ರಸ್ತೆಗೆ ಉರುಳಿದ ಮರ ಮೂರು ತಾಸು ಹೆದ್ದಾರಿ ಸಂಚಾರ ಸ್ಥಗಿತ


Team Udayavani, Aug 7, 2017, 8:25 AM IST

mara.jpg

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರಿಯಡ್ಕದಲ್ಲಿ ಅಪಾಯಕಾರಿಯಾಗಿ ವಾಲಿಕೊಂಡು ನಿಂತಿದ್ದ ಬೃಹತ್‌ ಮರ ರವಿವಾರ ಬೆಳಗ್ಗೆ ಬುಡ ಸಮೇತ ಉರುಳಿ ರಸ್ತೆಗೆ ಬಿದ್ದ ಪರಿಣಾಮ ಮೂರು ತಾಸು ಕಾಲ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತಡೆ ಉಂಟಾಯಿತು.

ಪೆರಿಯಡ್ಕದಲ್ಲಿ ರಸ್ತೆ ಬದಿಯಲ್ಲಿ ಇದ್ದ ಬೃಹತ್‌ ದೇವದಾರು ಮರ ಹಲವು ಸಮಯದಿಂದ ವಾಲಿಕೊಂಡು ನಿಂತಿದ್ದು, ರವಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಮಳೆಯೊಂದಿಗೆ ಬೀಸಿದ ಭಾರೀ ಗಾಳಿಗೆ ಬುಡ ಸಮೇತ ಉರುಳಿ ಬಿದ್ದಿತು. ತತ್‌ಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಿದರೂ ಮೂರು ತಾಸಿನ ಬಳಿಕವೂ ಅವರ ಆಗಮನ ವಾಗಲಿಲ್ಲ. ಬಳಿಕ ಸ್ಥಳೀಯ ಗ್ರಾಮ ಪಂಚಾ ಯತ್‌ ಸದಸ್ಯರು ಊರವರ ಸಹಕಾರದೊಂದಿಗೆ ರೆಂಬೆ, ಕೊಂಬೆಗಳನ್ನು ಕಡಿದು ಮರವನ್ನು ಬದಿಗೆ ಸರಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕಾರು ಪಾರು
ಮರ ಉರುಳುವ ಕೆಲವೇ ಕ್ಷಣಗಳಿಗೆ ಮುನ್ನ ಬೆಂಗ ಳೂರಿ ನಿಂದ ಬಸ್‌ನಲ್ಲಿ ಉಪ್ಪಿನಂಗಡಿಗೆ ಬಂದು ಬಳಿಕ ಕಾರಿ ನಲ್ಲಿ ಕೊçಲಕ್ಕೆ ತೆರಳುತ್ತಿದ್ದ ನಾಲ್ವರಿದ್ದ ಕಾರೊಂದು ಇದೇ ದಾರಿಯಿಂದ ಹಾದುಹೋಗಿತ್ತು. ಕಾರು ಸಾಗು ತ್ತಿದ್ದಂತೆಯೇ ಮರ ಉರುಳಿತು ಎಂದು ಪ್ರತ್ಯಕ್ಷದರ್ಶಿ ಸ್ಥಳೀಯರು ಘಟನೆ ಬಗ್ಗೆ ವಿವರಿಸಿದರು.

ಮರ ಬಿದ್ದ ತತ್‌ಕ್ಷಣ ಅರಣ್ಯ ಇಲಾಖೆಗೆ ಮತ್ತು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಯಿತು ಪೊಲೀಸ್‌ ಠಾಣೆಯ ಹೈವೇ ಪಟ್ರೋಲ್‌ ವಾಹನ ಕೂಡಲೇ ಸ್ಥಳಕ್ಕೆ ಬಂದರೂ ಅರಣ್ಯ ಇಲಾಖೆಯವರು ಬರಲೇ ಇಲ್ಲ. ಬಳಿಕ ಗ್ರಾ.ಪಂ. ಸದಸ್ಯ ಯು.ಕೆ. ಇಬ್ರಾಹಿಂ ಮತ್ತು ಸ್ಥಳೀಯ ಪ್ರತಾಪ್‌ ಅವರು ಮರ ಕೊಯ್ಯುವ ಯಂತ್ರ ವೊಂದನ್ನು ತರಿಸಿ ಗೆಲ್ಲು , ರೆಂಬೆಗಳನ್ನು ತುಂಡರಿಸಿದರು.

ಅರಣ್ಯ ಇಲಾಖೆ ನಿರ್ಲಕ್ಷ
ಅಪಾಯಕಾರಿ ಮರ ತೆರವು ಮಾಡುವ ಬಗ್ಗೆ ಜನ ಸಂಪರ್ಕ ಸಭೆ, ಗ್ರಾಮ ಸಭೆ, ಪಂಚಾಯತ್‌ ಸಭೆಗಳ ಮೂಲಕ ಅರಣ್ಯ ಇಲಾಖೆಗೆ ತಿಳಿಸಲಾಗುತ್ತದೆ. ಆದರೆ ಇಲಾಖೆಯವರು ನಿರ್ಲಕ್ಷ é ತೋರುತ್ತ ಜನರ ಪ್ರಾಣದ ಜತೆ ಚೆಲ್ಲಾಟವಾಡುತ್ತಿದ್ದಾರೆ. ಇದೀಗ ಬಹಳ ಅಗತ್ಯದ ಕೆಲಸಕ್ಕೆ ಜರೂರಾಗಿ ಮಂಗಳೂರಿಗೆ ಹೋಗಬೇಕಾಗಿತ್ತು. ಅಮೂಲ್ಯವಾದ ಎರಡು ತಾಸು ಇಲ್ಲೇ ಕಳೆದು ಹೋಯಿತು. ನಮ್ಮ ಸಂಕಷ್ಟಗಳೂ ಅರಣ್ಯ ಇಲಾಖೆಯವರಿಗೆ ಅರ್ಥ ಆಗುವು ದಿಲ್ಲ ಎಂದು ಬಸ್‌ ಮತ್ತು ಇತರ ವಾಹನಗಳಲ್ಲಿ ಇದ್ದ ಪ್ರಯಾಣಿಕರು ಹಿಡಿಶಾಪ ಹಾಕುತ್ತಿರುವುದು ಕಂಡುಬಂತು.
ಕೆಲವು ವಾಹನಗಳವರು ಕೊçಲದಿಂದ ಗಂಡಿಬಾಗಿಲು ರಸ್ತೆಯಾಗಿ ಉಪ್ಪಿನಂಗಡಿಗೆ ಯಾನ ಮುಂದುವರಿಸಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.