ಇನ್ನು ನಗರದ ಸಿಟಿ ಬಸ್‌ಗಳಲ್ಲೂ ಟಿಕೆಟ್ ಚೆಕ್ಕಿಂಗ್‌ ವ್ಯವಸ್ಥೆ


Team Udayavani, Apr 26, 2019, 6:00 AM IST

2304MLR1-TICKET-CHECKING

ಸಿಟಿ ಬಸ್‌ಗಳಲ್ಲಿ ಟಿಕೆಟ್ ತಾಪಾಸಣೆ ನಡೆಸುತ್ತಿರುವುದು.

ಮಹಾನಗರ: ಸರಕಾರಿ ಬಸ್‌ಗಳಲ್ಲಿ ನಡೆಯುವ ಟಿಕೆಟ್ ತಪಾಸಣೆ ಇದೀಗ ನಗರದಲ್ಲಿ ಓಡಾಡುವ ಸಿಟಿ ಬಸ್‌ಗಳಿಗೂ ಬಂದಿದೆ.

ನಗರದಲ್ಲಿ ಪ್ರತಿದಿನ ಓಡಾಡುವ 300ಕ್ಕೂ ಹೆಚ್ಚಿನ ಸಿಟಿ ಬಸ್‌ಗಳ ಪೈಕಿ ಹೆಚ್ಚಿನ ಬಸ್‌ಗಳಲ್ಲಿ ನಿರ್ವಾಹಕರು ಟಿಕೆಟ್ ನೀಡುವುದಿಲ್ಲ. ಇದನ್ನು ತಡೆಯುವ ಉದ್ದೇಶದಿಂದ ಸಿಟಿ ಬಸ್‌ಗಳಲ್ಲಿ ಟಿಕೆಟ್ ತಾಪಾಸಣೆ ವ್ಯವಸ್ಥೆಯನ್ನು ಪರಿಚಯಿಸಲು ಸಿಟಿ ಬಸ್‌ ಮಾಲಕರ ಸಂಘ ತೀರ್ಮಾನಿಸಿದೆ.

ಸಿಟಿ ಬಸ್‌ ಸಂಪರ್ಕ ವ್ಯವಸ್ಥೆ ದಿನದಿಂದ ದಿನಕ್ಕೆ ಡಿಜಿಟಲೀಕೃತವಾಗುತ್ತಿದೆ. ಮೊನ್ನೆಯಷ್ಟೇ ‘ಚಲೋ’ ಎಂಬ ಆ್ಯಪ್‌ ಬಿಡುಗಡೆಗೊಂಡಿದ್ದು, ನಗರದಲ್ಲಿ ಓಡಾಡುವ ಎಲ್ಲ ಬಸ್‌ಗಳಿಗೆ ಜಿಪಿಎಸ್‌ ಅಳವಡಿಕೆ ಅನುಷ್ಠಾನದಲ್ಲಿದೆ. ಸಾರಿಗೆ ವ್ಯವಸ್ಥೆಯಲ್ಲಿ ಇಷ್ಟೆಲ್ಲ ಹೊಸತನ ತಂದರೂ, ಟಿಕೆಟ್ ನೀಡದಿರುವ ಸಮಸ್ಯೆಗೆ ಮಾತ್ರ ಈವರೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ಇದೀಗ ಸಿಟಿ ಬಸ್‌ಗಳಲ್ಲಿ ಟಿಕೆಟ್ ಚೆಕ್ಕಿಂಗ್‌ ಮಂದಿ ಓಡಾಡಲಿದ್ದಾರೆ.

ಸ್ಟೇಟ್ಬ್ಯಾಂಕ್‌-ಅತ್ತಾವರ-ಮಂಗಳಾದೇವಿ (ರೂಟ್ ನಂ.27) ರೂಟ್‌ನಲ್ಲಿ ಈಗಾಗಲೇ ಟಿಕೆಟ್ ಚೆಕ್ಕಿಂಗ್‌ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಕೆಲವೇ ದಿನಗಳಲ್ಲಿಯೇ ತಲಪಾಡಿ ಮತ್ತು ರಥಬೀದಿ ಕಡೆಗಳಲ್ಲಿ ಸಂಚರಿಸುವ ಬಸ್‌ಗಳಿಗೂ ಟಿಕೆಟ್ ಚೆಕ್ಕಿಂಗ್‌ ಮಂದಿಯನ್ನು ನಿಯೋಜಿಸಲಾಗುತ್ತಿದೆ. ಹಂತ ಹಂತವಾಗಿ ನಗರದ ಎಲ್ಲ ಸಿಟಿ ಬಸ್‌ ಮಾರ್ಗಗಳಲ್ಲೂ ನೂತನ ಯೋಜನೆ ಅನುಷ್ಠಾನಿಸಿ, ಬಸ್‌ ನಿರ್ವಾಹಕ ಪ್ರತಿ ಪ್ರಯಾಣಿಕರಿಗೂ ಟಿಕೆಟ್ ನೀಡುವಂತೆ ಮಾಡುವುದೇ ಇದರ ಉದ್ದೇಶ.

