ಕಿಡ್ಸ್‌  ಈಜುಕೊಳ ನಿರ್ಮಾಣಕ್ಕೆ ಚಿಂತನೆ 


Team Udayavani, Sep 17, 2018, 10:06 AM IST

17-sepctember-2.jpg

ಮಹಾನಗರ: ಮಹಾನಗರ ಪಾಲಿಕೆಯ ಮಂಗಳ ಈಜುಕೊಳ ಮೇಲ್ದರ್ಜೆಗೇರಲಿದ್ದು, ಈಗಾಗಲೇ ಕಾಮಗಾರಿ ಪ್ರಾರಂಭವಾಗಿದೆ. ಅದೇ ರೀತಿ ನಗರದಲ್ಲಿ ಚಿಕ್ಕ ಮಕ್ಕಳು ಕೂಡ ಈಜು ಕಲಿಯಲು ಆಸಕ್ತಿ ವಹಿಸುತ್ತಿದ್ದು, ಅವರಿಗಾಗಿ ಪ್ರತ್ಯೇಕ ಕಿಡ್ಸ್‌ ಈಜುಕೊಳ ನಿರ್ಮಿಸುವತ್ತ ಪಾಲಿಕೆ ಚಿಂತಿಸುತ್ತಿದೆ.

ಮಂಗಳ ಈಜುಕೊಳದಲ್ಲಿ ಸದ್ಯ ಇರುವಂತಹ ನೀರು ಶುದ್ಧೀಕರಣ ಘಟಕ ಸುಮಾರು 28 ವರ್ಷ ಹಳೆಯದಾಗಿದ್ದು, ಹೊಸ ತಂತ್ರಜ್ಞಾನ ವ್ಯವಸ್ಥೆಯನ್ನು ಹೊಂದಿಲ್ಲ. ಈಗ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನವೀಕರಣ ಪ್ರಾರಂಭವಾಗಿದೆ. ಈಜುಕೊಳದ ನೀರನ್ನು ಓಝೋನ್‌ ಘಟಕದಲ್ಲಿ ಸಂಸ್ಕರಿಸುವ ನೂತನ ತಂತ್ರಜ್ಞಾನ ಪರಿಚಯಿಸಲಾಗುತ್ತಿದ್ದು, ಈ ಮೂಲಕ ಈಜುಕೊಳ ಹೈಟೆಕ್‌ ಆಗುತ್ತಿದೆ. 

ಹಿಂದಿದ್ದ ಶುದ್ಧೀಕರಣ ಘಟಕದಲ್ಲಿ ಮಾನವ ಶ್ರಮದಿಂದಲೇ ಯಂತ್ರಗಳ ಕೆಲಸ ನಡೆಯುತ್ತಿತ್ತು. ಆದರೆ ಈ ನೂತನ ಘಟಕದಲ್ಲಿ ಸ್ವಯಂಚಾಲಿತ ಕಾರ್ಯದಿಂದ ಕೆಲಸಗಳು ನಡೆಯಲಿದೆ. ಈ ಹಿಂದೆ 10 ಎಚ್‌.ಪಿ.ಯ 2 ಪಂಪ್‌ ಗಳಿತ್ತು. ಈಗ 4 ಪಂಪ್‌ ಗಳನ್ನು ಅಳವಡಿಸಲಾಗುತ್ತಿದೆ.

ಹಳೆ ತಂತ್ರಜ್ಞಾನದಲ್ಲಿ ನೀರು ಶುದ್ಧೀಕರಣಕ್ಕೆ 3 ಡ್ರಮ್‌ ಇತ್ತು. ಈಗ 4 ಡ್ರಮ್‌ ಅಳವಡಿಸಿ ನೀರು ಶುದ್ಧೀಕರಣ ನಡೆಸಲಾಗುವುದು. ಬಳಿಕ ಆ ನೀರು ಬರಲು ಈಜುಕೊಳದ ಒಳಗೆ ಎರಡೂ ಬದಿಗಳಲ್ಲಿ 25 ತೂತು ಮಾಡಿ ಪೈಪ್‌ ಅಳವಡಿಸಲಾಗುತ್ತಿದೆ. ಇದು ನಿರಂತರ ಪ್ರಕ್ರಿಯೆಯಾಗಿದೆ.

ಸದ್ಯ ಈಜುಕೊಳದ ಸುತ್ತಲೂ ಮಣ್ಣು ಅಗೆಯಲಾಗಿದ್ದು, ನೂತನ ಪೈಪ್‌ಲೈನ್‌ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಹಿಂದಿದ್ದ ಪೈಪ್‌ನ ಗಾತ್ರ ಚಿಕ್ಕದಾಗಿತ್ತು. ಅಲ್ಲದೆ ಪೈಪ್‌ ಒಳಗೆ ಹಾವಸೆ ಹಿಡಿದು ನೀರಿನ ರಭಸ ಕಡಿಮೆಯಾಗಿತ್ತು. ನೂತನ ತಂತ್ರಜ್ಞಾನದಿಂದ ಶುದ್ಧೀಕರಣವಾದ ನೀರು ಪ್ರಬಲ ರೋಗ ನಿರೋಧಕ ಶಕ್ತಿ ಹೊಂದಿದೆ. ಇದರಿಂದ ಯಾವುದೇ ಅಂಟುರೋಗ ಹರಡುವುದಿಲ್ಲ. ನೀರಿನಲ್ಲಿರುವ ಕಲ್ಮಶ, ವೈರಸ್‌ ನಾಶವಾಗಲಿದ್ದು, ಈ ನೀರು ಅತ್ಯಂತ ಸುರಕ್ಷಿತವಾಗಿದೆ.

