ದನ ಕಳ್ಳರ ವಿರುದ್ಧ ಮೂರು ಪ್ರಕರಣ: ನಾಲ್ವರ ಬಂಧನ


Team Udayavani, Jul 28, 2018, 10:48 AM IST

nalvara-bandana.jpg

ಮಂಗಳೂರು: ನಗರದ ಪಾಂಡೇಶ್ವರ, ಕಾವೂರು ಮತ್ತು ಮೂಡಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಪ್ರತ್ಯೇಕ ದನ ಕಳವು ಪ್ರಕರಣಗಳಿಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಅಮ್ಮೆಮ್ಮಾರ್‌ ನಿವಾಸಿ ಇಮ್ರಾನ್‌ ಯಾನೆ ಕುಟ್ಟ ಇಮ್ರಾನ್‌ (27), ಬಜಪೆ ಶಾಂತಿಗುಡ್ಡೆಯ ಉಮ್ಮರ್‌ ಫಾರೂಕ್‌ (32), ಕಸಬಾ ಬೆಂಗ್ರೆಯ ಅಬ್ದುಲ್‌ ಕಬೀರ್‌ ಯಾನೆ ಪಾರಿವಾಳ ಕಬೀರ್‌ (30) ಮತ್ತು ಎಡಪದವು ಬಡಗ ತೋಡಾರು ನಿವಾಸಿ ಕೆ. ಅಬ್ದುಲ್‌ ಬಶೀರ್‌ ಯಾನೆ ಅರ್ಗ ಬಶೀರ್‌ (42) ಬಂಧಿತರು. ಆರೋಪಿಗಳಿಂದ ಸ್ಕಾರ್ಪಿಯೋ ಮತ್ತು ಇನ್ನೊಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. 

ಪ್ರಕರಣ 1
ಜೂ.16 ಮತ್ತು 17ರಂದು ಮೂಡುಶೆಡ್ಡೆ ಬೈಲು ನಿವಾಸಿ ಪುರುಷೋತ್ತಮ ಅವರ  ಹಟ್ಟಿಯಿಂದ 2 ದನಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ಇಮ್ರಾನ್‌ ಹಾಗೂ ಫಾರೂಕ್‌ನನ್ನು ಬಂಧಿಸಲಾಗಿದೆ. 

ಆರೋಪಿಗಳ ಇಮ್ರಾನ್‌ ಯಾನೆ ಕುಟ್ಟ ಇಮ್ರಾನ್‌ ವಿರುದ್ಧ ಉಳ್ಳಾಲ, ಕೊಣಾಜೆ, ಬಜಪೆ, ಮಂಗಳೂರು ಗ್ರಾಮಾಂತರ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ ಹಾಗೂ ಕೊಡಗು ಜಿಲ್ಲೆಯ ಕುಶಾಲನಗರ, ಸೋಮವಾರಪೇಟೆ, ಹಾಸನ ಜಿಲ್ಲೆಯ ಸಕಲೇಶಪುರ, ಪೊಲೀಸ್‌ ಠಾಣೆಗಳಲ್ಲಿ ದನಕಳ್ಳತನ ಹಾಗೂ ಕೊಲೆ ಸಹಿತ ಒಟ್ಟು 20 ಪ್ರಕರಣಗಳಿವೆ.

ಫಾರೂಕ್‌ ವಿರುದ್ಧ ಬಜಪೆ, ಬಂಟ್ವಾಳ ನಗರ, ಉಪ್ಪಿನಂಗಡಿ, ವೇಣೂರು, ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ  ಠಾಣೆಗಳಲ್ಲಿ  ದನ ಕಳವು ಸಂಬಂಧಿಸಿ  10 ಪ್ರಕರಣಗಳಿವೆ. 

