ಮಲ್ಲಿಕಟ್ಟೆ ಸರ್ಕಲ್‌ಗೆ ಸಾಂಪ್ರದಾಯಿಕ ಸ್ಪರ್ಶ


Team Udayavani, Nov 9, 2017, 1:52 PM IST

9-Nov-9.jpg

ಮಹಾನಗರ: ಮಲ್ಲಿಕಟ್ಟೆಯಲ್ಲಿರುವ ವೃತ್ತ ಕರಾವಳಿಯ ಗುತ್ತಿನ ಮನೆಯ ಸ್ವರೂಪದಂತೆ ಸಾಂಪ್ರದಾಯಿಕ ಶೈಲಿಯಲ್ಲಿ ಪುನಃರೂಪಿತವಾಗಲಿದೆ.

ಶೀಘ್ರವೇ ಕಾಮಗಾರಿ ಆರಂಭವಾಗಲಿದ್ದು, ನಗರದ ಭಂಡಾರಿ ಬಿಲ್ಡರ್ ಪ್ರಾಯೋಜಕತ್ವ ನೀಡಿದೆ. ಸುಮಾರು 15 ಲಕ್ಷ ರೂ. ವೆಚ್ಚದ ನಿರೀಕ್ಷೆ ಇದೆ. ವೃತ್ತದ ನಿರ್ಮಾಣ ಹಾಗೂ ನಿರ್ವಹಣೆಯನ್ನು ಸಂಸ್ಥೆ ಕೈಗೊಂಡು ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಿದೆ.

ವೃತ್ತದ ಸುತ್ತಲೂ ಗಾರ್ಡನ್‌ ಹಾಗೂ ಕಾರಂಜಿ, ಲ್ಯಾಂಡ್‌ಸ್ಕೇಪ್‌ ವ್ಯವಸ್ಥೆಯನ್ನು ರೂಪಿಸಲಾಗುತ್ತದೆ. ಜತೆಗೆ ತುಳುನಾಡಿನ ಸಾಂಪ್ರದಾಯಿಕ ಶೈಲಿಯನ್ನು ನೆನಪಿಸುವ ಮಾದರಿಯ ಗುತ್ತಿನ ಮನೆಯ ಕಲ್ಲಿನ ವಿನ್ಯಾಸದಲ್ಲಿ ಪಕ್ಕಾಸು ಜೋಡಿಸುವ ರೀತಿಯ ಕಮಾನು ರಚನೆಯಾಗಲಿದೆ. ಎಲ್‌ಇಡಿ ಲೈಟ್‌ನ ವ್ಯವಸ್ಥೆ ಹಾಗೂ ರಾಜ್ಯದ ಸಂಸ್ಕೃತಿ ಬಿಂಬಿಸುವ ಚಿತ್ರಗಳೂ ಇರಲಿವೆ.

ಜನವರಿ ವೇಳೆಗೆ ನಡೆಯುವ ಶ್ರೀ ಕ್ಷೇತ್ರ ಕದ್ರಿ ಜಾತ್ರಾ ಮಹೋತ್ಸವಕ್ಕಿಂತ ಮೊದಲು ಈ ವೃತ್ತದ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.

ಈ ಮಧ್ಯೆ, ಪಿವಿಎಸ್‌ ವೃತ್ತವನ್ನು ಆಕರ್ಷಕವಾಗಿ ಪುನಃರೂಪಿಸುವುದಾಗಿ ಪಿವಿಎಸ್‌ ಸಮೂಹ ಈಗಾಗಲೇ ಪಾಲಿಕೆಗೆ ಮನವಿ ಸಲ್ಲಿಸಿದೆ. ಉಳಿದಂತೆ ಪಾಲಿಕೆ ವ್ಯಾಪ್ತಿಯ ಕೆಲವು ವೃತ್ತಗಳನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದೆ.

ಎ.ಬಿ.ಶೆಟ್ಟಿ ಸರ್ಕಲ್‌, ಲೇಡಿಹಿಲ್‌ ಸರ್ಕಲ್‌, ನಂದಿಗುಡ್ಡ ಸರ್ಕಲ್‌, ಬಂಟ್ಸ್‌ಹಾಸ್ಟಲ್‌ ವೃತ್ತ, ಬಲ್ಲಾಳ್‌ಬಾಗ್‌ ಸರ್ಕಲ್‌ ಸಹಿತ ಕೆಲವೇ ವೃತ್ತಗಳು ಮಾತ್ರ ಇಂದು ನಗರದ ಶೋಭೆ ಹೆಚ್ಚಿಸುತ್ತಿವೆ. ಆದರೆ, ಮಾರ್ನಮಿಕಟ್ಟೆ, ಸ್ಟೇಟ್‌ಬ್ಯಾಂಕ್‌ ಸರ್ಕಲ್‌, ಅಂಬೇಡ್ಕರ್‌ ಸರ್ಕಲ್‌, ನಂತೂರು ಸರ್ಕಲ್‌, ಕ್ಲಾಕ್‌ ಟವರ್‌ ಸರ್ಕಲ್‌, ಕೆಪಿಟಿ ಸರ್ಕಲ್‌ ಸಹಿತ ಇನ್ನೂ ಹಲವು ಸರ್ಕಲ್‌ಗಳು ಸುಂದರವಾಗಿ ಪುನಃರೂಪಗೊಳ್ಳಬೇಕಿದೆ. 

