ಚುನಾವಣೆ ಬಳಕೆಗೆ ಇಂದು, ನಾಳೆ 400ಕ್ಕೂ ಹೆಚ್ಚು ಕೆಎಸ್ಸಾರ್ಟಿಸಿ ಬಸ್‌


Team Udayavani, Apr 17, 2019, 6:00 AM IST

r-23

ಮಹಾನಗರ: ಸರಕಾರಿ ಬಸ್‌ಗಳನ್ನು ಚುನಾವಣೆಗೆ ಬಳಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಮತ್ತು ಗುರುವಾರ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆಯಲ್ಲಿ ಗಮನಾರ್ಹವಾದ ವ್ಯತ್ಯಯವಾಗಲಿದೆ. ಹಾಗಾಗಿ ಸಾರ್ವಜನಿಕರು ತಮ್ಮ ಓಡಾಟಕ್ಕೆ ಬದಲಿ ವ್ಯವಸ್ಥೆ ಮಾಡಿಕೊಳ್ಳುವುದು ಅನಿವಾರ್ಯ.

ಜಿಲ್ಲೆಯ ಸುಮಾರು 400ಕ್ಕೂ ಹೆಚ್ಚಿನ ಕೆಎಸ್ಸಾರ್ಟಿಸಿ ಬಸ್‌ಗಳು ಚುನಾವಣ ಕಾರ್ಯಕ್ಕೆ ತೆರಳಲಿವೆ. ಮಂಗಳೂರು ವಿಭಾಗದಿಂದ ಪ್ರತೀ ದಿನ ಸುಮಾರು 389ಕ್ಕೂ ಹೆಚ್ಚಿನ ಕೆಎಸ್ಸಾರ್ಟಿಸಿ ಬಸ್‌ಗಳು ವಿವಿಧ ಪ್ರದೇಶಗಳಿಗೆ ತೆರಳುತ್ತವೆ. ಈ ಬಾರಿ ಎ. 17, 18ರಂದು ಮಂಗಳೂರಿನ ಒಂದು ಮತ್ತು ಎರಡನೇ ಡಿಪೋದಿಂದ 138ಕ್ಕೂ ಹೆಚ್ಚಿನ ಕೆಎಸ್ಸಾರ್ಟಿಸಿ ಬಸ್‌ಗಳು ಚುನಾ ವಣೆಯ ಕಾರ್ಯಕ್ಕೆ ತೆರಳಲಿವೆ. ಇನ್ನು ಪುತ್ತೂರು ವಿಭಾಗದಿಂದ (ಪುತ್ತೂರು, ಬಿಸಿ ರೋಡ್‌, ಧರ್ಮ ಸ್ಥಳ, ಮಡಿಕೇರಿ, ಸುಳ್ಯ) ಪ್ರತಿ ದಿನ 560 ಬಸ್‌ಗಳು ಸಂಚರಿಸುತ್ತವೆ. ಇದರಲ್ಲಿ 263 ಬಸ್‌ಗಳು ವ್ಯತ್ಯಯ ಉಂಟಾಗಲಿವೆ. ಪುತ್ತೂರು ತಾಲೂಕಿಗೆ 35 ಬಸ್‌, ಬೆಳ್ತಂಗಡಿ ತಾಲೂಕಿಗೆ 36, ಬಂಟ್ವಾಳ-28, ಸುಳ್ಯ-27, ಮೂಡುಬಿದಿರೆ-47, ಮಡಿಕೇರಿ-42, ವಿರಾಜಪೇಟೆಗೆ-48 ಬಸ್‌ಗಳು ಚುನಾವಣ ಕಾರ್ಯನಿಮಿತ್ತ ಹೋಗಲಿದ್ದು, ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿಗೆ ತೊಂದರೆಯಾಗಲಿದೆ.

ಕೆಎಸ್ಸಾರ್ಟಿಸಿ ಅಧಿಕಾರಿಗಳು ಹೇಳುವ ಪ್ರಕಾರ, ಬಸ್‌ ವ್ಯತ್ಯಯದಿಂದಾಗಿ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆ ಉಂಟಾಗದು. ಹೆಚ್ಚಿನ ಬಸ್‌ ಕಾರ್ಯಾಚರಿಸುತ್ತಿರುವ ರೂಟ್‌ಗಳಿಂದ ಬಸ್‌ ಕಡಿತಗೊಳಿಸಲಾಗಿದೆ. ಹೆಚ್ಚಿನ ಬಸ್‌ ಸಂಚರಿಸುವ ರೂಟ್‌ಗಳಿಂದ ಕಡಿಮೆ ಬಸ್‌ ಸಂಚರಿಸುವ ರೂಟ್‌ಗಳಿಗೆ ಬಸ್‌ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ಕಾರಣಕ್ಕೆ ಗ್ರಾಮಾಂತರ ಪ್ರದೇಶ ಸಹಿತ ಪಟ್ಟಣ ಪ್ರದೇಶದ ಮಂದಿಗೆ ತೊಂದರೆ ಉಂಟಗದು ಎನ್ನುತ್ತಾರೆ.

