ತಂಬಾಕು ಮುಕ್ತ ಜಿಲ್ಲೆ; ದ.ಕ.ದ ಎಲ್ಲ ತಾಲೂಕುಗಳಲ್ಲಿ ವಿಶೇಷ ತಂಡ ರಚನೆ

ತಂಬಾಕು ನಿಯಂತ್ರಣ ಕಾಯ್ದೆ; ಕಟ್ಟುನಿಟ್ಟಾಗಿ ಜಾರಿಗೆ ಕ್ರಮ

Team Udayavani, Dec 15, 2019, 5:21 AM IST

zx-17

ಮಹಾನಗರ: ತಂಬಾಕು ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯ ಎಲ್ಲ ತಾಲೂಕು ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ತಂಡಗಳನ್ನು ರಚನೆ ಮಾಡಲು ಜಿಲ್ಲಾಡಳಿತ ತೀರ್ಮಾನ ಮಾಡಿದೆ.

ಹೆಚ್ಚಾಗಿ ತಂಬಾಕು ಬಳಕೆ ಮಾಡುವ ಪೆಟ್ಟಿ ಅಂಗಡಿ, ವೈನ್‌ಶಾಪ್‌ ಸಹಿತ ಮತ್ತಿತರ ಪ್ರದೇಶಗಳ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣು ಇಟ್ಟಿದ್ದು, ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸುವ ಪಣ ತೊಟ್ಟಿದೆ. ಈವರೆಗೆ ಜಿಲ್ಲಾ ಮಟ್ಟದಲ್ಲಿ ನಗರ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಕಾರ್ಯಾಚರಣೆ ನಡೆಯುತ್ತಿತ್ತು. ಇದೀಗ ತಾ| ಮಟ್ಟಕ್ಕೆ ವಿಸ್ತರಣೆ ಮಾಡಲಾಗಿದೆ.

ತಾ| ಮಟ್ಟದಲ್ಲಿ ಒಟ್ಟು 12-15 ಮಂದಿಯ ತಂಡ ರಚನೆಯಾಗಲಿದ್ದು, ಇದರಲ್ಲಿ ತಹಶೀಲ್ದಾರ್‌, ಉಪ ತಹಶೀಲ್ದಾರ್‌, ಕಂದಾಯಾಧಿಕಾರಿ, ತಾಲೂಕು ಮಟ್ಟದ ಆರೋಗ್ಯಾಧಿಕಾರಿ, ಆಡಳಿತ ವೈದ್ಯಾಧಿಕಾರಿ, ಶಿಕ್ಷಣಾಧಿಕಾರಿ, ಪೊಲೀಸ್‌ ಅಧಿಕಾರಿ ಒಳಗೊಂಡಿರುತ್ತಾರೆ. ಜಿಲ್ಲೆಯ ಕೆಲವೊಂದು ಹಳ್ಳಿ ಪ್ರದೇಶಗಳಲ್ಲಿ ಇನ್ನೂ, ಅನಧಿಕೃತವಾಗಿ ತಂಬಾಕು ಮಾರಾಟ ನಡೆಯುತ್ತಿದೆ. ಅಲ್ಲದೆ, ಹಳ್ಳಿಗಳಲ್ಲಿನ ಶಾಲೆಗಳ 100 ಗಜ ಅಂತರದಲ್ಲೇ ಬೀಡಿ, ಸಿಗರೇಟ್‌ನಂತ ಅಮಲು ಪದಾರ್ಥಗಳು ಸಿಗುತ್ತವೆೆ.

