ತೊಟ್ಟಿಕಲ್ಲು ಜಲಪಾತ


Team Udayavani, May 3, 2018, 3:30 PM IST

3-May-18.jpg

ಅರೆ !
ಇಷ್ಟು ಚೆಂದದ ತಾಣ ಇಲ್ಲೇ ಇತ್ತಲ್ಲ ? ನೋಡದೆ ಹೋದೆನಲ್ಲ ಅಂತ ಅನ್ನಿಸೀತು ಆ ತಾಣ ತಲುಪಿದಾಗ. ಅದುವೇ ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಕೇವಲ 28 ಕಿ.ಮೀ. ದೂರದಲ್ಲಿರುವ ತೊಟ್ಟಿಕಲ್ಲು ಜಲಪಾತ.
 ರಾಷ್ಟ್ರೀಯ ಹೆದ್ದಾರಿ 209 ಆದ ಬೆಂಗಳೂರು- ಕನಕಪುರ ರಸ್ತೆ ಹಿಡಿದು 23 ಕಿ.ಮೀ. ದೂರದಲ್ಲಿರುವ ಕಗ್ಗಲಿಪುರ ತಲಪಲು ರಾಜ್ಯ ಸಾರಿಗೆ/ ಸಿಟಿ ಬಸ್‌ ಸೌಕರ್ಯಕ್ಕೆ ಕೊರತೆ ಇಲ್ಲ. ಅಲ್ಲಿ ಎಡಕ್ಕೆ ಹರಿಯುವ ರಸ್ತೆಯಲ್ಲಿ ಒಂದೂವರೆ ಕಿ.ಮೀ. ಸಾಗಿದರೆ ಗುಳಕಮಲೆ ಗ್ರಾಮ. ತುಸು ಮುಂದೆ ಕ್ಯಾಡ್‌ ಬಾಮ್‌ ಆಸ್ಪತ್ರೆ ಬಳಿ ಎಡಕ್ಕೆ ಸಾಗುತ್ತಲೇ ಜಲ್ಲಿ ರಸ್ತೆಯೊಂದು ನಿಮ್ಮ ಗಮನ ಸೆಳೆಯುತ್ತದೆ. ಇಲ್ಲಿಂದ ಮುಂದಕ್ಕೆ ನೀವು ಎರಡು ಕಿ.ಮೀ. ಸಹಿಸಿಕೊಂಡರಾಯಿತು. ನಿಮ್ಮನ್ನು ಜಲಪಾತಕ್ಕೆ ಮುಟ್ಟಿಸುವ ಹೊಣೆ ನನ್ನದು ಎಂದಿರುತ್ತದೆ ಅದು. ಬೈಕ್‌ಗೆ ಸಲೀಸು. ಆದರೆ ನಡಿಗೆಯೆ ಆಪ್ಯಾಯಮಾನ. ಕಾರು, ವ್ಯಾನ್‌ಗೆ ಸುತ್ತು ದಾರಿಯೂ ಇದೆಯೆನ್ನಿ.

ಕಡಿದಾದ ಬಂಡೆಗಳು
ಜಲಧಾರೆ ವೀಕ್ಷಿಸಲು ಕಡಿದಾದ ಬಂಡೆಗಳನ್ನೇರಬೇಕು. ಮೆಟ್ಟಿಲುಗಳಿಲ್ಲ. ವೃದ್ಧರು ಬಹುತೇಕ ಇನ್ನು ಸಾಕೆಂದು ಬಂದ ಹಾದಿಯತ್ತ ದಿಟ್ಟಿಸುವುದಿದೆ. ನೀವು ಯೋಗಪಟುವಾದರೆ ಆರೋಹಣ ಸರಾಗ. ಅಂದಹಾಗೆ, ಜಲಪಾತಕ್ಕೆ ಮಳೆಗಾಲದಲ್ಲಷ್ಟೇ ಪೂರ್ಣ ಕಳೆ. 