ಎ. 21ಕ್ಕೆ ಹೆಚ್ಚುವರಿ ಬಸ್‌ ಕಾರ್ಯಾಚರಣೆ
ದೂರದ ಊರುಗಳಿಂದ ಮತದಾನಕ್ಕೆಂದು ತಮ್ಮ ಊರುಗಳಿಗೆ ಬಂದ ಮಂದಿಗೆ ಸರಣಿ ರಜೆ ಸಿಗುತ್ತದೆ. ಎ. 17ರಂದು ಮಹಾವೀರ ಜಯಂತಿ ರಜೆ ಇದ್ದು, ಎ. 18ರಂದು ಚುನಾವಣೆ, ಎ. 19ರಂದು ಗುಡ್‌ಫ್ರೈಡೆ ರಜೆ ಇದ್ದು, ಎ. 20ರಂದು ರಜಾ ತೆಗೆದುಕೊಂಡರೆ, ಎ. 21ರಂದು ರವಿವಾರದ ರಜಾ ಸಿಗುತ್ತದೆ. ಎ. 21ರಂದು ಈಗಾಗಲೇ ಹೆಚ್ಚಿನ ಬಸ್‌ ಮುಂಗಡ ಬುಕ್ಕಿಂಗ್‌ ಆಗಿದೆ. ಇದೇ ಕಾರಣಕ್ಕೆ ಮಂಗಳೂರಿನಿಂದ ಮೈಸೂರು, ಬೆಂಗಳೂರು ಮತ್ತಿತರ ರೂಟ್‌ಗಳಿಗೆ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಬಸ್‌ ನಿಯೋಜಿಸಲು ಕೆಎಸ್ಸಾರ್ಟಿಸಿ ತೀರ್ಮಾನಿಸಿದೆ.

ಸಿಟಿ ಬಸ್‌ಗಳು ಎಂದಿನಂತೆ ಸಂಚಾರ
ಕಳೆದ ಬಾರಿಯ ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆಯ ಕಾರ್ಯದ ನಿಮಿತ್ತ ಜಿಲ್ಲೆಯ ಹೆಚ್ಚಿನ ಖಾಸಗಿ, ಸಿಟಿ ಬಸ್‌ಗಳು ತೆರಳಿದ್ದವು. ಆದರೆ ಈ ಬಾರಿ ಮಂಗಳೂರಿನ ಯಾವುದೇ ಸಿಟಿ ಬಸ್‌ಗಳು ಚುನಾವಣೆ ಕಾರ್ಯಕ್ಕೆ ಹೋಗುವುದಿಲ್ಲ. ಹಾಗಾಗಿ ಮತದಾನದ ದಿನ ಎಲ್ಲ ಸಿಟಿ ಬಸ್‌ಗಳು ಎಂದಿನಂತೆ ಕಾರ್ಯಾಚರಿಸಲಿವೆ.

ರಾಜ್ಯದ 3,314 ಬಸ್‌ ಚುನಾವಣ ಕಾರ್ಯಕ್ಕೆ
ಲೋಕಸಭಾ ಚುನಾವಣೆಯ ಮೊದಲನೇ ಹಂತದ ಮತದಾನದ ಹಿನ್ನೆಲೆಯಲ್ಲಿ ಚುನಾವಣ ಕಾರ್ಯದ ನಿಮಿತ್ತ ರಾಜ್ಯದ 8,705 ಕೆಎಸ್ಸಾರ್ಟಿಸಿ ಬಸ್‌ಗಳ ಪೈಕಿ 3,314 ಬಸ್‌ಗಳು ಚುನಾವಣ ಕಾರ್ಯಕ್ಕೆ ತೆರಳಲಿವೆ.

ತೊಂದರೆಯಾಗದಂತೆ ಕಾರ್ಯನಿರ್ವಹಣೆ
ಈ ಬಾರಿಯ ಲೋಕಸಭಾ ಚುನಾವಣೆ ಕಾರ್ಯಕ್ಕೆ ಪುತ್ತೂರು ಡಿಪೋದಿಂದ 263 ಬಸ್‌ಗಳು ತೆರಳಲಿವೆ. ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದ ರೀತಿಯಲ್ಲಿ ಬಸ್‌ ಕಾರ್ಯಾಚರಣೆ ಮಾಡಲಾಗುತ್ತದೆ. ಇನ್ನು ಮತದಾನ ಮುಗಿಸಿ ದೂರದ ಊರುಗಳಿಗೆ ತೆರಳುವ ಸಂಬಂಧ ಎ. 21ರಂದು ಹೆಚ್ಚಿನ ಸಂಖ್ಯೆಯ ಬಸ್‌ ನಿಯೋಜಿಸಲಾಗಿದೆ.
ದೀಪಕ್‌ ಕುಮಾರ್‌, ಕೆಎಸ್ಸಾರ್ಟಿಸಿ ನಿಯಂತ್ರಣಾಧಿಕಾರಿ ಪುತ್ತೂರು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.