ಶೌಚಾಲಯ ಕಾಮಗಾರಿ; ಸಾರ್ವಜನಿಕರಿಗೆ ಸಂಕಷ್ಟ
Team Udayavani, May 4, 2019, 5:05 AM IST
ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ ನಿಲ್ದಾಣದ ಪಕ್ಕದಲ್ಲಿರುವ ಶೌಚಾಲಯ ಕಾಮಗಾರಿಯೂ ಕಳೆದ ಒಂದು ತಿಂಗಳಿನಿಂದ ಆಮೆಗತಿಯಲ್ಲಿ ನಡೆಯುತ್ತಿದೆ.
ಈ ಶೌಚಾಲಯವೂ ತುಂಬಾ ಹಳೆಯದಾಗಿದ್ದು, ಮೇಲಿನ ಛಾವಣಿಯು ಕುಸಿಯುವ ಹಂತದಲ್ಲಿರುವ ಬಗ್ಗೆ ಈ ಹಿಂದೆ ಉದಯವಾಣಿ ಪತ್ರಿಕೆಯಲ್ಲಿ ವರದಿ ಪ್ರಕಟಿಸಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಸೆಳೆಯಲಾಗಿತ್ತು. ಆದರೆ ಈಗ ಶೌಚಾಲಯ ಕಾಮಗಾರಿ ನಡೆಯುತ್ತಿದ್ದು, ಯಾವುದೇ ಪರಿಣಾಮಕಾರಿ ಸುಧಾರಣೆ ಕಾಣದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಗಾ. ಪಂ. ಬಸ್ ನಿಲ್ದಾಣದ ಪಕ್ಕದಲ್ಲಿನ ನೇಕಾರ ಸೌಧದ ಪಕ್ಕದಲ್ಲಿ ಶೌಚಾಲಯದ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದಾರೆ ಆದರೇ ಜನರು ಹುಡುಕಾಡಿ ಹೋಗಬೇಕಾಗಿರು ಪರಿಸ್ಥಿತಿ ನಿರ್ಮಾಣವಾಗಿದೆ.
ಶೀಘ್ರ ಕಾಮಗಾರಿ ಪೂರ್ಣ
ಹೊಸ ಬಸ್ ನಿಲ್ದಾಣ ನಿರ್ಮಾಣ ಆಗುವಾಗ ಹೊಸ ಶೌಚಾಲಯದ ಬಗ್ಗೆ ಅಂದಾಜು ಪಟ್ಟಿ ಮಾಡಲಾಗಿತ್ತು. ಆದರೇ ಸ್ಥಳದ ಅಭಾವದಿಂದ ಸದ್ರಿ ಇರುವ ಶೌಚಾಲಯವನ್ನು 4 ಲಕ್ಷ ರೂ. ವೆಚ್ಚದಲ್ಲಿ ನವೀಕರಣದ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಮುಗಿಸಿ ಜನರ ಉಪಯೋಗಕ್ಕೆ ಸಿದ್ಧಪಡಿ ಸಲಾಗುವುದು.
– ಅರುಣ್ ಪ್ರದೀಪ್ ಡಿ’ಸೋಜಾ ಪಿಡಿಒ, ಕಿನ್ನಿಗೋಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