ಪ್ರಕರಣ 2
ಪಾಂಡೇಶ್ವರ ಗೂಡ್ಸ್‌ ಶೆಡ್‌ ಬಳಿ ಮೇಯುತ್ತಿದ್ದ 2 ದನ ಹಾಗೂ ಕರುವನ್ನು ಕಳವು ಮಾಡಿದ ಪ್ರಕರಣ ಕುರಿತಂತೆ  ಆರೋಪಿ ಕಸಬಾ ಬೆಂಗ್ರೆಯ ಅಬ್ದುಲ್‌ ಕಬೀರ್‌ ಯಾನೆ ಪಾರಿವಾಳ ಕಬೀರ್‌ (30) ಬಂಧಿತನಾಗಿದ್ದಾನೆ. 

ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ದನಗಳು ಮತ್ತು ಕರುವನ್ನು ಜು.5ರಂದು ಮೇಯಲು ಬಿಟ್ಟಿದ್ದು, ಕಳ್ಳರು ಅಲ್ಲಿಂದಲೇ ಕದ್ದೊಯ್ದಿದ್ದರು. 

ಕಬೀರ್‌ನಿಂದ ದನ ಕಳ್ಳತನ ಮಾಡಲು ಉಪಯೋಗಿಸಿದ ಮಾರುತಿ ರಿಟ್ಜ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈತನ ವಿರುದ್ಧ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ದರೋಡೆ ಪ್ರಕರಣ, ಬಜಪೆ ಪೊಲೀಸ್‌ ಠಾಣೆಯಲ್ಲಿ ದನಕಳ್ಳತನ ಪ್ರಕರಣ, ಉಳ್ಳಾಲ ಹಾಗೂ ಉಪ್ಪಿನಂಗಡಿ ಪೊಲೀಸ್‌ ಠಾಣೆಗಳಲ್ಲಿ ಮೊಬೈಲ್‌ ಕಳ್ಳತನ ಹಾಗೂ ಇತರ ಪ್ರಕರಣಗಳಿವೆ.

ಈತ  ಕೆಲವು ಪ್ರಕರಣಗಳಲ್ಲಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿದ್ದು,  ಈತನ ವಿರುದ್ಧ ವಾರಂಟ್‌ ಹೊರಡಿಸಲಾಗಿತ್ತು.

ಪ್ರಕರಣ 3
ಮೂಡಬಿದಿರೆ ಠಾಣಾ ವ್ಯಾಪ್ತಿಯ ಮೂರು ಕಡೆಗಳಲ್ಲಿ ನಡೆದ ದನಕಳವು ಪ್ರಕರಣಕ್ಕೆ ಸಂಬಂಧಿಸಿ ಎಡಪದವು ಬಡಗ ತೋಡಾರು ನಿವಾಸಿ ಕೆ. ಅಬ್ದುಲ್‌ ಬಶೀರ್‌ ಯಾನೆ ಅರ್ಗ ಬಶೀರ್‌ (42)ನನ್ನು ಬಂಧಿಸಲಾಗಿದೆ.

ಈತನ ಮೇಲೆ 2017ರಲ್ಲಿ  ಮೂಡ ಬಿದಿರೆ ರಿಂಗ್‌ರೋಡ್‌, ಒಂಟಿಕಟ್ಟೆ, ಬೊಗ್ರುಗುಡ್ಡೆ ಹಟ್ಟಿಯೊಂದರಿಂದ ದನಕಳವು ಪ್ರಕರಣ ಮಾತ್ರವಲ್ಲದೆ ಬಜಪೆ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.

ಈತನನ್ನು ಸಿಸಿಬಿ ಪೊಲೀಸರು ತೋಡಾರು ಬಳಿಯಿಂದ ವಶಕ್ಕೆ ಪಡೆದು ಮೂಡಬಿದಿರೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಆರೋಪಿಗಳು ಇನ್ನೂ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ವಿಚಾರಣೆ ವೇಳೆ ತಿಳಿದು ಬಂದಿದೆ. ಇನ್ನೂ ಹಲವು ಆರೋಪಿಗಳ‌ನ್ನು ಶೀಘ್ರವಾಗಿ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.