ಪಿಂಚಣಿ, ಭವಿಷ್ಯನಿಧಿ ಪಡೆಯಲು ಸಾವಿರಾರು ಕಾರ್ಮಿಕರ ಪರದಾಟ

ವಿಭಿನ್ನ ಜನ್ಮ ದಿನಾಂಕದ ಸಮಸ್ಯೆ

Team Udayavani, Oct 7, 2019, 5:13 AM IST

epf

ಮಂಗಳೂರು: ದಾಖಲೆಗಳಲ್ಲಿ ಜನ್ಮ ದಿನಾಂಕದ ವ್ಯತ್ಯಾಸದಿಂದಾಗಿ ಭವಿಷ್ಯನಿಧಿ ಮತ್ತು ಪಿಂಚಣಿ ಪಡೆಯುವುದಕ್ಕೆ ಕಾರ್ಮಿಕರು ಎರಡು ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗೆ ಇನ್ನೂ ಪರಿಹಾರ ದೊರಕಿಲ್ಲ. ಸಾವಿರಾರು ಕಾರ್ಮಿಕರು ಭವಿಷ್ಯನಿಧಿ ಮತ್ತು ಪಿಂಚಣಿಗಾಗಿ ಕಚೇರಿಗಳಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ.

ಕಾರ್ಮಿಕರು ತಮ್ಮ ನಿವೃತ್ತಿ ಅಥವಾ ಕೆಲಸಕ್ಕೆ ರಾಜೀನಾಮೆ ನೀಡಿದ ಬಳಿಕ ಭವಿಷ್ಯನಿಧಿ ಪಡೆಯಲು ಆನ್‌ಲೈನ್‌ ಅರ್ಜಿ ಸಲ್ಲಿಸಬೇಕು.
ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ವಿವರಗಳನ್ನು ನಮೂದಿಸಬೇಕು. ಇಲಾಖೆಯಲ್ಲಿ ಅರ್ಜಿ ಇತ್ಯರ್ಥಗೊಳಿಸುವಾಗ ಆಧಾರ್‌ ಕಾರ್ಡ್‌ನಲ್ಲಿರುವ ಜನ್ಮದಿನಾಂಕಕ್ಕೂ ಭವಿಷ್ಯ ನಿಧಿ ಖಾತೆಯಲ್ಲಿ ಇರುವ ಜನ್ಮದಿನಾಂಕಕ್ಕೂ ತಾಳೆಯಾಗದಿದ್ದರೆ ಅರ್ಜಿ ಇತ್ಯರ್ಥವಾಗುವುದಿಲ್ಲ. ಅರ್ಜಿದಾರರು ಭವಿಷ್ಯ ನಿಧಿಗೆ ನೀಡಿದ ಜನ್ಮದಿನಾಂಕವೇ ಆಧಾರ್‌ನಲ್ಲೂ ನಮೂದಾಗುವಂತೆ ತಿದ್ದುಪಡಿ ಮಾಡಿಸಬೇಕಾಗಿದೆ. ಸಾಧ್ಯವಾಗದಿದ್ದಲ್ಲಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ಪಾಸ್‌ಪೋರ್ಟನ್ನು ಪುರಾವೆಯಾಗಿ ಸಲ್ಲಿಸಬೇಕು. ಯಾವುದೂ ಇಲ್ಲವೆಂದಾದರೆ ಜಿಲ್ಲಾ ಶಸ್ತ್ರಚಿಕಿತ್ಸಕರು ವಯಸ್ಸಿನ ಬಗ್ಗೆ ದೃಢಪತ್ರ ನೀಡಬೇಕು.

ಸಮಸ್ಯೆಯ ಮೂಲ
ಬೀಡಿ, ಗೋಡಂಬಿ ಕಾರ್ಖಾನೆ ಸೇರಿದಂತೆ ಕೆಲವು ಕ್ಷೇತ್ರಗಳ ಬಹುತೇಕ ಕಾರ್ಮಿಕರು ಹೆಚ್ಚಿನ ವಿದ್ಯಾಭ್ಯಾಸ ಪಡೆದಿರುವುದಿಲ್ಲ. ಕೆಲಸಕ್ಕೆ
ಸೇರುವಾಗ ಯಾವುದೋ ಒಂದು ಜನ್ಮದಿನಾಂಕ ನೀಡಿರುತ್ತಾರೆ. ಆಧಾರ್‌ ಮಾಡಿಸುವಾಗ ಯಾವುದೋ ದಾಖಲೆ ನೀಡಿ ಜನ್ಮದಿನಾಂಕ ನಮೂದಿಸಿರುತ್ತಾರೆ. ಈ ಹಿಂದೆ ಭವಿಷ್ಯನಿಧಿ ಇತ್ಯರ್ಥಕ್ಕೆ ಕಾರ್ಖಾನೆಯಲ್ಲಿ ನೀಡಿದ ಜನ್ಮ ದಿನಾಂಕವೇ ದಾಖಲೆಯಾಗಿ ಪರಿಗಣಿತವಾಗುತ್ತಿತ್ತು. ಆಗ ಸಮಸ್ಯೆ ಆಗುತ್ತಿರಲಿಲ್ಲ. ಆಧಾರ್‌ ಕಡ್ಡಾಯ ಆದ ಬಳಿಕ ಸಮಸ್ಯೆ ಸೃಷ್ಟಿಯಾಗಿದೆ.

