ಕುಕ್ಕೆ ಸುಬ್ರಹ್ಮ ಣ್ಯದಲ್ಲಿ ಇಂದು ಚಂಪಾಷಷ್ಠಿ


Team Udayavani, Nov 24, 2017, 10:53 AM IST

24-Nov-4.jpg

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ನ. 24ರಂದು ಚಂಪಾಷಷ್ಠಿ ಮಹೋತ್ಸವ ಜರಗಲಿದೆ. ಸ್ಕಂದ ಪಂಚಮಿಯ ದಿನ ಗುರುವಾರ ಶ್ರೀ ದೇಗುಲದಲ್ಲಿ ತೈಲಾಭ್ಯಂಜನ ನೆರವೇರಿತು. ಮಧ್ಯಾಹ್ನ ಶ್ರೀ ದೇಗುಲದ ಒಳಾಂಗಣ ಮತ್ತು ಅಂಗಡಿ ಗುಡ್ಡೆಯ ಅನ್ನಛತ್ರದಲ್ಲಿ ಅನ್ನಪ್ರಸಾದಕ್ಕೆ ಪಲ್ಲಪೂಜೆ ನೆರವೇರಿತು.

ಮಾರ್ಗಶಿರ ಶುದ್ಧ ಚೌತಿಯ ದಿನವಾದ ಬುಧವಾರ ರಾತ್ರಿ ಹೂವಿನ ರಥೋತ್ಸವ ನಡೆಯಿತು. ದೇಗುಲದ ಹೊರಾಂಗಣದಲ್ಲಿ ಬಂಡಿ ಉತ್ಸವ, ಪಾಲಕಿ ಉತ್ಸವ ಹಾಗೂ ಸಂಗೀತ, ಮಂಗಳವಾದ್ಯ, ನಾದಸ್ವರ, ಬ್ಯಾಂಡ್‌ ಸುತ್ತುಗಳ ಬಳಿಕ ರಥಬೀದಿಗೆ ಶ್ರೀ ದೇವರ ಪ್ರವೇಶ ವಾಯಿತು. ಬಳಿಕ ಉತ್ತರಾಧಿ ಮಠದಲ್ಲಿ ಮಯೂರ ವಾಹನ ಸುಬ್ರಹ್ಮಣ್ಯ ದೇವರಿಗೆ ಪೂಜೆ ನೆರವೇರಿತು.

ಹೂವಿನ ತೇರಿನಲ್ಲಿ ಸುಬ್ರಹ್ಮಣ್ಯ ದೇವರು ಸಹೋದರ ಕಾಶಿಕಟ್ಟೆ ಮಹಾ ಗಣಪತಿಯ ಸನ್ನಿಧಿಗೆ ಆಗಮಿಸಿದರು. ಮಹಾಗಣಪತಿ ಸನ್ನಿಧಾನದಲ್ಲಿ ವಿಶೇಷ ಹೂ ಮತ್ತು ಹಣತೆಗಳ ಶೃಂಗಾರದ ನಡುವೆ ಮಹಾಗಣಪತಿಗೆ ರಂಗಪೂಜೆ ನೆರವೇರಿತು. ಬಳಿಕ ವಾಸುಕಿ ಛತ್ರದ ಕಟ್ಟೆಯಲ್ಲಿ ಕಟ್ಟೆಪೂಜೆ, ಶಿವರಾತ್ರಿ ಕಟ್ಟೆಯಲ್ಲಿ ಮತ್ತು ಸವಾರಿ ಮಂಟಪದಲ್ಲಿ ಕಟ್ಟೆಪೂಜೆ ನೆರವೇರಿತು. ಆಕರ್ಷಕ ಸುಡುಮದ್ದಿನ ಪ್ರದರ್ಶನ ನಡೆಯಿತು. ಪಂಚಮಿ ದಿನವಾದ ಗುರುವಾರವೂ ನೂರಾರು ಮಂದಿ ಬೀದಿಮಡಸ್ನಾನ, ಅಂಗಣ ಪ್ರದಕ್ಷಿಣೆ ಹಾಗೂ ಎಡೆಸ್ನಾನ ಸೇವೆಯಲ್ಲಿ ಪಾಲ್ಗೊಂಡಿದ್ದರು.

ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಂ.ಎಚ್‌. ರವೀಂದ್ರ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರ ಶೇಖರ್‌ ಪೇರಾಲ್‌, ವ್ಯವಸ್ಥಾಪನ ಸಮಿತಿ ಸದಸ್ಯರು ವಿವಿಧ ಇಲಾಖೆಗಳ ಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.

ಕೃಷಿ ಮೇಳಕ್ಕೆ ಚಾಲನೆ
ಬದುಕಿನಲ್ಲಿ ಶ್ರೇಷ್ಠವಾದ್ದು ಕೃಷಿ ಜೀವನ. ಕೃಷಿಗೆ ಹೆಚ್ಚು ಒತ್ತು ನೀಡಬೇಕಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು. ಚಂಪಾಷಷ್ಠಿ ಪ್ರಯುಕ್ತ ದೇಗುಲದ ವತಿಯಿಂದ ವಿವಿಧ ಇಲಾಖೆ ಮತ್ತು ಸಂಘ-ಸಂಸ್ಥೆಗಳ ಸಹಾಯೋಗದಲ್ಲಿ ಅಕ್ಷರ ವಸತಿಗೃಹದ ಬಳಿ ಆಯೋಜಿಸಲಾದ ಕೃಷಿ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯನಿರ್ವಾಹಣಾಧಿಕಾರಿ ಎಂ.ಎಚ್‌. ರವೀಂದ್ರ, ವ್ಯವಸ್ಥಾಪನ ಸಮಿತಿ ಸದಸ್ಯರು ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಿಬಂದಿ ಉಪಸ್ಥಿತರಿದ್ದರು. ಷಷ್ಠಿ ದಿನ (ನ. 24ರಂದು) ಕೂಡ ಕೃಷಿ ಮೇಳ ನಡೆಯಲಿದೆ.

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.