ಇಂದು ಬ್ರಹ್ಮರಥೋತ್ಸವ, ಪುತ್ತೂರು ಬೆಡಿ


Team Udayavani, Apr 17, 2019, 6:00 AM IST

r-6

ಪುತ್ತೂರು: ಸೀಮೆಯ ಒಡೆಯ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ರಥೋತ್ಸವ, ಪುತ್ತೂರು ಬೆಡಿ ಎ. 17ರಂದು ಬುಧವಾರ ರಾತ್ರಿ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ದೇವರ ನಡೆ ದೇಗುಲವಾಗಿರುವ ಪತಾಕೆ, ಅಷ್ಟ ದಿಕಾ³ಲ ಕರು, ಶಿಖರ ಕಲಶ, ಶ್ವೇತ ಚಕ್ರ ಮತ್ತು ಸತ್ತಿಗೆ ಅಳವಡಿಸಿದ 70 ಅಡಿ ಎತ್ತರದ ಬ್ರಹ್ಮರಥದಲ್ಲಿ ವರ್ಷದಲ್ಲಿ ಶ್ರೀ ದೇವರು ವಿರಾಜಮಾನರಾಗಲಿದ್ದಾರೆ. ರಾತ್ರಿ 8ರ ಅನಂತರ ದೇವಾಲಯದ ಮುಂಭಾಗದ ರಥ ಬೀದಿಯಲ್ಲಿ 400 ಮೀ. ಉದ್ದಕ್ಕೆ ಬ್ರಹ್ಮರಥ ತೆರಳಿ ದೇವಾಲಯದ ಭಾಗಕ್ಕೆ ಮರಳುತ್ತದೆ.

ಈ ಕ್ಷಣ ಅಪೂರ್ವ
ಬ್ರಹ್ಮವಾಹಕರು ಶ್ರೀ ಮಹಾಲಿಂಗೇಶ್ವರ ದೇವರ ಉತ್ಸವ ಮೂರ್ತಿಯನ್ನು ತಲೆಯ ಮೇಲೆ ಹೊತ್ತು ಬ್ರಹ್ಮರಥವನ್ನು ಏರುವ ಸಮಯ ಅಪೂರ್ವ ಧಾರ್ಮಿಕ ಕ್ಷಣ. ಚೆಂಡೆ ಮೇಳ, ಮಂಗಳವಾದ್ಯ, ಬ್ಯಾಂಡ್‌ ವಾಲಗ, ಶಂಖ, ಜಾಗಟೆ, ಮಂಗಳ ಕರ ನಿನಾದದ ಹಿನ್ನೆಲೆಯಲ್ಲಿ ಶ್ರೀ ದೇವರು ಬ್ರಹ್ಮರಥಾರೂಢರಾಗುತ್ತಾರೆ. ದೇವಾಲ ಯದ ಮುಂಭಾಗದ ಗದ್ದೆಯಲ್ಲಿ ಸೇರಿದ ಸಹಸ್ರಾರು ಭಕ್ತರು ಏಕ ಕಂಠ ದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಪಾದಾರ ವಿಂದಗಳಿಗೆ ಗೋವಿಂದ ಎನ್ನಿ ಗೋವಿಂದ ಎಂದು ಜಯಘೋಷ ಹಾಕುತ್ತಾರೆ.

ಶ್ರೀ ಮಹಾಲಿಂಗೇಶ್ವರ ದೇವಾಲಯದ ಎದುರುಗದ್ದೆಯಲ್ಲಿ ಬ್ರಹ್ಮರಥೋತ್ಸವದ ಸಂದರ್ಭದಲ್ಲಿ ರಥೋತ್ಸವ ಮತ್ತು ಸುಡುಮದ್ದು ಪ್ರದರ್ಶನಕ್ಕೆ 1 ಲಕ್ಷಕ್ಕೂ ಮಿಕ್ಕಿ ಜನಸಾಗರ ಸೇರುತ್ತದೆ. ಸೀಮಾತೀತವಾಗಿ ದೇಶದಾದ್ಯಂತ ಇರುವ ಭಕ್ತರು ರಥೋತ್ಸ ವವನ್ನು ಕಣ್ತುಂಬಿ ಕೊಳ್ಳುತ್ತಾರೆ. ಎರಡೂ ಕಡೆ ಭಕ್ತರು ನಿಂತು ಬ್ರಹ್ಮ ರಥೋತ್ಸವ ವೀಕ್ಷಿಸಿದರೆ ರಥ ಎಳೆಯುವವರ ಸಂಖ್ಯೆಯೂ ದೊಡ್ಡದಿರುತ್ತದೆ. ಬೆಳಗ್ಗೆ ದೇವಾಲಯದಲ್ಲಿ ದೇವರ ಉತ್ಸವ ಬಲಿ ಮತ್ತು ದರ್ಶನ ಬಲಿ ನಡೆಯುತ್ತದೆ. ಸಂಜೆ 5 ಗಂಟೆಯ ಬಳಿಕ ಒಳಾಂಗಣ, ಹೊರಾಂಗಣ ಮತ್ತು ಜಾತ್ರೆ ಗದ್ದೆಯಲ್ಲಿ ಜನರು ಸೇರಲಾರಂಭಿಸುತ್ತಾರೆ. ಇಲ್ಲಿನ ಭಕ್ತರ ಸಂದಣಿ ತೆರವಾಗುವುದೇ ಶ್ರೀ ದೇವರು ಬ್ರಹ್ಮರಥದಿಂದ ಇಳಿದು ಪೇಟೆ ಸವಾರಿಗೆ ತೆರಳಿದ ಬಳಿಕ.

