“ಟೋಲ್ ರಿಯಾಯಿತಿ; ಜಿಲ್ಲಾಡಳಿತಕ್ಕೆ ಅಧಿಕಾರವಿಲ್ಲ’
Team Udayavani, Jul 20, 2019, 5:35 AM IST
ಸುರತ್ಕಲ್: ಸ್ಥಳೀಯ ಖಾಸಗಿ ಕಾರುಗಳಿಗೆ ಸುರತ್ಕಲ್ ಟೋಲ್ಗೇಟ್ನಲ್ಲಿ ಸುಂಕ ಪಡೆಯದಂತೆ ವಿಧಿಸಿದ್ದ ತಡೆ ಜು. 22ಕ್ಕೆ ಅಂತ್ಯಗೊಳ್ಳಲಿದೆ. ಮುಂದೆ ರಾಜ್ಯ ಸರಕಾರದ ಕಾರ್ಯದರ್ಶಿ ಸುಂಕ ವಸೂಲಿಗೆ ಪೊಲೀಸ್ ಭದ್ರತೆ ಒದಗಿಸಲು ಆದೇಶಿಸಿದರೆ ಜಿಲ್ಲಾಡಳಿತ ಒದಗಿಸಬೇಕಾಗುತ್ತದೆ. ಸ್ಥಳೀಯ ವಾಹನಗಳಿಗೆ ರಿಯಾಯಿತಿ ನೀಡುವ ಸಂಬಂಧ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಜಿಲ್ಲಾಡಳಿತಕ್ಕೆ ಇಲ್ಲ ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಹೇಳಿದ್ದಾರೆ.
ಈ ಬಗ್ಗೆ “ಉದಯವಾಣಿ’ ಪ್ರತಿನಿಧಿ ಜತೆಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರು ಸ್ಥಳೀಯ ವಾಹನಗಳಿಗೆ ಟೋಲ್ ವಸೂಲಿಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಮಾಡಿದ್ದರಿಂದ ಮೂರ್ನಾಲ್ಕು ದಿನ ತಡೆ ಹಿಡಿಯಲಾಗಿದೆ. ಆದರೆ ರಿಯಾಯಿತಿಯನ್ನು ಹೆಚ್ಚು ದಿನ ಮುಂದೂಡಲು ಸಾಧ್ಯವಿಲ್ಲ.
ಕೇಂದ್ರದ ಎನ್ಎಚ್ಎಐ ನಿರ್ದೇಶನದಂತೆ ನಾವು ನಡೆದುಕೊಳ್ಳಬೇಕಿದೆ ಎಂದಿದ್ದಾರೆ.
ಟೋಲ್ ಸಂಗ್ರಹಿಸಬಾರದು ಎಂದು ಹೇಳುವ ಅಥವಾ ನಿರ್ಧರಿಸುವ ಅಧಿಕಾರ ಜಿಲ್ಲಾಡಳಿತಕ್ಕೆ ಇಲ್ಲ. ಸೋಮವಾರದವರೆಗೆ ಕಾದು ನೋಡುತ್ತೇವೆ. ಎನ್ಎಚ್ಎಐ ಸುಂಕ ವಸೂಲಿಗೆ ಭದ್ರತೆ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿಯವರಿಗೆ ಈಗಾಗಲೇ ಸೂಚಿಸಿದೆ. ಅವರು ಜಿಲ್ಲಾಡಳಿಕ್ಕೆ ಮತ್ತೆ ಸೂಚಿಸಿದರೆ ಭದ್ರತೆ ನೀಡಬೇಕಾಗುತ್ತದೆ. ರಿಯಾಯಿತಿ ನೀಡಿ ಎಂದು ಯಾವುದೇ ಸ್ಪಷ್ಟ ನಿರ್ಧಾರವನ್ನು ಕೇಂದ್ರ ನೀಡಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