ಉಳ್ಳಾಲ: ಪ್ರವಾಸಿಗರಿಬ್ಬರು ಸಮುದ್ರಪಾಲು


Team Udayavani, Jun 29, 2017, 3:30 AM IST

Ale-neerupalu-28-6.jpg

ಉಳ್ಳಾಲ: ಮೊಗವೀರಪಟ್ಣ ಬೀಚ್‌ಗೆ ಬುಧವಾರ ಬೆಳಗ್ಗೆ ವಿಹಾರ ಬಂದಿದ್ದ ತುಮಕೂರು ಶಿರಾ ಮೂಲದ ಇಬ್ಬರು ಪ್ರವಾಸಿಗರು ಅಲೆಗಳಿಗೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ. ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ರಬ್‌ನಗರ ಮೊಹಲ್ಲಾದ ಮಗೀರ್‌ ರಸ್ತೆ ನಿವಾಸಿಗಳಾದ ಜಲೀಲ್‌ ಅವರ ಪುತ್ರ ಶಾರುಖ್‌ ಖಾನ್‌ (19) ಮತ್ತು ಸಿದ್ದೀಖ್‌ ಅವರ ಪುತ್ರ ಚೋಟು ಯಾನೆ ಹಯಾಝ್ (20) ಸಮುದ್ರಪಾಲಾದವರು. ಸಾದಿಕ್‌ ಹಬೀಬ್‌, ವಸೀಂ ಉಳ್ಳಾಲದ ಸರೋಜ್‌ ಆಸ್ಪತ್ರೆಯಲ್ಲಿ ಚೇತರಿಸುತ್ತಿದ್ದಾರೆ.

ಘಟನೆಯ ವಿವರ
ರಬ್‌ನಗರ ಮಗೀರ್‌ ರಸ್ತೆ ನಿವಾಸಿಗಳಾದ ಶಾರೂಖ್‌ ಸಹಿತ 10 ಮಂದಿ ಸ್ನೇಹಿತರ ತಂಡ ತುಮಕೂರಿನಿಂದ ಮಂಗಳವಾರ ಹೊರಟು ಉಳ್ಳಾಲ ದರ್ಗಾಕ್ಕೆ ಆಗಮಿಸಿತ್ತು. ಉಳ್ಳಾಲ ದರ್ಗಾ ಸಂದರ್ಶನ ನಡೆಸಿ ಸುಮಾರು 10 ಗಂಟೆಗೆ ಉಳ್ಳಾಲದ ಮೊಗವೀರಪಟ್ಣ ಬೀಚ್‌ಗೆ ಆಗಮಿಸಿದ್ದು, ಎಲ್ಲ 10 ಮಂದಿ ಉಳ್ಳಾಲ ಬೀಚ್‌ನ ಕಲ್ಲಿನ ಮೇಲೆ ನಿಂತು ಸೆಲ್ಫಿ ಫೋಟೋ ತೆಗೆದು ಬಳಿಕ ಸಮುದ್ರದ ಅಲೆಗಳೊಂದಿಗೆ ಆಟವಾಡಲು ಪ್ರಾರಂಭಿಸಿದರು. 10.30ರ ಸುಮಾರಿಗೆ ಶಾಂತವಾಗಿದ್ದ ಕಡಲು ಒಮ್ಮೆಲೇ ರೌದ್ರಾವತಾರ ತಾಳಲಾರಂಭಿಸಿದ್ದು, ದಡಕ್ಕೆ ದೊಡ್ಡ ಅಲೆಗಳು ಅಪ್ಪಳಿಸಲಾರಂಭಿಸಿದವು.

ಉಳ್ಳಾಲದ ಸಮುದ್ರದ ಅಲೆಗಳ ಅರಿವಿಲ್ಲದ ತಂಡ ಸಮುದ್ರದ ಅಲೆಗಳೊಂದಿಗೆ ಫೋಟೋ, ವೀಡಿಯೋ ತೆಗೆದುಕೊಂಡು ಆಟವಾಡುತ್ತಿತ್ತು. ಈ ಸಂದರ್ಭ ಬೃಹತ್‌ ಅಲೆಯೊಂದು ಬಡಿದಾಗ ಶಾರುಖ್‌ ಹಾಗೂ ಇನ್ನೊಂದು ಬದಿಯಲ್ಲಿದ್ದ ಹಯಾಝ್ ಸಮುದ್ರ ಪಾಲಾದರು. ಅಲೆಗಳು ಒಂದರ ಹಿಂದೆ ಒಂದು ಬರುತ್ತಿದ್ದಂತೆ ಹಯಾಝ್ ತಡೆಗೋಡೆಯ ಕಲ್ಲಿನೆಡೆ ಸಿಲುಕಿ ಸಾವನ್ನಪ್ಪಿದ್ದು, ಶಾರುಖ್‌ ಸಮುದ್ರ ಪಾಲಾಗಿದ್ದಾರೆ.