ವಾಹನ ನಿಲುಗಡೆಗೆ ವ್ಯವಸ್ಥೆ
ಪುತ್ತೂರು ನಗರದ ತೆಂಕಿಲ, ಕೊಂಬೆಟ್ಟು, ಕಿಲ್ಲೆ ಮೈದಾನ, ಎಪಿಎಂಸಿ ರಸ್ತೆ ಬಳಿಯ ಗದ್ದೆಯಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗುತ್ತದೆ. ಸಂಜೆ 4 ಗಂಟೆಯಿಂದ ರಾತ್ರಿ ಬ್ರಹ್ಮರಥೋತ್ಸವ ಮುಗಿಯುವ ತನಕ ಮುಖ್ಯ ರಸ್ತೆಯಲ್ಲಿ ಕೊಂಬೆಟ್ಟು ಕ್ರಾಸ್‌ನಿಂದ ಬಸ್ಸು ನಿಲ್ದಾಣದ ತನಕ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಸುರಕ್ಷಾ ಕ್ರಮವಾಗಿ ಗದ್ದೆಯಲ್ಲಿ ಅಗ್ನಿಶಾಮಕದಳದ ವಾಹನ, ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್‌ ಮತ್ತು ವೈದ್ಯರು ಇರುತ್ತಾರೆ.

ಬಸ್ಸಿನ ವ್ಯವಸ್ಥೆ
ಈ ಬಾರಿಯೂ ಬ್ರಹ್ಮರಥೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಕೆಎಸ್‌ಆರ್‌ಟಿಸಿ ವತಿಯಿಂದ ತಾಲೂಕಿನ ವಿವಿಧ ಕಡೆಗಳಿಗೆ ಬಸ್ಸಿನ ವ್ಯವಸ್ಥೆ ಮಾಡಲಾಗುತ್ತದೆ. ಸಂಜೆ ಕೊನೆಯ ಟ್ರಿಪ್‌ ತೆರಳಿದ ಬಸ್ಸುಗಳು ರಾತ್ರಿ ಮರಳಿ ಪುತ್ತೂರಿಗೆ ಬರಲಿವೆ. ರಥೋತ್ಸವ ಮುಗಿದ ಕೂಡಲೇ ಭಕ್ತರನ್ನು ಕರೆದುಕೊಂಡು ಬಸ್ಸುಗಳು ತೆರಳುತ್ತವೆ.

ಜಾತ್ರೆಯಲ್ಲಿ ಇಂದು
ಬೆಳಗ್ಗೆ ಉತ್ಸವ, ವಸಂತಕಟ್ಟೆ ಪೂಜೆ, ದರ್ಶನ ಬಲಿ, ರಾತ್ರಿ ಉತ್ಸವ, ಸಿಡಿಮದ್ದು ಪ್ರದರ್ಶನ, ಬ್ರಹ್ಮರಥೋತ್ಸವ, ಬಂಗಾರ್‌ಕಾಯರ್‌ಕಟ್ಟೆ ಸವಾರಿ, ಶ್ರೀ ದಂಡನಾಯಕ ಉಳ್ಳಾಳ್ತಿ ದೈವಗಳ ಬೀಳ್ಕೊಡುಗೆ, ಶ್ರೀಭೂತಬಲಿ, ಶಯನ ನಡೆಯಲಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.