ಮನ್ನಣೆ ಪಡೆಯದ ಪ್ರೇಮಿಗಳ ದಿನಾಚರಣೆ !

ಇಂದು ವ್ಯಾಲೆಂಟೈನ್ಸ್‌ ಡೇ

Team Udayavani, Feb 14, 2020, 5:38 AM IST

VALENTINE-DAY

ಮಹಾನಗರ: ಪ್ರೇಮಿಗಳ ದಿನಾಚರಣೆಗೆ ಕೆಲವಾರು ವರ್ಷಗಳಿಂದ ವಿರೋಧ ಮತ್ತು ಸಾಮಾಜಿಕ ಜಾಲ ತಾಣಗಳ ಅಬ್ಬರ ಜೋರಾಗಿರುವ ಕಾರಣ ಫೆ. 14ರ ವ್ಯಾಲೆಂಟೈನ್ಸ್‌ ಡೇ ಆಚರಣೆಯ ಬೇಡಿಕೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ.

ಇನ್ನೊಂದೆಡೆ ಕೆಲವು ಸಂಘಟನೆಗಳು ಪ್ರೇಮಿಗಳ ದಿನವನ್ನು ದೇಶಪ್ರೇಮಿಗಳ ದಿನಾಚರಣೆಯಾಗಿ ಆಚರಿಸುವ ಮೂಲಕ ಅದನ್ನು ಅವಗಣಿಸಲಾಗುತ್ತಿ¤ದೆ. ವಿದೇಶದಲ್ಲಿ ಪ್ರೇಮಿಗಳಿಗಾಗಿ ಆಚರಣೆಗೆ ಬಂದ ಈ ದಿನವು ಕೆಲವು ವರ್ಷಗಳಿಂದ ದೇಶದಲ್ಲಿಯೂ ಮಹತ್ವ ಪಡೆಯಿತು. ಆದರೆ ಆ ದಿನದಂದು ಅಹಿತಕರ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕಾಗಿ ಕೆಲವು ಸಂಘಟನೆಗಳು ಇದಕ್ಕೆ ವಿರೋಧ ಮಾಡುತ್ತಲೇ ಬಂದಿದ್ದವು. ಹಾಗಾಗಿ ಪ್ರೇಮಿಗಳ ದಿನ ಆಚರಣೆ ಕಡಿಮೆಯಾಗುತ್ತಿದ್ದು, ಬೆಂಗಳೂರಿನಂಥ ಮಹಾನಗರಗಳಿಗೆ ಹೋಲಿಸಿದರೆ ಮಂಗಳೂರಿಲ್ಲಿ ಈ ಆಚರಣೆ ಅಷ್ಟೊಂದು ಮನ್ನಣೆ ಪಡೆದುಕೊಂಡಿಲ್ಲ.

ಅಂಗಡಿ ಮಾಲಕರಲ್ಲಿ ವಿನಂತಿ
ಭಾರತೀಯ ಪರಂಪರೆಯಲ್ಲಿ ಪ್ರೇಮಿಗಳ ದಿನಾಚರಣೆ ಸರಿಯಲ್ಲ ಮತ್ತು ಇದರಿಂದ ಅಹಿತಕರ ಘಟನೆ ಗಳು ನಡೆಯುವ ಸಾಧ್ಯತೆಗಳೂ ಇಲ್ಲದಿಲ್ಲ ಎಂಬ ಕಾರಣಕ್ಕಾಗಿ ಕೆಲವು ಸಂಘಟನೆಗಳು ಹಿಂದಿನಿಂದಲೇ ಈ ದಿನವನ್ನು ವಿರೋಧಿಸುತ್ತಾ ಬಂದಿವೆ. ಈ ಬಾರಿಯೂ ಪ್ರೇಮಿಗಳ ದಿನವನ್ನು ಆಚರಿಸಬಾರದು ಎಂದು ಸಂಘಟನೆಗಳು ತಿಳಿಸಿವೆ. ಪ್ರೇಮಿಗಳ ದಿನಾಚರಣೆ ಸಂಬಂಧಿಸಿದ ಯಾವುದೇ ಗ್ರೀಟಿಂಗ್ಸ್‌, ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಅಂಗಡಿ ಮಾಲಕರಲ್ಲಿ ಬಜರಂಗದಳ ವಿನಂತಿಸಿದೆ.