ಉಳ್ಳಾಲಕ್ಕೆ ಆಗಮಿಸಿದ ಕುಟುಂಬ
ಸಮುದ್ರ ಪಾಲಾಗಿರುವ ಶಾರುಖ್‌ ಮತ್ತು ಹಯಾಝ್ ಅವರ ಕುಟುಂಬಕ್ಕೆ ಸುದ್ದಿ ಮುಟ್ಟಿಸಿದ್ದು, ಉಳ್ಳಾಲಕ್ಕೆ ರಾತ್ರಿ ವೇಳೆಗೆ ತಲುಪಿದ್ದಾರೆ. ಇವರಲ್ಲಿ ಹಯಾಝ್ ಅವರ ಸಹೋದರ ಘಟನೆ ನಡೆದ ಸಂದರ್ಭದಲ್ಲಿ ಒಟ್ಟಿಗಿದ್ದ.

ಮೃತದೇಹ ಎತ್ತಲು ಪ್ರಯತ್ನ
ಸಮುದ್ರ ಪಾಲಾಗಿರುವ ಶಾರುಖ್‌ ಪತ್ತೆ ಕಾರ್ಯ ಮುಂದುವರಿದಿದ್ದು, ಕಲ್ಲಿನೆಡೆಯಲ್ಲಿ ಸಿಲುಕಿರುವ ಹಯಾಝ್ಮೃ ತದೇಹವನ್ನು ತೆಗೆಯಲು ಅಗ್ನಿಶಾಮಕ ದಳ, ಹೋಮ್‌ಗಾರ್ಡ್ಸ್‌ನ ಮುಳುಗು ತಜ್ಞರೊಂದಿಗೆ ಶಿವಾಜಿ ಜೀವರಕ್ಷಕ ಈಜುಗಾರರ ಸಂಘದ ಸದಸ್ಯರಾದ ಯೋಗೀಶ್‌ ಅಮೀನ್‌ ರಾಜೇಶ್‌ ಪುತ್ರನ್‌, ಅಶ್ವಿ‌ನ್‌, ರವಿ, ಲತೀಶ್‌, ಯಶ್‌ಪಾಲ್‌, ವಾಸುದೇವ್‌ ಹರೀಶ್‌ ಪ್ರಸಾದ್‌ ಸುವರ್ಣ, ಮೋಹನ್‌, ಹೋಮ್‌ ಗಾರ್ಡ್ಸ್‌ನ ತಣ್ಣೀರುಬಾವಿ ಜೀವರಕ್ಷಕರಾದ ಮಹಮ್ಮದ್‌ ವಾಸಿಂ, ಹಸನ್‌, ಜಾಕೀರ್‌, ಜಾವೀದ್‌, ಸಾದಿಕ್‌, ಮನ್ಸೂರು, ಇಮ್ರಾನ್‌, ವಿಜಿತ್‌, ಲಿಂಗಪ್ಪ, ಸನತ್‌ ಶ್ರಮಿಸುತ್ತಿದ್ದಾರೆ. ಈ ತಂಡ ಅಲೆಗಳ ನಡುವೆ ಮೃತದೇಹದ ಬಳಿ ಹಗ್ಗ ಕಟ್ಟಿ ಬಂದಿದ್ದು, ಬೆಳಗ್ಗೆ ಸಮುದ್ರದ ಅಬ್ಬರ ಕಡಿಮೆಯಾದಾಗ ಮೇಲೆತ್ತುವ ಸಾಧ್ಯತೆ ಇದೆ.

ಪೊಲೀಸ್‌, ಕಂದಾಯ ಮತ್ತು ಹೋಮ್‌ಗಾರ್ಡ್ಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ. ಉಳ್ಳಾಲ ಪೊಲೀಸರು, ಹೋಮ್‌ಗಾರ್ಡ್ಸ್‌ ಜನರನ್ನು ಸಮುದ್ರದ ಬಳಿ ತಲುಪದಂತೆ ವ್ಯವಸ್ಥೆಯನ್ನು ಮಾಡಿದ್ದಾರೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉದಯವಾಣಿ ಎಚ್ಚರಿಕೆ ನೀಡಿತ್ತು
ಸುರತ್ಕಲ್‌ ಸಮೀಪದ ಎನ್‌ಐಟಿಕೆ ಬೀಚ್‌ ಬಳಿ ಸೋಮವಾರ ಬೆಂಗಳೂರಿನ ಪ್ರವಾಸಿಗರು ಬಂಡೆ ಏರಿ ಸೆಲ್ಫಿ ತೆಗೆಯುವ ಸಂದರ್ಭ ಅಪಾಯಕ್ಕೆ ಸಿಲುಕಿದ್ದಾಗ ಹೋಮ್‌ಗಾರ್ಡ್ಸ್‌ ತಂಡ ರಕ್ಷಿಸಿತ್ತು. ಈ ಸಂದರ್ಭ ಸಮುದ್ರದಲ್ಲಿನ ಅಪಾಯದ ಕುರಿತಂತೆ ಉದಯವಾಣಿ ಎಚ್ಚರಿಸಿತ್ತು. ಸುರತ್ಕಲ್‌ ಘಟನೆಯ ಎರಡೇ ದಿನದಲ್ಲಿ ಈ ದುರಂತ ಸಂಭವಿಸಿದೆ.