ಆಗಸ್ಟ್ – ಡಿಸೆಂಬರ್‌ ಅವಧಿಯಲ್ಲಿ ಪ್ರವಾಸ ಚಲೋ… ನೂರು ಅಡಿಗಳ ಎತ್ತರದಿಂದ ಧುಮ್ಮಿಕ್ಕುವ ನೀರು ಬಳುಕುತ್ತ ಬಂಡೆಯಿಂದ ಬಂಡೆಗೆ ಕುಪ್ಪಳಿಸುವಂತೆ ತೋರುತ್ತದೆ. ಪ್ರತಿಯೊಂದು ಬಂಡೆಯೂ ಶಿವಲಿಂಗದಂತೆ ಕಂಡು ಅದರ ಮೇಲೆ ಬಿಡಿ ಮಲ್ಲಿಗೆ ಅರ್ಚನೆಯಾ ಗುತ್ತಿರಬಹುದೆಂದೂ ಭಾಸವಾಗುತ್ತದೆ.

ಜಲಧಾರೆಯಾದ ಸುವರ್ಣಮುಖಿ 
ಜಲಧಾರೆಯ ಮೂಲ ಬನ್ನೇರುಘಟ್ಟದ ಸುವರ್ಣಮುಖೀ ನದಿ. ವರ್ಷದ ಉಳಿದ ಅವಧಿಯಲ್ಲಿ ಕೇವಲ ತೊಟ್ಟಿಕ್ಕುವ ಕಲ್ಲಿನಂತೆ ಕಾಣುತ್ತದೆ. ನಿಜಕ್ಕೂ ಅಲ್ಲಿ ಜಲಪಾತವುಂಟೇ ಅನ್ನಿಸುತ್ತದೆ. ಚಾರಣವನ್ನು ಬೇಗ ಮುಗಿಸಿ ಹೊರಟರೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೂ ಭೇಟಿ ನೀಡಬಹುದು.

ಮೋಜು , ಮನೋರಂಜನೆಯೆ ಮೇಲಾದರೆ ಯಾವುದೇ ಪ್ರೇಕ್ಷಣೀಯ ನೆಲೆಗೆ ಗರ ಬಡಿಯುತ್ತದೆ. ತೊಟ್ಟಿಕಲ್ಲು ಜಲಪಾತಕ್ಕೂ ಆ ಪಾಡು ಒದಗಿದೆ. ಅಲ್ಲಲ್ಲಿ ತಿಂದೊಗೆದ ಕಾಗದದ ತಟ್ಟೆಗಳು, ಲೋಟಗಳು, ಪ್ಲಾಸ್ಟಿಕ್‌ ಚೀಲಗಳು. ನೀರಿನ ಬಾಟಲ್‌ಗ‌ಳು ಬಿದ್ದಿವೆ. ಜಲಪಾತ ವೀಕ್ಷಣೆಗೆ ಬಂದವರು ಪರಿಸರ ಸ್ವಚ್ಛತೆಗೆ ಗಮನ ಹರಿಸದ ಕಾರಣ, ಪಾರದರ್ಶಕವಾಗಿರಬೇಕಾದ ನಾಲೆಯ ನೀರು ಕಡು ಹಸುರು ಬಣ್ಣಕ್ಕೆ ತಿರುಗಿದೆ.

ಮುನೇಶ್ವರ ಸ್ವಾಮಿಯೂ ನೆಲೆಯಾಗಿದ್ದಾನೆ
ಪಕ್ಕದಲ್ಲಿ ಮುನೇಶ್ವರ ಸ್ವಾಮಿ ದೇವಾಲಯವಿದೆ. ಹಸುರು ಪರಿಸರದ ಮಧ್ಯೆ ಇರುವ ಈ ದೇವಾಲಯ ಅತ್ಯಂತ ಪುರಾತನ ದೇಗುಲವೂ ಹೌದು. ಈ ಜಲಪಾತ ವೀಕ್ಷಣೆಗೆ ಬರುವ ಹೆಚ್ಚಿನ ಮಂದಿ ಇಲ್ಲಿ ದೇವರ ದರ್ಶನ ಪಡೆದೇ ಮನೆಗೆ ಮರಳುತ್ತಾರೆ.

