ವಿಟ್ಲ: ಈ ಬಡ ಕುಟುಂಬಕ್ಕೆ ಈಗಲೂ ಜೋಪಡಿಯೇ ಆಸರೆ !


Team Udayavani, May 23, 2024, 4:32 PM IST

ವಿಟ್ಲ: ಈ ಬಡ ಕುಟುಂಬಕ್ಕೆ ಈಗಲೂ ಜೋಪಡಿಯೇ ಆಸರೆ !

ವಿಟ್ಲ: ಸ್ವಾತಂತ್ರ್ಯ ದೊರೆತು 77 ವರ್ಷ ತುಂಬುತ್ತಿದೆ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಅನುದಾನ ಹಳ್ಳಿ ಹಳ್ಳಿಗೆ ತಲುಪಿದೆ ಎನ್ನುತ್ತಾರೆ. ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ ಅನ್ನುತ್ತಾರೆ. ಹೀಗಿದ್ದೂ ಇನ್ನೂ ಜೋಪಡಿಯಲ್ಲಿ ಕುಟುಂಬವೊಂದು ಸಂಕಟಪಡುತ್ತಿದೆ.

ಇದು ಅಳಿಕೆ ಗ್ರಾಮದ ಪಡಿಬಾಗಿಲು ಕುಟುಂಬದ ಶೋಚನೀಯ ಸ್ಥಿತಿ. ಮನೆ ಮಾಡು ಕುಸಿಯುತ್ತಿದೆ. ಸುತ್ತಲೂ ಗೋಡೆಯಿಲ್ಲ. ಪ್ಲಾಸ್ಟಿಕ್‌ ಟರ್ಪಾಲು ಇವರ ಮನೆಗೆ ಗೋಡೆಯಾಗಿದೆ. ಬಾಗಿಲು ಇಲ್ಲ. ಭದ್ರತೆಯಿಲ್ಲ. ಮನೆ ಸೋರುವುದು ಗ್ಯಾರಂಟಿ. ಇವರ ಹೆಸರಲ್ಲಿ ನಿವೇಶನವಿಲ್ಲ. ಸುಭದ್ರವಾದ ಮನೆಯಿಲ್ಲ. ಪಡಿತರ ಅಕ್ಕಿ ಈ ಕುಟುಂಬಕ್ಕೆ ಸಿಗುವುದಿಲ್ಲ. ಶೌಚಾಲಯವಿಲ್ಲ. ಈ ಮನೆಗೆ ತೆರಳಲು ಸರಿಯಾದ ದಾರಿಯಿಲ್ಲ. ಸೌಲಭ್ಯ ಪಡೆಯಬೇಕಾದ ಈ ಅರ್ಹ ಫಲಾನುಭವಿ ಕುಟುಂಬಕ್ಕೆ ಸರಕಾರ ದಾರಿ ತೋರಬೇಕಾಗಿದೆ.

ನಾರಾಯಣ ಪೂಜಾರಿ ಈ ಕುಟುಂಬದ ಯಜಮಾನ. ಅವರ ವಯಸ್ಸು 48ರ ಆಸುಪಾಸು. ಹಿಂದೆ ಕೂಲಿಕಾರ್ಮಿಕ. ಒಂದೂವರೆ ವರ್ಷದ ಹಿಂದೆ ಅವರು ಕೂಲಿ ಕೆಲಸ ಮಾಡುತ್ತಿದ್ದಾಗ ಮರದಿಂದ ಬಿದ್ದು ಅನಾರೋಗ್ಯ ಕಾಡಿದೆ. ಕಾಲುಗಳು ನಿಷ್ಕ್ರಿಯಗೊಂಡಿವೆ. ನಡೆದಾಡಲು ಸಾಧ್ಯವಾಗುತ್ತಿಲ್ಲ. ಮನೆಯೊಳಗೆ ಇರುವ ಇವರಿಂದ ಆದಾಯ ಬರುವುದಿಲ್ಲ. ಇವರ ಪತ್ನಿ ಅಡಿಕೆ ಗಾರ್ಬಲ್‌ಗೆ ತೆರಳಿ ದುಡಿಯುತ್ತಿದ್ದಾರೆ. ಇವರ ಆದಾಯದಲ್ಲಿ ಮನೆ ನಡೆಯಬೇಕು.

ಈ ದಂಪತಿಗೆ ಇಬ್ಬರು ಮಕ್ಕಳು. ಪುತ್ರಿ 9ನೇ ತರಗತಿ. ಪುತ್ರ 8ನೇ ತರಗತಿ. ಸರಕಾರಿ ಶಾಲೆಗೆ ತೆರಳುತ್ತಾರೆ. ಆದರೆ ಈ ಮಕ್ಕಳ ಆಗುಹೋಗುಗಳಿಗೆ ವ್ಯವಸ್ಥೆಯಿಲ್ಲ. ಬಟ್ಟೆ-ಬರೆ, ಪುಸ್ತಕ, ಬಸ್‌ ಪಾಸ್‌ ಕೂಡಾ ಪಡೆಯಲಾಗದ ಈ ಮಕ್ಕಳ ಭವಿಷ್ಯ ಕಟ್ಟುವುದು ಅಷ್ಟು ಸುಲಭವಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ಈ ಕುಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ನಿವೇಶನ, ಮನೆ, ಶೌಚಾಲಯ, ಪಡಿತರ ಒದಗಿಸಲು ಸೂಕ್ತ ವ್ಯವಸ್ಥೆ ಮಾಡಬೇಕಾಗಿದೆ.

ಜೀವನೋಪಾಯಕ್ಕೆ ದಾರಿ ತೋರಬೇಕಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಕ್ರಮಕೈಗೊಳ್ಳ ಬೇಕಾಗಿದೆ. ಸಾರ್ವಜನಿಕರು ಕೂಡಾ ಈ
ಕುಟುಂಬದ ಮನೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕರಿಸಬಹುದಾಗಿದೆ. ಹಳ್ಳಿಯಲ್ಲಿರುವ ಈ ಕುಟುಂಬವನ್ನು ಉದ್ಧರಿಸಿ ಈ ಕುಟುಂಬಕ್ಕೆ ರಕ್ಷಣೆ ಕೊಡಬೇಕಾಗಿದೆ.

ಟಾಪ್ ನ್ಯೂಸ್

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

ಕಡಲಿಗಿಳಿಯುವ ನಾಡದೋಣಿಗಳಿಗೆ ಎನ್‌ಎಂಪಿಎ “ಆಶ್ರಯ’!

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

udupi

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.