ತಬ್ಲಿಘಿ ಜಮಾತ್ ನಲ್ಲಿ ಪಾಲ್ಗೊಂಡ ಇಬ್ಬರು ಸೇರಿ ಮಂಗಳೂರಿನಲ್ಲಿ ಮೂವರಿಗೆ ಸೋಂಕು ದೃಢ
Team Udayavani, Apr 4, 2020, 6:16 PM IST
ಮಂಗಳೂರು: ದಿಲ್ಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಗೆ ಹೋದ ಇಬ್ಬರು ಸೇರಿದಂತೆ ಮೂವರಿಗೆ ಕೋವಿಡ್-19 ಸೋಂಕು ಪಾಸಿಟಿವ್ ಇರುವುದು ಶನಿವಾರ ದೃಢಪಟ್ಟಿದೆ.
ಶನಿವಾರ ಸಂಜೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಹಿರಂಗಪಡಿಸಿದ್ದು ರಾಜ್ಯದಲ್ಲಿ ಇಂದು 16 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ.
ದಿಲ್ಲಿಯ ನಿಜಾಮುದ್ದೀನ್ ಸಮಾವೇಶದಲ್ಲಿ ಪಾಲ್ಗೊಂಡ ದಕ್ಷಿಣ ಕನ್ನಡ ಜಿಲ್ಲೆಯ 43 ಮತ್ತು 52 ವರ್ಷದ ಇಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಓರ್ವ ಬಂಟ್ವಾಳ ತಾಲೂಕಿನ ತುಂಬೆ ಮತ್ತು ಮತ್ತೋರ್ವ ಉಳ್ಳಾಲ ನಿವಾಸಿಯಾಗಿದ್ದಾರೆ.
ಮತ್ತೋರ್ವ ಉಡುಪಿ ಜಿಲ್ಲೆಯ 63 ವರ್ಷದ ಮಹಿಳೆಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು ಇವರು ಮಾರ್ಚ್ 22 ರಂದು ದುಬೈನಿಂದ ಬಂದು ಮಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿ ಇದ್ದರು. ಇಂದು ಮೂವರಿಗೆ ಸೋಂಕು ದೃಢಪಟ್ಟಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 12 ಕ್ಕೇರಿದೆ.
ರಾಜ್ಯದಲ್ಲಿ ಒಟ್ಟು 144 ಜನರಿಗೆ ಸೋಂಕು ತಗುಲಿದ್ದು, ಅದರಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್