ಮೂಡಬಿದಿರೆ:ಟೂರಿಸ್ಟ್ ಬಸ್ ಪಲ್ಟಿ,10ಮಂದಿಗೆ ಗಾಯ,ಸಂಚಾರ ಅಸ್ತವ್ಯಸ್ತ
Team Udayavani, Jun 8, 2017, 10:01 AM IST
ಮೂಡಬಿದಿರೆ : ಇಲ್ಲಿನ ಬೆಳುವಾಯಿ ಬಳಿಯ ಕೆಸರುಗೆದ್ದೆ ಎಂಬಲ್ಲಿ ಹೆದ್ದಾರಿಯಲ್ಲಿ ಟೂರಿಸ್ಟ್ ಬಸ್ ಪಲ್ಟಿಯಾಗಿ 10 ಮಂದಿ ಗಾಯಗೊಂಡ ಘಟನೆ ಗುರುವಾರ ಬೆಳಗಿನ ಜಾವ ಸಂಭವಸಿದೆ. ಘಟನೆಯಿಂದಾಗಿ ಮೂಡಬಿದಿರೆ-ಕಾರ್ಕಳ ಸಂಪರ್ಕಿಸುವ ರಸ್ತೆ ಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಬೇಕಾಯಿತು.
ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿತ್ತು.ರಸ್ತೆಯಿಂದ ಬಸ್ ತೆರವುಗೊಳಿಸಲಾಗಿದ್ದು ಇದೀಗ ಹೆದ್ದಾರಿ ವಾಹನ ಸಂಚಾರಕ್ಕೆ ತೆರವುಗೊಳಿಸಲಾಗಿದೆ.
32 ಪ್ರಯಾಣಿಕರಿದ್ದ ಟೂರಿಸ್ಟ್ ಬಸ್ ಉಡುಪಿಯಿಂದ ತಿರುಪತಿಗೆ ತೆರಳುತ್ತಿತ್ತು,ವಾಹನದಲ್ಲಿ ಹತ್ತು ಮಂದಿಗೆ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