ಶಿಕ್ಷೆ ಪ್ರಮಾಣ ಹೇಗಿದೆ?
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಎಚ್ಚರಿಕೆಯ ಫಲಕ ಇಲ್ಲದಿರುವುದು ಅಲ್ಲದೆ, ಸಾರ್ವಜನಿಕ ಸ್ಥಳದಲ್ಲಿ ಲೈಟರ್‌, ಬೆಂಕಿ ಕಡ್ಡಿ ಪೊಟ್ಟಣ ಇಟ್ಟರೆ 200 ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ. ತಂಬಾಕು ಬ್ರಾಂಡ್‌ ಹೆಸರಿನೊಂದಿಗೆ ಜಾಹೀರಾತು ಫಲಕ, ಯಾವುದೇ ರೂಪ ದಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಮೊದಲ ಅಪರಾಧಕ್ಕೆ 1,000 ರೂ. ದಂಡ ಅಥವಾ 2 ವರ್ಷ ಜೈಲು ಶಿಕ್ಷೆ ಅಥವಾ ಈ ಎರಡೂ ಶಿಕ್ಷೆ ವಿಧಿಸಬ ಹುದು. ಪದೇ ಪದೇ ಅಪರಾಧ ಎಸಗಿ ದರೆ 5,000 ರೂ. ದಂಡ ಅಥವಾ 5 ವರ್ಷ ಜೈಲು ಶಿಕ್ಷೆ ನೀಡಬಹುದು. 18 ವರ್ಷ ಒಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ, ಚಿಲ್ಲರೆ ಅಂಗಡಿಗಳಲ್ಲಿ ಸೂಚನ ಫಲಕ ಹಾಕದಿ ರುವುದು, ತಂಬಾಕು ಉತ್ಪನ್ನಗಳ ಪ್ರದರ್ಶನಕ್ಕೆ 200 ರೂ. ದಂಡ ವಿಧಿಸಬ ಹುದು. ತಂಬಾಕು ಉತ್ಪನ್ನ ಪ್ಯಾಕ್‌ನಲ್ಲಿ ಆರೋಗ್ಯ ಎಚ್ಚರಿಕೆಯ ಚಿತ್ರಗಳು ಇರದಿರುವುದು, ಎಚ್ಚರಿಕೆ ಚಿತ್ರ  ಗಳು ಶೇ.85ಕ್ಕಿಂತ ಕಡಿಮೆ ಅಳತೆಯ ಲ್ಲಿರು ವುದು, ಹಳೆಯ ಎಚ್ಚರಿಕೆ ಚಿತ್ರ ಹಾಕಿ ದ್ದರೆ ತಯಾರಕರಿಗೆ ಮೊದಲನೇ ಅಪರಾ ಧಕ್ಕೆ 2 ವರ್ಷ ಶಿಕ್ಷೆ ಅಥವಾ 5,000 ರೂ. ದಂಡ, ಎರಡನೇ ಅಪರಾಧಕ್ಕೆ 5 ವರ್ಷ ಶಿಕ್ಷೆ ಅಥವಾ 5.000ರೂ. ದಂಡ ವಿಧಿಸ ಬ ಹುದು. ಚಿಲ್ಲರೆ ವ್ಯಾಪಾರಿಗಳಿಗೆ ಮೊದಲ ಅಪ ರಾಧಕ್ಕೆ 1 ವರ್ಷ ಶಿಕ್ಷೆ ಅಥವಾ 1,000 ರೂ. ದಂಡ, ಎರಡನೇ ಅಪರಾಧಕ್ಕೆ 2 ವರ್ಷ ಶಿಕ್ಷೆ ಅಥವಾ 3,000 ರೂ. ದಂಡ ವಿಧಿ ಸಲು ಕಾನೂನಿ ನಲ್ಲಿ ಅವಕಾಶವಿದೆ.

ತಂಬಾಕು ನಿಯಂತ್ರಣ ಕಾರ್ನರ್‌
ಎಲ್ಲ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ, ತಂಬಾಕು ಸೇವನೆ ನಿಷೇಧ ಎಂಬ ನಿಯಮವಿದೆ. ಶೇ.98.36ರಷ್ಟು ಶಾಲೆ ಮತ್ತು ಶೇ.97.5ರಷ್ಟು ಕಾಲೇಜುಗಳಲ್ಲಿ ನೋ ಸ್ಮೋಕಿಂಗ್‌ ವಲಯ ಮಾಡಲಾಗಿದೆ. ತಂಬಾಕು ನಿಯಂತ್ರಣ ಘಟಕವು ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ತಂಬಾಕು ನಿಯಂತ್ರಣ ಕಾರ್ನರ್‌ ಮಾಡುವ ನಿಟ್ಟಿನಲ್ಲಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ವಿನೂತನವಾಗಿ ಡಿಸೈನ್‌ ಮಾಡಲಾದ ತಂಬಾಕು ಸೇವನೆ ಪರಿಣಾಮಗಳ ಕುರಿತು ಕಿರುಚಿತ್ರಗಳನ್ನು ತೋರಿಸುವುದು, ಜಾಗೃತಿ ಮೂಡಿಸುವುದು

ಈ ಕಾರ್ನರ್‌ ಉದ್ದೇಶ. ಅನಧಿಕೃತ ತಂಬಾಕು ಮಾರಾಟ ತಡೆಗೆ ಕ್ರಮ ದಕ್ಷಿಣ ಕನ್ನಡ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಪ್ರತೀ ತಾಲೂಕು ಮಟ್ಟದಲ್ಲಿ ಅನಧಿಕೃತ ತಂಬಾಕು ಮಾರಾಟ ತಡೆಯುವ ನಿಟ್ಟಿನಲ್ಲಿ ಕಾರ್ಯಾಚರಣೆಗೆ ತಂಡ ರಚಿಸಲಾಗುವುದು. ಇದೇ ತಿಂಗಳು ತರಬೇತಿ ಬಳಿಕ, ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗುವುದು.
 - ಸಿಂಧೂ ಬಿ. ರೂಪೇಶ್‌, ಜಿಲ್ಲಾಧಿಕಾರಿ

- ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.