ಮೂರು ದಿನಗಳ ಪ್ರವಾಸ ಕೈಗೊಂಡಿದ್ದರು
ಒಂದೇ ಮೊಹಲ್ಲಾದ ಈ ಹತ್ತು ಮಂದಿ ಮೂರು ದಿನಗಳ ಪ್ರವಾಸಕ್ಕೆಂದು ಫೋರ್ಸ್‌ ಟ್ರ್ಯಾಕ್ಸ್‌ ಜೀಪನ್ನು ಬಾಡಿಗೆಗೆ ಪಡೆದು ಬುಧವಾರ ತುಮಕೂರಿನಿಂದ ಹೊರಟಿದ್ದರು. ಶಿವಮೊಗ್ಗ ಬಳಿಯ ದರ್ಗಾ ಭೇಟಿ ಅನಂತರ ಉಳ್ಳಾಲ ದರ್ಗಾಕ್ಕೆ ಬುಧವಾರ ಬೆಳಗ್ಗೆ ಆಗಮಿಸಿದ್ದರು. ದರ್ಗಾ ವೀಕ್ಷಿಸಿ ಬಳಿಕ ಮೊಗವೀರ ಪಟ್ಣ ಬಳಿ ಇರುವ ಸಮುದ್ರ ತೀರಕ್ಕೆ ಆಗಮಿಸಿದ ಬಳಿಕ ಈ ಅವಘಡ ಸಂಭವಿಸಿತು. ಸಮುದ್ರ ಪಾಲಾದವರಲ್ಲಿ ಶಾರುಖ್‌ ತುಮಕೂರು ಸಮೀಪ ಮಾಂಸದ ಅಂಗಡಿ ಹೊಂದಿದ್ದರೆ, ಹಯಾಝ್ ಗಾರೆ ಕೆಲಸ ಮಾಡುತ್ತಿದ್ದಾರೆ. ಶಾರೂಖ್‌ ಅವರು ಮೂವರು ಸಹೋದರ, ಓರ್ವ ಸಹೋದರಿಯನ್ನು ಅಗಲಿದ್ದು, ಹಯಾಝ್ ಮೂವರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಎಚ್ಚರಿಕೆಯನ್ನು ಧಿಕ್ಕರಿಸಿ ನಡೆದರು
ಈದ್‌ ಹಬ್ಬದ ಆಚರಣೆಯ ಅಂಗವಾಗಿ ಕಳೆದ ಮೂರು ದಿನಗಳಿಂದ ಮೊಗವೀರಪಟ್ಣ ಬೀಚ್‌ಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಸ್ಥಳೀಯವಾಗಿ ಕಾರ್ಯಾಚರಣೆ ನಡೆಸುವ ಜೀವರಕ್ಷಕ ಈಜುಗಾರರ ಸಂಘದ ಸದಸ್ಯರು ಸಮುದ್ರ ತೀರಕ್ಕೆ ಬರುವ ಪ್ರವಾಸಿಗರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಬುಧವಾರವೂ ಸಮುದ್ರ ತೀರಕ್ಕೆ ಆಗಮಿಸಿದ್ದ ಈ ತಂಡಕ್ಕೆ ಸ್ಥಳೀಯ ಶಿವಾಜಿ ಜೀವ ರಕ್ಷಕ ಸಂಘದ ಈಜುಗಾರರಾದ ವಾಸುದೇವ ಬಂಗೇರ ಮತ್ತು ಪ್ರಸಾದ್‌ ಸುವರ್ಣ ಎಚ್ಚರಿಕೆ ನೀಡಿದ್ದರು. ‘ನಮ್ಮ ರಕ್ಷಣೆಯನ್ನು ನಾವು ನೋಡಿಕೊಳ್ಳುತ್ತೇವೆ’ ಎಂದಿದ್ದ ತಂಡ ಸಮುದ್ರದ ಅಲೆಗಳೊಂದಿಗೆ ಆಟವಾಡಲು ಪ್ರಾರಂಭಿಸಿತ್ತು. ಎಚ್ಚರಿಕೆ ನೀಡಿದ ಹತ್ತೇ ನಿಮಿಷದಲ್ಲಿ ಬೊಬ್ಬೆ ಕೇಳಿ ಇವರು ಓಡಿ ಬಂದಾಗ ಇಬ್ಬರು ಸಮುದ್ರ ಪಾಲಾಗಿದ್ದು, ಅವರಲ್ಲಿ ಹಯಾಝ್ ಅವರ ಮೃತದೇಹ ಕಲ್ಲಿನೆಡೆಯಲ್ಲಿ ಸಿಲುಕಿದ್ದರೂ ಸಮುದ್ರದ ಅಲೆಗಳಿಂದ ಮೃತದೇಹವನ್ನು ಮೇಲೆತ್ತಲು ಸಾಧ್ಯವಾಗಿಲ್ಲ.

ಟಾಪ್ ನ್ಯೂಸ್

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.