ಆಧಾರ್‌ ಪರಿಗಣನೆಯಾಗಲಿ
ಭವಿಷ್ಯನಿಧಿ ಖಾತೆಯಲ್ಲಿ ನಮೂದಾಗಿರುವ ಜನ್ಮದಿನಾಂಕವನ್ನು ಹೊರತುಪಡಿಸಿ ಆಧಾರ್‌ ಕಾರ್ಡ್‌ನಲ್ಲಿರುವ ಜನ್ಮದಿನಾಂಕವನ್ನಷ್ಟೇ ಅಧಿ
ಕೃತವಾಗಿ ಪರಿಗಣಿಸಿ ಭವಿಷ್ಯನಿಧಿ ಮತ್ತು ಪಿಂಚಣಿ ಪಾವತಿಸುವುದೇ ಸಮಸ್ಯೆ ನಿವಾರಣೆಗಿರುವ ಸುಲಭ ದಾರಿ. ಇದರಿಂದ ಬಡಕಾರ್ಮಿಕರು ಆಧಾರ್‌ಗಾಗಿ ಜಿಲ್ಲಾ ಕೇಂದ್ರ, ರಾಜಧಾನಿ ಬೆಂಗಳೂರಿಗೆ ಅಲೆದಾಡುವುದು ತಪ್ಪುತ್ತದೆ. ಈಗ ಭವಿಷ್ಯನಿಧಿ ಇಲಾಖೆ ಕೇಂದ್ರ ಸರಕಾರದ ಕಾರ್ಮಿಕ ಸಚಿವಾಲಯದ ಅಧೀನದಲ್ಲಿ ಬರುತ್ತಿದ್ದು, ಸಚಿವಾಲಯದಿಂದ ಮಾತ್ರ ಇದನ್ನು ಬಗೆಹರಿಸಲು ಸಾಧ್ಯವಿದೆ.

ಆಧಾರ್‌ ಅಧ್ವಾನ
ಆಧಾರ್‌ ಕಾರ್ಡ್‌ನಲ್ಲಿ ಜನ್ಮದಿನಾಂಕವನ್ನು ಸರಿಪಡಿಸುವುದು ಪ್ರಯಾಸದ ಕೆಲಸ. ಜನ್ಮದಿನಾಂಕದಲ್ಲಿ 1 ವರ್ಷದಿಂದ ಕಡಿಮೆ ವ್ಯತ್ಯಾಸವಿದ್ದರೆ ಜಿಲ್ಲಾ ಕೇಂದ್ರದಲ್ಲಿ ಸರಿಪಡಿಸಬಹುದು. ಅದಕ್ಕಿಂತ ಹೆಚ್ಚಿನ ವ್ಯತ್ಯಾಸವಿದ್ದರೆ ರಾಜ್ಯ ರಾಜಧಾನಿಗೆ ಹೋಗಬೇಕು. ಬಡಕಾರ್ಮಿಕರಿಗೆ ಇದು ಕಷ್ಟದ ಕೆಲಸ. ಜಿಲ್ಲಾ ಸರ್ಜನ್‌ ನೀಡುವ ದೃಢಪತ್ರ ಸಾಕಾಗುತ್ತದೆ ಎಂದು ಹೇಳುತ್ತಾರಾದರೂ ಅದನ್ನೂ ಪಡೆಯುವುದು ಸುಲಭವಿಲ್ಲ. ಜಿಲ್ಲಾ ಸರ್ಜನ್‌ ಮಧ್ಯಾಹ್ನದವರೆಗೆ ಆಸ್ಪತ್ರೆ ರೌಂಡ್ಸ್‌ನಲ್ಲಿರುತ್ತಾರೆ. ಜಿಲ್ಲಾ ಮಟ್ಟ, ಬೆಂಗಳೂರಿನ ಸಭೆಗಳಿರುತ್ತವೆ. ಇತರ ಕರ್ತವ್ಯ ಸಂಬಂಧಿತ ಒತ್ತಡಗಳಿರುತ್ತವೆ. ಅವರನ್ನು ಕಾದು ದೃಢಪತ್ರ ಪಡೆಯುವುದೂ ಸಾಹಸದ ಕೆಲಸವೇ. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ನೀಡಿದರೂ ಪರಿಶೀಲನೆಗೆಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಕಳುಹಿಸಲಾಗುತ್ತದೆ. ಅವರಿಗೂ ಇಲಾಖೆಯ ಕಾರ್ಯದೊತ್ತಡಗಳಿರುವುದರಿಂದ ವಿಲೇವಾರಿ ಆಗದೆ ನೆನೆಗುದಿಯಲ್ಲಿರುತ್ತದೆ.

– ಕೇಶವ್ ಕುಂದರ್

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.