ಕಡಲ್ಕೊರೆತ ಸಂತ್ರಸ್ತರಿಗೆ ಮೂರು ದಿನಗಳೊಳಗೆ ಪರಿಹಾರ: ಖಾದರ್‌


Team Udayavani, Jun 15, 2019, 5:00 AM IST

q-6

ಉಳ್ಳಾಲ: ಕಡಲ್ಕೊರೆತಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿಯನ್ನು ಅವೈಜ್ಞಾನಿಕ ಎಂದು ಹೇಳಲು ಸಾಧ್ಯವಿಲ್ಲ. ಕಾಮಗಾರಿ ಪರಿಶೀಲನೆಗೆ ಎಡಿಬಿಯ ಪರಿಣತರ ತಂಡವಿದ್ದು, ಉಚ್ಚಿಲದಲ್ಲಿ ಕಾಮಗಾರಿ ಕೈಗೊಳ್ಳುವ ಮೊದಲು ಪುಣೆ, ಚೆನ್ನೈಮತ್ತು ಎಡಿಬಿ ತಜ್ಞರ ಸಮಿತಿ ಮಾರ್ಗದರ್ಶನದಲ್ಲಿ ಕಾಮಗಾರಿ ಆರಂಭಿಸಿದ್ದು, ಕಾಮಗಾರಿ ಪೂರ್ಣಗೊಂಡರೆ ಕಡಲ್ಕೊರೆತ ಸಮಸ್ಯೆ ಬಗೆಹರಿಯಲಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಅಭಿಪ್ರಾಯಪಟ್ಟರು.

ಉಳ್ಳಾಲ, ಸೋಮೇಶ್ವರ ಮತ್ತು ಉಚ್ಚಿಲದಲ್ಲಿ ಕಳೆದ ಮೂರು ದಿನಗಳಿಂದ ಎದುರಾಗಿರುವ ಕಡಲ್ಕೊರೆತ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು. ಈ ಪ್ರದೇಶದಲ್ಲಿ ನಡೆದ ಕಡಲ್ಕೊರೆತಕ್ಕೆ ಸಂಬಂಧಿಸಿ ಬಂದರು, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಿದ್ದು, ಸಂತ್ರಸ್ತರಿಗೆ ಮೂರು ದಿನಗಳೊಳಗೆ ಪರಿಹಾರ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ನಿರಾಶ್ರಿತರಿಗೆ ವಸತಿ ಪ್ರಸ್ತಾವ ಸರಕಾರಕ್ಕೆ ಸಲ್ಲಿಕೆ
ಕೋಟೆಕಾರಿನಲ್ಲಿ ಕಡಲ್ಕೊರೆತ ಸಂತ್ರಸ್ತರಿಗೆ ಒಂದೂವರೆ ಎಕರೆ ಜಮೀನು ಮಂಜೂರು ಮಾಡಲಾಗಿದೆ. ವಸತಿ ಸಮುತ್ಛಯ ನಿರ್ಮಿಸಿ ಅವರಿಗೆ ನೀಡುವ ಯೋಜನೆ ರೂಪಿಸಲಾಗಿತ್ತು. ಆದರೆ ಸರಕಾರದ ಯೋಜನೆಯಲ್ಲಿ ಒಂದು ಬೆಡ್‌ ರೂಮ್‌ ಮನೆಯನ್ನು ನೀಡುವ ಮಂಜೂರಾತಿಯೂ ದೊರೆತಿತ್ತು. ಅದು ಹೆಚ್ಚು ಜನರಿರುವ ಕುಟುಂಬಗಳಿಗೆ ಬಾಳಲು ಅಸಾಧ್ಯ ಎಂದು ಮತ್ತೆ ಕನಿಷ್ಠ ಎರಡು ಬೆಡ್‌ ರೂಮ್‌ ಇರುವ ಮನೆಗಳನ್ನು ನೀಡುವ ಸಲುವಾಗಿ ಪ್ರಸ್ತಾಪವನ್ನು ಸರಕಾರದ ಮುಂದೆ ಇರಿಸಲಾಗಿದೆ ಎಂದು ತಿಳಿಸಿದರು. ಈ ನಡುವೆ ಹಲವರಿಗೆ ಮಂಜೂರಾದ ಸ್ಥಳ ಮೀನುಗಾರಿಕೆ ಕೆಲಸಗಳಿಗೆ ಕಷ್ಟಕರ ಅದಕ್ಕಾಗಿ ಮುಂದೆ ಜಾಗವನ್ನು ಗುರುತಿಸುವ ಕಾರ್ಯವನ್ನು ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌, ಸಹಾಯಕ ಆಯುಕ್ತ ರವಿಚಂದ್ರ ನಾಯಕ್‌, ತಹಶೀಲ್ದಾರ್‌ ಟಿ.ಜಿ. ಗುರುಪ್ರಸಾದ್‌, ಉಳ್ಳಾಲ ಗ್ರಾಮಕರಣಿಕರಾದ ಪ್ರಮೋದ್‌, ಲಾವಣ್ಯ, ಗ್ರಾಮ ಸಹಾಯಕ ನವನೀತ್‌ ಉಳ್ಳಾಲ, ಕಿರಿಯ ಅಭಿಯಂತರ ರೇಣುಕಾ, ಗ್ರಾಮ ಸಹಾಯಕ ಸೋಮೇಶ್ವರ ಗೋಪಾಲ್‌, ಕಾಂಗ್ರೆಸ್‌ ಮುಖಂಡರಾದ ಈಶ್ವರ ಉಳ್ಳಾಲ್‌, ಸದಾಶಿವ ಉಳ್ಳಾಲ್‌ ಸುರೇಶ್‌ ಭಟ್ನಗರ, ಬಶೀರ್‌ ತಲಪಾಡಿ ಸಲಾಂ ಕೆ.ಸಿ. ರೋಡ್‌, ಉಳ್ಳಾಲ ನಗರಸಭಾ ಸದಸ್ಯರಾದ ಮಹಮ್ಮದ್‌ ಮುಕ್ಕಚ್ಚೇರಿ, ಬಶೀರ್‌, ಬಾಝಿಲ್‌ ಡಿ’ಸೋಜಾ, ರವಿಚಂದ್ರ ಗಟ್ಟಿ, ಸ್ಥಳೀಯರಾದ ಕೈಕೋ ಮಹಮ್ಮದ್‌, ಹಮೀದ್‌ ಕಿಲೇರಿಯಾನಗರ, ಶಾಬಾನ್‌ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮನೆ ಕಳದುಕೊಂಡವರೊಂದಿಗೆ ಸಚಿವರು ಮಾತನಾಡಿದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.