ಪ್ರವಾಸೋದ್ಯಮ ನೀತಿಯಲ್ಲಿ ಕಂಬಳ : ಕೇಂದ್ರ ಸಚಿವರ ಭರವಸೆ
Team Udayavani, Nov 15, 2022, 9:31 AM IST
ಉಳ್ಳಾಲ : ಪ್ರವಾಸೋದ್ಯಮ ನೀತಿ ರೂಪಿಸುವಾಗ ಕರಾವಳಿ ಜನರ ಸಂಸ್ಕೃತಿಯ ಭಾಗವಾಗಿರುವ ಕಂಬಳ ಕ್ರೀಡೆಯನ್ನು ಪ್ರವಾಸೋದ್ಯಮದ ಒಂದು ಭಾಗವಾಗಿ ಸೇರಿಸಲು ಪ್ರಯತ್ನಿಸುತ್ತೇನೆ ಎಂದು ಭಾರತ ಸರಕಾರದ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಶ್ರೀಪಾದ ಯೆಸ್ಸೋ ನಾಯಕ್ ತಿಳಿಸಿದರು.
ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ನಿರ್ಮಾಣ ಹಂತದಲ್ಲಿರುವ ಕಂಬಳ ಗದ್ದೆಯ ಕಾಮಗಾರಿ ವೀಕ್ಷಿಸಿ ಶಾಸಕ ಯು.ಟಿ. ಖಾದರ್ ಅವರಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಪ್ರವಾಸೋದ್ಯಮಕ್ಕೆ ಪೂರಕವಾಗಿ ಕಂಬಳ ಕ್ರೀಡೆಗೆ ಬೆಂಬಲ ನೀಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಶಾಸಕ ಖಾದರ್ ಅವರ ಮನವಿಗೆ ಸ್ಪಂದಿಸುವೆ ಎಂದರು.
ಅನುದಾನಕ್ಕೂ ಸಹಕಾರಿ
ಶಾಸಕ ಖಾದರ್ ಮಾತನಾಡಿ, ಕಂಬಳ ಕರೆ ನಿರ್ಮಾಣದೊಂದಿಗೆ ಈ ಭಾಗದಲ್ಲಿ ತುಳು ಗ್ರಾಮದ ಯೋಜನೆಯನ್ನು ರೂಪಿಸಿದ್ದು, ಮುಂದಿನ ದಿನಗಳಲ್ಲಿ ಈ ಪ್ರದೇಶ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿ ಪಡಿಸುವ ಯೋಜನೆ ರೂಪಿಸಲಾಗಿದೆ. ಕಂಬಳ ಕ್ರೀಡೆಯನ್ನು ಪ್ರವಾಸೋದ್ಯಮದ ಪಟ್ಟಿಯಲ್ಲಿ ಸೇರಿಸಿದರೆ ಅನುದಾನ ಬಿಡುಗಡೆಗೂ ಸಹಕಾರಿಯಾಗಲಿದೆ ಎಂದರು.
ನರಿಂಗಾನ ಗ್ರಾ.ಪಂ. ಅಧ್ಯಕ್ಷೆ ಶೈಲಜಾ ಜೆ. ಶೆಟ್ಟಿ, ಉಪಾಧ್ಯಕ್ಷ ನವಾಝ್ ನರಿಂಗಾನ, ತಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು, ಹರೇಕಳ ಗ್ರಾ.ಪಂ. ಅಧ್ಯಕ್ಷ ಬದ್ರುದ್ದಿನ್ ಫರೀದ್ನಗರ, ಮೊದಲಾದವರಿದ್ದರು.
ಇದನ್ನೂ ಓದಿ :ನಿಯಂತ್ರಣ ತಪ್ಪಿ ಕಡಲ ತೀರಕ್ಕೆ ಬಂದು ಅಪ್ಪಳಿಸಿದ ಮೀನುಗಾರಿಕಾ ಬೋಟ್; ತಪ್ಪಿದ ಭಾರೀ ಅನಾಹುತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