂಜನೆಗಾಗಿ ವಿವಿಧ ರೀತಿಯ ಅತ್ಯಾಧುನಿಕ ಆಟದ ಸಾಮಗ್ರಿಗಳನ್ನು ಅಳವಡಿಸಿಕೊಳ್ಳಲಾಗಿದೆ. ಜೋಕಾಲಿ, ಜಾರುಬಂಡಿ, ನೆಟ್‌ವಾಕ್‌, ರೋಪ್‌ ವೇ, ಕಾರಂಜಿ, ಪುಟ್ಟದಾದ ತಾವರೆಕೊಳ, ಯೋಗ ಕುಟೀರ, ಪರಿಸರ ಕಾಳಜಿ ಸಂಬಂಧ ಸಮಾಲೋಚಿಸಲು ಸಭಾಗೃಹ, ಮಾಹಿತಿನ ಸಂವಹನ ಕೇಂದ್ರ, ಶೌಚಾಲಯ, ನೀರಿನ ಸೌಲಭ್ಯಗಳನ್ನು ವ್ಯವಸ್ಥೆಗೊಳಿಸಲಾಗಿದೆ. ವೃಕ್ಷೋದ್ಯಾನದ ಪ್ರವೇಶ ದ್ವಾರವನ್ನು ಬಹಳಷ್ಟು ಸುಂದರವಾಗಿ ರೂಪಿಸಲಾಗಿದ್ದು, ಮರದಿಂದಲೇ ಮಾಡಿದ ಗೇಟು, ಬೋರ್ಡ್‌ಗಳು ಗಮನ ಸೆಳೆಯುತ್ತಿದೆ.

ವೃಕ್ಷ ವೈಭವ ಕಾಣಬೇಕಷ್ಟೆ
ವೃಕ್ಷೋದ್ಯಾನವನದಲ್ಲಿ 3,000 ವಿವಿಧ ಜಾತಿಯ ಗಿಡಗಳನ್ನು ನೆಡಲಾಗಿದೆ. ಆಲ, ಅರಳಿ, ಮಾವು, ನೇರಳೆ ಸಹಿತ ಕಾಡುಜಾತಿಯ ಗಿಡಗಳನ್ನು ನೆಡಲಾಗಿದೆ. ಈ ಮರಗಳು ಇನ್ನಷ್ಟೇ ಬೆಳೆಯಬೇಕಿವೆ. ಸದ್ಯಕ್ಕೆ ಅಕೇಶಿಯಾ ಮರಗಳೇ ವೃಕ್ಷೋದ್ಯಾನದಲ್ಲಿ ಕಾಣಿಸುವುದು ಒಂದಷ್ಟು ಹಿನ್ನಡೆಯಾಗಿದೆ. ಹಿಂದೆ ಬೆಳೆದ ಅಕೇಶಿಯಾ ಮರಗಳನ್ನು ಸದ್ಯಕ್ಕೆ ಹಾಗೆಯೇ ಬಿಡಲಾಗಿದೆ. ಮುಂದೆ ಕ್ರಮೇಣ ಅವುಗಳನ್ನು ತೆಗೆಯಲಾಗುತ್ತದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಲಾಖೆಗೆ ಹಸ್ತಾಂತರ ಆಗಿಲ್ಲ
ಬೀರಮಲೆ ಬೆಟ್ಟದಲ್ಲಿ “ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ’ ಡಿಪಿಆರ್‌ ಸಿದ್ಧಗೊಳಿಸಿದಂತೆ ಸುಂದರವಾಗಿ ನಿರ್ಮಾಣಗೊಂಡಿದೆ. ವಿಶೇಷವಾಗಿ ಮಕ್ಕಳಿಗೆ ಆಟದ ವ್ಯವಸ್ಥೆಗಳನ್ನು ಜೋಡಿಸಲಾಗಿದೆ. ಈ ಜಾಗ ಇನ್ನೂ ಇಲಾಖೆಗೆ ಹಸ್ತಾಂತರ ಆಗಿಲ್ಲ. ಪ್ರವೇಶಕ್ಕೆ ಸಂಬಂಧಪಟ್ಟಂತೆ ಸಣ್ಣ ಶುಲ್ಕ ನಿಗದಿ ಮಾಡುವ ಯೋಜನೆ ಇದೆಯಾದರೂ ಇನ್ನೂ ಅಂತಿಮಗೊಂಡಿಲ್ಲ.
 - ಮೋಹನ್‌ ಕುಮಾರ್‌ ಬಿ.ಜಿ., ವಲಯ ಅರಣ್ಯಾಧಿಕಾರಿ, ಪುತ್ತೂರು

ಟ್ರೀ ಪಾರ್ಕ್‌: ನಾಳೆ ಉದ್ಘಾಟನೆ
ಬೀರಮಲೆ ಟ್ರೀ ಪಾರ್ಕ್‌ ಅ. 16ರಂದು ಶಾಸಕ ಸಂಜೀವ ಮಠಂದೂರು ಅವರಿಂದ ಉದ್ಘಾಟನೆಗೊಳ್ಳಲಿದೆ. ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ.ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಅಜಯ್‌ ಮಿಶ್ರಾ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬೃಜೇಶ್‌ ಕುಮಾರ್‌, ಮಂಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್‌ ಎಸ್‌. ನೆಟಾಲ್ಕರ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ಕರಿಕಲನ್‌ ವಿ. ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.