ವಾರಾಂತ್ಯದಲ್ಲಿ ಒಂದು ದಿನದ ಪ್ರವಾಸಕ್ಕೆ ತೊಟ್ಟಿಕಲ್ಲು ಜಲಪಾತ ಸೂಕ್ತ. ಅಲ್ಲಿ ಯಾವುದೇ ಫ‌ಲಾಹಾರ ಮಂದಿರವಾಗಲಿ, ಖಾನಾವಳಿಯಾಗಲಿ ಇಲ್ಲ. ಕುಡಿಯುವ ನೀರು ಸಮೇತ ಅಗತ್ಯ ಪ್ರಮಾಣದಷ್ಟು ಬುತ್ತಿ ಒಯ್ದರೆ ಸರಿ. ಭದ್ರತೆಯ ಕೊರತೆಯೂ ಇದೆ ಅನ್ನೋ ಎಚ್ಚರಿಕೆ ಚಾರಣ ಹೋಗುವವರಿಗೆ ಇರಲಿ.

ಜಲಪಾತಕ್ಕೂ ಮಿಗಿಲಾಗಿ ಅದನ್ನು ತಲುಪಿಸುವ ಹಾದಿ ಸೊಗಸು. ನೀರವತೆ. ಇಕ್ಕೆಲದಲ್ಲೂ ಕಣ್ಣಿಗೆ ತಂಪೆರೆಯುವ ಹೊಲ, ಗದ್ದೆ, ಗಿಡಮರಗಳು. ಅಲ್ಲಲ್ಲಿ ಕೆರೆ, ಕುಂಟೆ. ದೂರದಲ್ಲಿ ಹಸುರು ಹೊದ್ದ ಗಿರಿಸಾಲು. ಗುಡಿಸಲು, ಜಾನುವಾರು ….. ಒಟ್ಟಾರೆ ಸುತ್ತಮುತ್ತಲೂ ಅಪ್ಪಟ ದೇಸಿ ವಾತಾವರಣ. ಈ ಹಿತಕರ ಪರಿಸರ ಕಂಡಾಗಲೇ ನಮ್ಮ ಯಾತ್ರೆ ಫ‌ಲಪ್ರದ ಎಂಬ ಸಾರ್ಥಕ ಭಾವ ಜತೆಯಾಗುತ್ತದೆ. ಬನ್ನೇರುಘಟ್ಟ ಸೇರಿ ಅಲ್ಲಿನ ಪೊಲೀಸ್‌ ಠಾಣೆ ಎದುರಿನ ಕಿರು ರಸ್ತೆಯಲ್ಲಿ 15 ಕಿ.ಮೀ. ಪ್ರಯಾಣಿಸಿ. ಅಲ್ಲಿಂದ 15 ನಿಮಿಷಗಳ ಕಾಲ ನಡೆದರೆ ಜಲಪಾತ ಸಿಗುತ್ತದೆ. ಚಾರಣಕ್ಕೆ ಈ ಹಾದಿ ಚೇತೋಹಾರಿ.

ರೂಟ್‌ಮ್ಯಾಪ್‌ 
. ಬೆಂಗಳೂರು ಮೆಜೆಸ್ಟಿಕ್‌ ನಿಂದ 28 ಕಿ.ಮೀ. ದೂರದಲ್ಲಿದೆ ತೊಟ್ಟಿಕಲ್ಲು ಜಲಪಾತ.

.ಬಸ್‌ ಸೌಕರ್ಯವಿದೆ. ಬೈಕ್‌ನಲ್ಲಿ ಆರಾಮವಾಗಿ ಜಲಪಾತದವರೆಗೂ ತೆರಳಬಹುದು.

.ಹತ್ತಿರದಲ್ಲೇ ಇದೆ ಮುನೇಶ್ವರ ಸ್ವಾಮಿ ದೇವಸ್ಥಾನ.

.ಊಟ, ವಸತಿ ವ್ಯವಸ್ಥೆಯಿಲ್ಲ. ಹೀಗಾಗಿ ಇದಕ್ಕೆ ಸಿದ್ಧತೆ ಮಾಡಿಕೊಂಡೇ ತೆರಳಬೇಕು.

ಬಿಂಡಿಗನವಿಲೆ ಭಗವಾನ್‌

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.