ಇಂದು ಚೆನ್ನಕೇಶವ ರಥೋತ್ಸವ


Team Udayavani, Jan 10, 2018, 11:56 AM IST

10–Jan-11.jpg

ಸುಳ್ಯ : ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ಪೂರ್ವಶಿಷ್ಟ ಸಂಪ್ರದಾಯದಂತೆ ನಡೆಯುವ ವರ್ಷಾವಧಿ ಜಾತ್ರೆಯಲ್ಲಿ ಜ. 10 ರಂದು ರಾತ್ರಿ ರಥೋತ್ಸವ ನಡೆಯಲಿದೆ. ಮಂಗಳವಾರ ದೇವಸ್ಥಾನ ಹಾಗೂ ಸಂತೆ ಮಳಿಗೆಗಳಲ್ಲಿ ಸಾಕಷ್ಟು ಜನಸಂದಣಿ ಇತ್ತು. ರಥಬೀದಿಯಿಂದ ಎಪಿಎಂಸಿ ತನಕದ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ, ಪಾದಚಾರಿಗಳ ಬಳಕೆಗೆ ಸೀಮಿತಗೊಳಿಸಲಾಗಿತ್ತು.

ಬುಧವಾರ ಬೆಳಗ್ಗೆ ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಲಿದೆ. ರಾತ್ರಿ ಕಲ್ಕುಡ ದೈವಗಳ ಭಂಡಾರ ಬಂದ
ಅನಂತರ ಧಾರ್ಮಿಕ ಕಾರ್ಯಕ್ರಮಗಳು ಮುಗಿದು ವೈಭವದ ರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸುಮಾರು 12 ಗಂಟೆಯ ಹೊತ್ತಿಗೆ ದೇಗುಲದ ಪ್ರಾಂಗಣದಿಂದ ತೇರನ್ನು ಎಳೆಯಲಾಗುತ್ತದೆ. ರಥಬೀದಿಯಲ್ಲಿ ಸಾಗಿ, ಮುಖ್ಯ ರಸ್ತೆಯ ದೇವರ ಕಟ್ಟೆಯ ತನಕ ಸಂಚರಿಸಿ, ಅನಂತರ ರಥ ದೇವಾಲಯಕ್ಕೆ ಹಿಂದಿರುಗುವ ಸಂಪ್ರದಾಯ. ಸಾವಿರಾರು
ಸಂಖ್ಯೆಯಲ್ಲಿ ನೆರೆದ ಭಕ್ತರು ರಥ ಎಳೆಯುವ ಪುಣ್ಯಕಾರ್ಯದಲ್ಲಿ ಪಾಲ್ಗೊಳ್ಳುತ್ತಾರೆ.

ಸಂಚಾರ ನಿಷೇಧ
ಸುರಕ್ಷತೆಯ ದೃಷ್ಟಿಯಿಂದ ಮುಖ್ಯ ರಸ್ತೆಯಿಂದ ರಥಬೀದಿ ಸಂಪರ್ಕ ರಸ್ತೆಯನ್ನು ಎಪಿಎಂಸಿ ತನಕ ಮಂಗಳವಾರ ಸಂಜೆಯೇ ಬಂದ್‌ ಮಾಡಿ, ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ರಥಬೀದಿ ರಸ್ತೆಯ ಎರಡು ಬದಿಗಳಲ್ಲಿ ಸಂತೆ ಮಾರುಕಟ್ಟೆ ಇದ್ದು, ಜನಜಂಗುಳಿ ಇರುತ್ತದೆ. ರಥ ಸಂಚಾರವೂ ಇದೇ ರಸ್ತೆಯಲ್ಲಿ ಸಾಗುವ ಕಾರಣ ವಾಹನ
ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿಲ್ಲ.

ತಾಲೂಕು ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸುವ ಭಕ್ತರು, ಮುಖ್ಯ ರಸ್ತೆಯ ಒಂದು ಬದಿಗಳಲ್ಲಿ ಮಾತ್ರ ವಾಹನ
ನಿಲ್ಲಿಸಬಹುದು. ಬೈಕ್‌ ಹೊರತುಪಡಿಸಿ ಮಿಕ್ಕ ವಾಹನಗಳನ್ನು ಪ್ರತ್ಯೇಕ ಸ್ಥಳದಲ್ಲಿ ನಿಲುಗಡೆ ಮಾಡಬೇಕಿದೆ ಎಂದು ನಗರ ಠಾಣಾ ಪೊಲೀಸರು ತಿಳಿಸಿದ್ದಾರೆ.

