ಹಳೆಯಂಗಡಿ ಸಿಡಿಲಿನ ಆಘಾತ: ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಬಾಲಕ ಸಾವು!
Team Udayavani, Apr 21, 2021, 10:56 AM IST
ಹಳೆಯಂಗಡಿ: ಇಲ್ಲಿನ ಬೊಳ್ಳೂರಿನ ಇಂದಿರಾ ನಗರದಲ್ಲಿ ಆಟವಾಡುತ್ತಿದ್ದ ಪುಟ್ಟ ಮಕ್ಕಳು ಸಿಡಿಲಿನ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ನಡೆಸುತ್ತಿದ್ದ ಇಬ್ಬರಲ್ಲಿ ಒರ್ವ ಬಾಲಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಇಂದಿರಾ ನಗರದ ಬೊಳ್ಳೂರು ಮಸೀದಿ ಹಿಂಭಾಗದ ಮನೆಯ ಮುಂಭಾಗದಲ್ಲಿ ಖಾಸಗಿ ಜಮೀನಿನಲ್ಲಿ ಆಟವಾಡುತ್ತಿದ್ದ ಮನ್ಸೂರ್ ಎಂಬುವರ ಎರಡನೇ ಪುತ್ರ ನಿಹಾನ್ (5 ವ) ಸಾವನ್ನಪ್ಪಿದ್ದು, ಗಂಗಾವತಿ ಮೂಲದ ದುರ್ಗಪ್ಪ ಎಂಬುವವರ ಮಗ ಮಾರುತೇಶ್ (6 ವ) ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾ ಸ್ಥಿತಿಯಲ್ಲಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮತ್ತು ಸ್ವರಾಜ್ ಶೆಟ್ಟಿ
ಮಂಗಳವಾರ ಸಂಜೆ ಮನೆಯ ಹತ್ತಿರ ಆಟವಾಡುತ್ತಿದ್ದಾಗ ಸಿಡಿಲಿನ ಆಘಾತ ಬಡಿದ ಪರಿಣಾಮ ಮಕ್ಕಳು ಸ್ಥಳದಲ್ಲಿಯೇ ಮೂರ್ಛೆ ಹೋಗಿದ್ದರು. ನಂತರ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