ರಜೆ ವೇಳೆ ತಯಾರಾಗಲ್ಲ
ಸಾಮಾನ್ಯವಾಗಿ ಶಾಲೆಗಳಿಗೆ ರಜೆ ಇರುವಾಗ ಮಕ್ಕಳು ಬೆಳಗ್ಗೆ- ಸಂಜೆ ಈಜು ತರಬೇತಿ ಪಡೆಯಲು ಇಲ್ಲಿಗೆ ಬರುತ್ತಾರೆ. ವಿದ್ಯಾರ್ಥಿಗಳಿಗೆ ಅಕ್ಟೋಬರ್‌ನಲ್ಲಿ ರಜೆ ಇದ್ದು, ಈ ವೇಳೆ ಕಾಮಗಾರಿ ಪೂರ್ಣಗೊಳ್ಳುವುದು ಕಷ್ಟಕರವಾದ ಹಿನ್ನೆಲೆಯಲ್ಲಿ ಈಜುಕೊಳ ಲಭ್ಯವಿರುವುದಿಲ್ಲ. ಸದ್ಯ ನಗರದ ವಿದ್ಯಾರ್ಥಿಗಳು ಸಂತ ಅಲೋಶಿಯಸ್‌ ಕಾಲೇಜಿನ ಅಥವಾ ಎನ್‌ಐಟಿಕೆ ಈಜು ಕೊಳದತ್ತ ತೆರಳುತ್ತಿದ್ದಾರೆ. 

ದರ ಹೆಚ್ಚಳಕ್ಕೆ ಚಿಂತನೆ
ಈಜುಕೊಳ ಪ್ರವೇಶಿಸಲು ಸಾರ್ವಜನಿಕರಿಗೆ ದಿನಕ್ಕೆ 20 ರೂ. ಶುಲ್ಕವಿದೆ. ಒಂದು ತಿಂಗಳ ಪಾಸ್‌ಗೆ 400 ರೂ.ನೀಡಬೇಕಾಗುತ್ತದೆ. ಮಕ್ಕಳಿಗೆ ಮತ್ತು ಹಿರಿಯ ನಾಗರಿಕರಿಗೆ ದಿನಕ್ಕೆ 10 ರೂ., ತಿಂಗಳಿಗೆ 200 ರೂ.ನಿಗದಿಪಡಿಲಾಗಿದೆ. ಮೂರು ತಿಂಗಳಿಗೆ ಸಾರ್ವಜನಿಕರಿಗೆ 750 ರೂ. ಶುಲ್ಕ ಇದ್ದರೆ ಮಕ್ಕಳಿಗೆ, ಹಿರಿಯ ನಾಗರಿಕರಿಗೆ 350 ರೂ., ಆರು ತಿಂಗಳಿಗೆ ಸಾರ್ವಜನಿಕರಿಗೆ 1,000 ರೂ., ಮಕ್ಕಳಿಗೆ, ಹಿರಿಯ ನಾಗರಿಕರಿಗೆ 600 ರೂ. ಶುಲ್ಕವಿದೆ. ಒಂದು ವರ್ಷಕ್ಕೆ ಸಾರ್ವಜನಿಕರಿಗೆ 1,500 ರೂ., ಮಕ್ಕಳು, ಸಾರ್ವಜನಿಕರಿಗೆ 1,000 ರೂ. ನಿಗದಿಪಡಿಸಲಾಗಿದೆ. ದರ ಪಟ್ಟಿಯಲ್ಲಿ 5 ವರ್ಷಗಳಿಂದ ಯಾವುದೇ ಪರಿಷ್ಕರಣೆ ನಡೆಸಲಿಲ್ಲ. ಮುಂದಿನ ದಿನಗಳಲ್ಲಿ ಅನಿವಾರ್ಯವಾಗಿ ಹೆಚ್ಚಳ ಮಾಡಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ‘ಸುದಿನ’ಕ್ಕೆ ಪ್ರತಿಕ್ರಿಯಿಸಿದ್ದಾರೆ.

4 ತಿಂಗಳೊಳಗೆ ಪೂರ್ಣ
ಈಗಾಗಲೇ ಈಜುಕೊಳ ಕಾಮಗಾರಿ ಪ್ರಾರಂಭವಾಗಿದ್ದು, 4 ತಿಂಗಳೊಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಈಜುಕೊಳದ ನೀರನ್ನು ಓಝೋನ್‌ ಘಟಕದಲ್ಲಿ ಸಂಸ್ಕರಿಸುವ ತಂತ್ರಜ್ಞಾನ ಇಲ್ಲಿ ಪರಿಚಯಿಸಲಾಗುತ್ತಿದೆ.
 - ರಾಜೇಶ್‌, ಎಂಜಿನಿಯರ್‌

ಈಜು ಸ್ಪರ್ಧೆಗೆ ಸಿದ್ಧತೆ
ಸಾರ್ವಜನಿಕರನ್ನು ಆಕರ್ಷಿಸಲು ಮಂಗಳ ಈಜುಕೊಳದಲ್ಲಿ ನೂತನ ತಂತ್ರಜ್ಞಾನ ಅಳವಡಿಸಲಾಗುತ್ತಿದೆ. ಮುಂದೆ ಇಲ್ಲಿ ಈಜು ಸ್ಪರ್ಧೆ ನಡೆಸಲು ಅನುಕೂಲವಾಗುವಂತೆ ತಯಾರು ಮಾಡಲಾಗುತ್ತಿದೆ.
– ಭಾಸ್ಕರ್‌ ಕೆ.,
ಪಾಲಿಕೆ ಮೇಯರ್‌

‡ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.