ಯಾವ ರೀತಿ ನಿರ್ವಹಣೆ?
ಸಿಟಿ ಬಸ್‌ ಮಾಲಕರ ಸಂಘ ಮತ್ತು ‘ಚಲೋ’ ಆ್ಯಪ್‌ ಸಂಸ್ಥೆಯ ಸಹಯೋಗದೊಂದಿಗೆ ಈ ಕಾರ್ಯಾಚರಣೆ ನಡೆಯುತ್ತದೆ. ಟಿಕೆಟ್ ಚೆಕ್ಕಿಂಗ್‌ ಮಾಡುವ ಸಲುವಾಗಿ ನಾಲ್ಕರಿಂದ ಐದು ಮಂದಿಯನ್ನು ನಿಯೋಜಿಸಲಾಗುತ್ತದೆ. ಅವರು ಪ್ರತೀದಿನ ಬಸ್‌ ಸಂಚರಿಸುವ ವೇಳೆ ದಿಢೀರ್‌ ಆಗಮಿಸಿ, ಪ್ರಯಾಣಿಕರ ಟಿಕೆಟ್ ಪರಿಶೀಲನೆ ಮಾಡುತ್ತಾರೆ. ಒಂದು ವೇಳೆ ಪ್ರಯಾಣಿಕ ಟಿಕೆಟ್ ತೆಗೆದುಕೊಳ್ಳದಿದ್ದರೆ, ಟಿಕೆಟ್ ಬಗೆಗಿನ ಮಹತ್ವವನ್ನು ಹೇಳಲಾಗುತ್ತದೆ. ನಿರ್ವಾಹಕ ಟಿಕೆಟ್ ನೀಡದಿದ್ದರೆ ಅವರಿಗೆ ಎಚ್ಚರಿಕೆ ನೀಡಲಾಗುತ್ತದೆ.

ಸ್ಪಾಟ್ ಟಿಕೆಟಿಂಗ್‌ ವ್ಯವಸ್ಥೆ
ಟಿಕೆಟ್ ವ್ಯವಸ್ಥೆಯನ್ನು ಸುಗಮವಾಗಿ ನಿರ್ವಹಿಸಬೇಕು ಎಂಬ ಉದ್ದೇಶದಿಂದ ಸ್ಪಾಟ್ ಟಿಕೆಟಿಂಗ್‌ ವ್ಯವಸ್ಥೆ ಆರಂಭಿಸಲಾಗಿದೆ. ಮೊದಲನೇ ಹಂತವಾಗಿ ನಗರದ ಅತ್ತಾವರ ಬಸ್‌ ನಿಲ್ದಾಣದಲ್ಲಿ ಪ್ರಾರಂಭಿಸಲಾಗಿದೆ. ಈ ಬಸ್‌ ನಿಲ್ದಾಣದಲ್ಲಿ ಸದಾ ಜನಜಂಗುಳಿ ಇರುತ್ತದೆ. ಈ ಸಮಯದಲ್ಲಿ ಚಲೋ ಕಂಪೆನಿಯ ಅಧಿಕಾರಿಯೊಬ್ಬರು ಟಿಕೆಟ್ ವ್ಯವಸ್ಥೆಗೆಂದು ಬಸ್‌ ನಿಲ್ದಾಣದಲ್ಲಿ ನಿಂತಿರುತ್ತಾರೆ. ಪ್ರಯಾಣಿಕರಿಗೆ ಸ್ಥಳದಲ್ಲಿಯೇ ಟಿಕೆಟ್ ವ್ಯವಸ್ಥೆ ಕಲ್ಪಿಸುತ್ತಾರೆ.

