ವಲಸೆ ಕಾರ್ಮಿಕರಿಗೆ ರೈಲು ವದಂತಿ: ಮಂಗಳೂರು ರೈಲು ನಿಲ್ದಾಣದಲ್ಲಿ ಸೇರಿದ ಸಾವಿರಾರು ಜನ
Team Udayavani, May 8, 2020, 11:04 AM IST
ಮಂಗಳೂರು: ಕೋವಿಡ್-19 ಲಾಕ್ ಡೌನ್ ಹಿನ್ನಲೆಯಲ್ಲಿ ವಲಸೆ ಕಾರ್ಮಿಕರನ್ನು ರೈಲಿನ ಮೂಲಕ ಊರಿಗೆ ಕಳುಹಿಸಿ ಕೊಡಲಾಗುತ್ತದೆ ಎಂಬ ವದಂತಿ ಮಂಗಳೂರಿನಲ್ಲಿ ಹಬ್ಬಿದ್ದು, ಇದರಿಂದಾಗಿ ಇಲ್ಲಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಾವಿರಾರು ಜನರ ಸೇರಿ ಗೊಂದಲ ಉಂಟಾದ ಘಟನೆ ಶುಕ್ರವಾರ ನಡೆಯಿತು.
ಮಂಗಳೂರಿನಿಂದ ರೈಲಿನಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ಊರಿಗೆ ಕಳುಹಿಸುತ್ತಾರೆ ಅಂತ ವದಂತಿ ಹರಡಿತ್ತು. ಇಂದು ಮುಂಜಾನೆಯಿಂದಲೇ ಸಾವಿರಾರು ಕಾರ್ಮಿಕರು ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬಂದಿದ್ದರು. ಆದರೆ ರೈಲ್ವೇ ಸಿಬ್ಬಂದಿ ಯಾವುದೇ ರೈಲು ವ್ಯವಸ್ಥೆ ಮಾಡಿಲ್ಲ ಎಂದು ಹೇಳಿ ಸೇರಿದ ವಲಸೆ ಕಾರ್ಮಿಕರನ್ನು ಅಲ್ಲಿಂದ ತೆರಳುವಂತೆ ಸೂಚಿಸಿದ್ದಾರೆ.
ಆದರೆ ಇದರಿಂದ ಆಕ್ರೋಶಗೊಂಡ ವಲಸೆ ಕಾರ್ಮಿಕರು ಹಿಂದುರುಗದೆ ‘We want to go home’ ಪೋಸ್ಟರ್ ಹಿಡಿದು ಪ್ರತಿಭಟನೆಗೆ ನಡೆಸಿದ್ದಾರೆ. ಈ ವೇಳೆ ಸ್ಥಳದಿಂದ ಹೋಗುವಂತೆ ಪೊಲೀಸರು ಮನವೊಲಿಸಲು ಪ್ರಯತ್ನ ಪಟ್ಟರೂ ಕಾರ್ಮಿಕರು ಪೊಲೀಸರ ಮಾತನ್ನು ಕೇಳದೆ, ನಾವು ಉಪವಾಸವಿದ್ದರೂ ಪರವಾಗಿಲ್ಲ ಜಾಗ ಬಿಟ್ಟು ಕದಲಲ್ಲ ಎಂದು ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