ಟಿಕೆಟ್ ರಹಿತ ಪ್ರಯಾಣ: ಸಿಕ್ಕಿಬಿದ್ದು ದಂಡ ತೆತ್ತ ರೈಲ್ವೇ ಹೋರಾಟಗಾರ
Team Udayavani, Aug 6, 2018, 2:46 PM IST
ಮಂಗಳೂರು: ರೈಲ್ವೇ ಹೋರಾಟಗಾರ ಹಾಗೂ ರೈಲ್ವೇ ಅಭಿವೃದ್ಧಿ ಸಮಿತಿಯ ಮಾಜಿ ಸದಸ್ಯರೊಬ್ಬರು ಪ್ಯಾಸೆಂಜರ್ ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿ ಟಿಕೆಟ್ ತಪಾಸಣಾ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದು ದಂಡ ಪಾವತಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಬಕ ಪುತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಮಾರ್ಗ ಮಧ್ಯೆ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಆಗ ಈ ರೈಲ್ವೇ ಹೋರಾಟಗಾರರ ಬಳಿ ಟಿಕೆಟ್ ಇರಲಿಲ್ಲ ಎನ್ನಲಾಗಿದೆ. ತಾನು ರೈಲ್ವೇ ಅಭಿವೃದ್ಧಿ ಸಮಿತಿಯ ಮಾಜಿ ಸದಸ್ಯ ಎಂದು ಪರಿಚಯಿಸಿದರೂ ಟಿಕೆಟ್ ಅಥವಾ ಪಾಸ್ ಇಲ್ಲದೆ ಪ್ರಯಾಣಿಸಲು ಅವಕಾಶ ಇಲ್ಲ ಎಂದು ಹೇಳಿ ದಂಡ ವಿಧಿಸಿದ್ದಾರೆ. ರೈಲ್ವೇ ಹೋರಾಟಗಾರರು ರೈಲ್ವೇ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಿ ದರೂ ದಂಡದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ.
ಘಟನೆ ಜು. 14ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಬಕ ಪುತ್ತೂರಿನಿಂದ ಮಂಗಳೂರು ಸೆಂಟ್ರಲ್ಗೆ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣ ದರ 15 ರೂ. ಆಗಿದ್ದು, ಟಿಕೆಟ್ ರಹಿತ ಪ್ರಯಾಣಕ್ಕೆ 250 ರೂ. ದಂಡ ಶುಲ್ಕ ಸೇರಿಸಿ ಒಟ್ಟು 265 ರೂ. ಪಾವತಿಸಿ ಸಹಿ ಮಾಡಿದ್ದಾರೆ ಎಂದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