ಕೆಮರಾ ಕಣ್ಗಾವಲು
ಈ ಬಾರಿ ಜಾತ್ರಾ ಸುರಕ್ಷತೆಗೆ ಅತ್ಯಾಧುನಿಕ ಸಿಸಿ ಕೆಮರಾಗಳು ಸಾಥ್‌ ನೀಡಲಿವೆ. ನಗರದ ಆಯಕಟ್ಟಿನ ನಾಲ್ಕು ಸ್ಥಳಗಳಲ್ಲಿ ಹದಿನಾರು ಸಿಸಿ ಕೆಮರಾ ಅಳವಡಿಸಿದ್ದು, ಠಾಣೆಯಿಂದಲೇ ಸಂಚಾರ, ಇನ್ನಿತರ ಕಾನೂನು ಸಂಬಂಧಿ ಚಟುವಟಿಕೆಯನ್ನು ಗಮನಿಸಲಾಗುತ್ತದೆ. ಇದು ಭದ್ರತೆಗೆ ಇನ್ನಷ್ಟು ಸಹಕಾರ ನೀಡಲಿದೆ.

ವಾಲಸಿರಿ ಉತ್ಸವ
ಮಂಗಳವಾರ ಬೆಳಗ್ಗೆ ಜಾತ್ರೆಯ ಹಿನ್ನೆಲೆಯಲ್ಲಿ ಪೂಜಾ ಕಾರ್ಯಕ್ರಮಗಳು ನಡೆದವು. ಅಜ್ಜಾವರ ಶ್ರೀ ಶಂಕರ ಭಾರತೀ
ವೇದ ಪಾಠಶಾಲಾ ವಿದ್ಯಾರ್ಥಿಗಳಿಂದ ವೇದ ಪಾರಾಯಣ ನಡೆಯಿತು. ರಾತ್ರಿ ಮಿತ್ತೂರು ದೈವಗಳ ಭಂಡಾರ ಮತ್ತು
ಕಾನತ್ತಿಲ ದೈವಗಳ ಭಂಡಾರ ಆಗಮಿಸಿ, ಅನಂತರ ವಾಲಸಿರಿ ಉತ್ಸವ ನಡೆಯಿತು. ಈ ಸಂದರ್ಭ ಆಡಳಿತ ಮೊಕ್ತೇಸರ ಡಾ| ಹರಪ್ರಸಾದ್‌ ತುದಿಯಡ್ಕ ಸಹಿತ ಸಮಿತಿ ಸದಸ್ಯರು, ನೂರಾರು ಭಕ್ತರು ಉಪಸ್ಥಿತರಿದ್ದರು.

ಕೃಷಿ ವಸ್ತುಪ್ರದರ್ಶನಕ್ಕೆ ಚಾಲನೆ
ಜಾತ್ರೆ ಅಂಗವಾಗಿ ಕೃಷಿ ಇಲಾಖೆಯಿಂದ ಗುರುಭವನದ ವಠಾರದಲ್ಲಿ ಆಯೋಜಿಸಿದ ಕೃಷಿ ವಸ್ತು ಪ್ರದರ್ಶನಕ್ಕೆ ಚಾಲನೆ
ನೀಡಲಾಯಿತು. ವಸ್ತು ಪ್ರದರ್ಶನವನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು. ತಾ.ಪಂ. ಸದಸ್ಯ ತೀರ್ಥರಾಮ, ಸಹಾಯಕ ಕೃಷಿ ನಿರ್ದೇಶಕ ಕೆ.ಜಿ. ಪಾಲಿಚಂದ್ರ, ತಾಂತ್ರಿಕ ಅಧಿಕಾರಿ ಮೋಹನ್‌ ನಂಗಾರ್‌ ಉಪಸ್ಥಿತರಿದ್ದರು.

ಹೆಚ್ಚುವರಿ ಪೊಲೀಸ್‌
ಜಾತ್ರೆಗೆ ಭದ್ರತಾ ದೃಷ್ಟಿಯಿಂದ ಪುತ್ತೂರು ಸಬ್‌ ಡಿವಿಜನ್‌ ವ್ಯಾಪ್ತಿಯಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಗೃಹರಕ್ಷಕ ದಳ, ಪೊಲೀಸರು ಸೇರಿ 150ಕ್ಕೂ ಅಧಿಕ ಮಂದಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ ಎಂದು ಸುಳ್ಯ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಮಂಜುನಾಥ ‘ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.