ಕೆಂಬಣ್ಣದ ಸಿಂಗಾರ
ನಗರದಲ್ಲಿ ಪ್ರೇಮಿಗಳ ದಿನ ಆಚರಣೆ ಇಲ್ಲವಾದರೂ ಕೆಲವೊಂದು ಅಂಗಡಿಗಳಲ್ಲಿ ಈಗಾಗಲೇ ಆ ದಿನವನ್ನು ಸಾರುವ ಕೆಂಪು ಬಣ್ಣ ರಾರಾಜಿಸುತ್ತಿದೆ. ವ್ಯಾಲೆಂಟೈನ್ಸ್‌ ಡೇ ಹಿನ್ನೆಲೆಯಲ್ಲಿ ವ್ಯಾಪಾರ ತಾಣಗಳಿಗೆ ಯುವ ಸಮು ದಾಯವನ್ನು ಆಕರ್ಷಿಸುವ ಸಲುವಾಗಿ ಅಂಗಡಿಗಳನ್ನು ಕೆಂಬಣ್ಣದಿಂದ ಸಿಂಗಾರಗೊಳಿಸಲಾಗಿದೆ. ಕೆಲವು ಬಟ್ಟೆ ಅಂಗಡಿಗಳಲ್ಲಿ ಕೆಂಬಣ್ಣದ ಬಟ್ಟೆಗಳನ್ನೇ ಜೋಡಿಸಿ ತೂಗು ಹಾಕಲಾಗಿದೆ. ಫ್ಯಾನ್ಸಿ ಅಂಗಡಿ ಗಳಲ್ಲಿ ಕೆಂಬಣ್ಣದ ಗೊಂಬೆಗಳನ್ನು ಜೋಡಿಸಿದ್ದು, ಆಕರ್ಷಕವಾಗಿ ಕಾಣುತ್ತಿವೆ. ಹೂವಿನಂಗಡಿಗಳಲ್ಲಿಯೂ ಇದೇ ರೀತಿಯ ಜೋಡಣೆ ಗಮನ ಸೆಳೆ ಯುತ್ತಿದೆ. ಅಂಗಡಿಯೊಂದರಲ್ಲಿ ಹೃದಯಾಕಾರದಲ್ಲಿ ಹೂವು ಮತ್ತು ಚಾಕೋಲೇಟ್‌ಗಳನ್ನು ಜೋಡಿ ಸಿಟ್ಟಿರುವುದು ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

ಆಚರಣೆ ಹೆಸರಿನಲ್ಲಿ ದುರುಪಯೋಗವಾಗದಿರಲಿ
ಪ್ರೇಮಿಗಳ ದಿನ ಆಚರಿಸುವುದು, ಆಚರಿಸದೇ ಇರುವುದು ಅವರವರಿಗೆ ಬಿಟ್ಟ ವಿಚಾರ. ಆದರೆ ಯಾವುದೇ ಆಚರಣೆಗಳು ಕೂಡ ಯುವ ಸಮುದಾಯವನ್ನು ತಪ್ಪು ದಾರಿಗೆ ಕೊಂಡೊಯ್ಯಬಾರದು. ಆಚರಣೆ ಹೆಸರಿನಲ್ಲಿ ದುರುಪಯೋಗ ನಡೆಯಬಾರದು. ಇಷ್ಟೇ ನಾನು ಹೇಳುವುದು.
 - ಚಿರಶ್ರೀ ಅಂಚನ್‌, ನಟಿ

ಸಾಮಾಜಿಕ ತಾಣಗಳಲ್ಲೇ ಶುಭಾಶಯ
ಹಿಂದೆಲ್ಲ ಯಾವುದೇ ವಿಶೇಷ ದಿನಾಚರಣೆ ಶುಭಾಶಯ ವಿನಿಮಯ ಮಾಡಿಕೊಳ್ಳಲು ಪತ್ರದ ಮುಖೇನ ಅಥವಾ ನೇರವಾಗಿ ಭೇಟಿಯಾಗಬೇಕಿತ್ತು. ಆದರೆ ಈಗ ಹಾಗಿಲ್ಲ. ಸಾಮಾಜಿಕ ಜಾಲತಾಣಗಳು ಇಡೀ ವಿಶ್ವದಲ್ಲೇ ಪಸರಿಸಿರುವುದರಿಂದ ಶುಭಾಶಯ ವಿನಿಮಯಕ್ಕೂ ವೇದಿಕೆಯಾಗುತ್ತಿದೆ. ಅದರಂತೆ ಪ್ರೇಮಿಗಳ ದಿನಾಚರಣೆ ಹಿನ್ನೆಲೆಯಲ್ಲಿ ಅಂಗಡಿಗಳಿಗೆ ತೆರಳಿ ಗ್ರೀಟಿಂಗ್ಸ್‌ ತಂದು ಶುಭಾಶಯ ವಿನಿಮಯ ಮಾಡಬೇಕಾದ ಅಗತ್ಯ ಈಗಿಲ್ಲ. ಕೈಯಲ್ಲಿರುವ ಸ್ಮಾರ್ಟ್‌ಫೋನ್‌ನಲ್ಲಿಯೇ ಶುಭಾಶಯ ವಿನಿಮಯ ಮಾಡಲಾಗುತ್ತದೆ.

-  ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.