ಟಿಕೆಟ್‌ನಲ್ಲೇ ಅರಿವು
ಮುಂದಿನ ದಿನಗಳಲ್ಲಿ ಸಿಟಿ ಬಸ್‌ಗಳಲ್ಲಿ ನೀಡುವ ಟಿಕೆಟ್‌ನಲ್ಲಿ ಪ್ರಯಾಣಿಕರು ದೂರುಗಳನ್ನು ನೀಡಲು ವಾಟ್ಸಾಪ್‌ ಸಂಖ್ಯೆ, ಜತೆಗೆ ಟಿಕೆಟ್ ತೆಗೆದುಕೊಳ್ಳುವ ಬಗ್ಗೆ ಅರಿವು ಮೂಡಿಸುವ ಸಂದೇಶ ಇರಲಿದೆ. ಈಗಾಗಲೇ ಅತ್ತಾವರ ರೂಟ್ ಬಸ್‌ ಟಿಕೆಟ್‌ನಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದೆ.

ಟಿಕೆಟ್ ತೆಗೆದುಕೊಳ್ಳದಿದ್ದರೆ ಏನಾಗುತ್ತೆ?

ಟಿಕೆಟ್ ಯಾಕೆ ತೆಗೆದುಕೊಳ್ಳಬೇಕು? ತೆಗೆದುಕೊಳ್ಳದಿದ್ದರೆ ಏನಾಗುತ್ತದೆ ಎಂಬ ಪ್ರಶ್ನೆ ಪ್ರಯಾಣಿಕರಲ್ಲಿ ಸಹಜವಾಗಿಯೇ ಮೂಡುತ್ತದೆ. ಒಂದು ವೇಳೆ ನೀವು ಪ್ರಯಾಣಿಸುವ ಬಸ್‌ ಅಪಘಾತಕ್ಕೆ ಒಳಗಾದರೆ ಆ ಸಮಯ ನಿಮಗೆ ಪರಿಹಾರ ಸಿಗಲು ಟಿಕೆಟ್ ಅತೀ ಅವಶ್ಯ. ಆ ವೇಳೆ ಇನ್ಶೂರೆನ್ಸ್‌ ಕಂಪೆನಿಯವರು ನಿಮಗೆ ನೀಡುವ ಪರಿಹಾರಕ್ಕೆ ಟಿಕೆಟ್ ಪರಿಗಣಿಸುತ್ತಾರೆ. ಒಂದು ವೇಳೆ ಕೈಯಲ್ಲಿ ಟಿಕೆಟ್ ಇಲ್ಲದಿದ್ದರೆ ಪರಿಹಾರ ಸಿಗುವುದಿಲ್ಲ. ಅಲ್ಲದೆ, ಕಾನೂನಿನ ರೀತಿಯೂ ಇದು ಅಪರಾಧವಾಗುತ್ತದೆ.

ಪ್ರಯಾಣಿಕರಿಗೂ ಅರಿವು
ನಿರ್ವಾಹಕರು ಪ್ರತಿಯೊಬ್ಬ ಪ್ರಯಾಣಿಕರಿಗೂ ಟಿಕೆಟ್ ನೀಡಬೇಕು ಎಂದು ಈಗಾಗಲೇ ಅಸೋಸಿಯೇಶನ್‌ಗೆ ತಿಳಿಸಿದ್ದೇವೆ. ಒಂದು ವೇಳೆ ಟಿಕೆಟ್ ನೀಡದಿದ್ದರೆ ಅವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಪ್ರಯಾಣಿಕರಿಗೆ ಟಿಕೆಟ್‌ನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈಗಾಗಲೇ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.

– ಜಾನ್‌ ಮಿಸ್ಕಿತ್‌
ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ)ಹೊಸ ವ್ಯವಸ್ಥೆ
ನಗರದಲ್ಲಿ ಸಂಚರಿಸುವ ಸಿಟಿ ಬಸ್‌ ನಿರ್ವಾಹಕರು ಪ್ರತಿಯೊಬ್ಬ ಪ್ರಯಾಣಿಕರಿಗೂ ಟಿಕೆಟ್ ನೀಡಬೇಕು. ಒಂದು ವೇಳೆ ನೀಡದಿದ್ದರೆ ಪ್ರಯಾಣಿಕ ನಿರ್ವಾಹಕರ ಬಳಿ ಟಿಕೆಟ್ ಕೇಳಿ ಪಡೆದುಕೊಳ್ಳಬೇಕು. ಟಿಕೆಟ್ ವ್ಯವಸ್ಥೆ ಸುಗಮವಾಗಿ ಸಾಗಲು ಟಿಕೆಟ್ ಚಕ್ಕಿಂಗ್‌ ವ್ಯವಸ್ಥೆ ಜಾರಿಗೊಳಿಸಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ರೂಟ್‌ಗಳಿಗೆ ಪರಿಚಯಿಸುತ್ತೇವೆ.

– ದಿಲ್ರಾಜ್‌ ಆಳ್ವ, ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ
-ನವೀನ್‌ ಭಟ್ ಇಳಂತಿಲ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.