ನಾಸಿಕ್‌ನಿಂದ ಬರಲಿದೆ ಟೊಮೇಟೊ; ಕರಾವಳಿಯಲ್ಲಿ ತರಕಾರಿ ಮತ್ತಷ್ಟು ತುಟ್ಟಿ


Team Udayavani, Nov 23, 2021, 5:16 AM IST

ನಾಸಿಕ್‌ನಿಂದ ಬರಲಿದೆ ಟೊಮೇಟೊ; ಕರಾವಳಿಯಲ್ಲಿ ತರಕಾರಿ ಮತ್ತಷ್ಟು ತುಟ್ಟಿ

ಮಂಗಳೂರು/ಉಡುಪಿ: ಅಕಾಲಿಕ ಮಳೆಯಿಂದಾಗಿ ಟೊಮೇಟೊ ಸಹಿತ ತರಕಾರಿ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಗ್ರಾಹಕರು ಚಿಂತಾಕ್ರಾಂತ ರಾಗಿದ್ದಾರೆ.

ಈ ನಡುವೆ ಕರಾವಳಿಗೆ ಮಹಾರಾಷ್ಟ್ರದ ನಾಸಿಕ್‌ನಿಂದ ಟೊಮೇಟೊ ಪೂರೈಕೆ ಯಾಗಲಿದ್ದು, ಶತಕ ದಾಟಿದ್ದ ಅದರ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಉಡುಪಿ ನಗರದ ತರಕಾರಿ ವ್ಯಾಪಾರಿ ಶಫೀಕ್‌ ತಿಳಿಸಿದ್ದಾರೆ.

ಉಡುಪಿ, ಮಂಗಳೂರು ಮಾರುಕಟ್ಟೆ ಯಲ್ಲಿ ಟೊಮೇಟೊಗೆ 110 ರೂ. ನಿಗದಿ ಯಾಗಿದೆ. ರಾಜ್ಯದಲ್ಲಿ ಬಿಟ್ಟುಬಿಟ್ಟು ಮಳೆ ಯಾಗುತ್ತಿದ್ದು, ತೇವಾಂಶ ಅಧಿಕವಾಗಿ ರುವುದರಿಂದ ಟೊಮೇಟೊ ಸಹಿತ ತರಕಾರಿ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಪರಿಣಾಮ ಪೂರೈಕೆ ಕಡಿಮೆಯಾಗಿ ಕರಾವಳಿಯ ಜನ ಟೊಮೇಟೊ ಸಹಿತ ತರಕಾರಿ ಕೊಳ್ಳಲಾಗದೆ ಚಿಂತಿತರಾಗಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಮಾರುಕಟ್ಟೆ ಗಳಲ್ಲಿ ನುಗ್ಗೆ ಧಾರಣೆ ಡಬಲ್‌ ಸೆಂಚುರಿ ದಾಟಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ತರಕಾರಿ ಫಸಲು ಬಹುತೇಕ ನಾಶ ವಾಗಿದೆ. ತರಕಾರಿ ಗಿಡಗಳು ಹೂವು ಬಿಡುವ ಸಂದರ್ಭದಲ್ಲಿ ಮಳೆ ಹನಿ ಬಿದ್ದಾಗ ಹೂವು ನಾಶವಾಗಿ ಫಲ ಬಿಡುವ ಸಾಧ್ಯತೆಯೇ ಇರುವುದಿಲ್ಲ. ಇನ್ನೂ ಕೆಲವು ಕಡೆ ಮಳೆ ನೀರು ನಿಂತು ತರಕಾರಿ ಗಿಡಗಳು ಹಾಗೂ ಇನ್ನೂ ಕೆಲವು ಭಾಗಗಳಲ್ಲಿ ಬಿಟ್ಟ ಫಲಗಳು ಕೊಳೆತು ಹೋಗಿವೆ. ಇದು ತರಕಾರಿ ಕೊರತೆಗೆ ಕಾರಣ.

ಇದನ್ನೂ ಓದಿ:ವಿಜಯಪುರ: ಪಕ್ಷೇತರ ಸ್ಪರ್ಧೆಯ ಭೀತಿ; ಸುನಿಲ ಗೌಡಗೆ ಕಾಂಗ್ರೆಸ್ ಟಿಕೇಟ್

ಮಂಗಳೂರಿನ ಹಾಪ್‌ಕಾಮ್ಸ್‌ ವ್ಯವಸ್ಥಾಪಕ ರವಿರಾಜ್‌ ಶೆಟ್ಟಿ ಹೇಳುವ ಪ್ರಕಾರ ಈಗ ತರಕಾರಿಗಳ ಕೊರತೆ ಇದೆ; ಬೇಡಿಕೆ ಇರುವ ಪ್ರಮಾಣದಲ್ಲಿ ತರಕಾರಿ ಪೂರೈಕೆ ಆಗುತ್ತಿಲ್ಲ. ಸರಬರಾಜು ಆಗುವ ಅಲ್ಪ ಸ್ವಲ್ಪ ತರಕಾರಿಗಳ ಗುಣಮಟ್ಟವೂ ಚೆನ್ನಾಗಿಲ್ಲ. ಬೇಗನೆ ಕೊಳೆತು ಹೋಗುತ್ತಿವೆ.

ಮಂಗಳೂರು, ಉಡುಪಿಯಲ್ಲಿ ಸೋಮವಾರ ತರಕಾರಿ ಬೆಲೆ
ಟೊಮೇಟೊ 110 – 120 ರೂ., ಬೀನ್ಸ್‌ 75 ರೂ., ಅಲಸಂಡೆ 75 ರೂ., ಹಸಿ ಮೆಣಸು 60 ರೂ., ದೊಣ್ಣೆ ಮೆಣಸು 112 ರೂ., ಬದನೆ 56 ರೂ., ಹೀರೆ 75 ರೂ., ಕಾಲಿಫ್ಲವರ್ 80 ರೂ., ಕ್ಯಾಬೆಜ್‌ 40 ರೂ., ಮುಳ್ಳು ಸೌತೆ 25 ರೂ., ಸಾಂಬಾರು ಸೌತೆ 45 ರೂ., ಮೂಲಂಗಿ 56 ರೂ., ತೊಂಡೆ 75 ರೂ., ಬೆಂಡೆ 75 ರೂ., ಸೋರೆ 65 ರೂ., ಬಟಾಟೆ 32 ರೂ., ಈರುಳ್ಳಿ 38 ರೂ. , ಬೆಳ್ಳುಳ್ಳಿ 120 ರೂ., ನುಗ್ಗೆ 240 ರೂ., ಕ್ಯಾರೆಟ್‌ 100 ರೂ., ಬೀಟ್‌ರೂಟ್‌ 50 ರೂ., ಪಡುವಲ 56 ರೂ., ಸುವರ್ಣಗೆಡ್ಡೆ 33 ರೂ., ಕೊತ್ತಂಬರಿ ಸೊಪ್ಪು 125 ರೂ., ಪಾಲಕ್‌ ಸೊಪ್ಪು 75 ರೂ.
ಹಣ್ಣು ಹಂಪಲುಗಳ ಬೆಲೆಯೂ ಏರಿಕೆಯಾಗಿದೆ. ಕಿತ್ತಳೆ 175 ರೂ., ಸೇಬು 180- 215 ರೂ., ದಾಳಿಂಬೆ 165 ರೂ. ಮೂಸಂಬಿ 56 ರೂ. ಧಾರಣೆ ಇತ್ತು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.