ಖಾಸಗಿ ಸಂಘ ಸಂಸ್ಥೆಗಳಿಗೆ ಆಹ್ವಾನ
ನಗರದಲ್ಲಿನ ಖಾಲಿ ಸ್ಥಳದಲ್ಲಿ ಲ್ಯಾಂಡ್‌ಸ್ಕೇಪ್‌ ಮಾಡಲು ಹಾಗೂ ಪ್ರಮುಖ ವೃತ್ತಗಳನ್ನು ಸುಂದರಗೊಳಿಸಲು ಮುಂದೆ ಬರುವ ಖಾಸಗಿ ಸಂಸ್ಥೆಗಳಿಗೆ ಅನುಮತಿ ನೀಡಲು ಪಾಲಿಕೆ ತೀರ್ಮಾನಿಸಿದೆ. ರಸ್ತೆಗೆ ಅಡೆ ತಡೆಯಾಗದಂತೆ ವೃತ್ತದ ಉದ್ದ, ಅಗಲ ಇತ್ಯಾದಿ ಲೆಕ್ಕಾಚಾರ ನಡೆಸಿ, ಮೂಲ ವಿನ್ಯಾಸವನ್ನು ಪಾಲಿಕೆ ತಯಾರಿಸಿ ಖಾಸಗಿಯವರಿಗೆ ಹಸ್ತಾಂತರಿಸಲಿದೆ.

ವೃತ್ತವನ್ನು ಸುಂದರಗೊಳಿಸಲು ಬೇಕಾದ ವಿನ್ಯಾಸವನ್ನು ಖಾಸಗಿಯವರು ಮಾಡಿಕೊಂಡು,ಅಭಿವೃದ್ಧಿ ಹಾಗೂ ನಿರ್ವಹಣೆ ಹೊಣೆಯನ್ನು ವಹಿಸಿಕೊಳ್ಳಬೇಕಿದೆ. ಬಳಿಕ ಪಾಲಿಕೆಗೆ ಹಸ್ತಾಂತರಿಸಬೇಕಿದೆ.

ತುಳುನಾಡಿನ ಶೈಲಿ
ಕದ್ರಿ ದೇವಸ್ಥಾನ ದ್ವಾರದ ಮುಂಭಾಗದಲ್ಲಿರುವ ಮಲ್ಲಿಕಟ್ಟೆ ಸರ್ಕಲ್‌ ಅಭಿವೃದ್ದಿಗೆ ಭಂಡಾರಿ ಸಂಸ್ಥೆಯವರು ಮುಂದೆ ಬಂದಿದ್ದಾರೆ. ಈಗಾಗಲೇ ಎರಡು ಸರ್ಕಲ್‌ ಅಭಿವೃದ್ಧಿಗೊಳಿಸಿರುವ ಈ ಸಂಸ್ಥೆಯು ಮಲ್ಲಿಕಟ್ಟೆ ಸರ್ಕಲ್‌ ಅನ್ನು ತುಳುನಾಡಿನ ಸಾಂಪ್ರದಾಯಿಕ ಶೈಲಿ ಮತ್ತು ಅತ್ಯಾಧುನಿಕ ಮಾದರಿಯಲ್ಲಿ ನಿರ್ಮಿಸಲಿದೆ.
ಡಿ.ಕೆ.ಅಶೋಕ್‌, ಮನಪಾ ಸದಸ್ಯರು

ಮನಪಾ; 6 ವೃತ್ತಗಳ ಅಭಿವೃದ್ಧಿ 
ದೇಶದ ಸ್ವತ್ಛ ನಗರಗಳ ಪೈಕಿ 3 ನೇ ಸ್ಥಾನದಿಂದ 63ನೇ ಸ್ಥಾನಕ್ಕೆ ಇಳಿದ ಮಂಗಳೂರಿನ ಸುಂದರಗೊಳಿಸಲು ಮಹಾನಗರ ಪಾಲಿಕೆಯು ಮುಂದಾಗಿದೆ. ಪ್ರಮುಖ 6 ವೃತ್ತಗಳ ಅಭಿವೃದ್ಧಿಗೆ ಚಾಲನೆ ದೊರಕಿದೆ. ಪ್ರಾರಂಭಿಕವಾಗಿ ಸೈಂಟ್‌ ಆ್ಯಗ್ನೆಸ್‌ ವೃತ್ತ, ಸಿಟಿ ಆಸ್ಪತ್ರೆ ವೃತ್ತ, ಕರಾವಳಿ ವೃತ್ತ, ಪದವಿನಂಗಡಿ ವೃತ್ತ, ಕದ್ರಿ ವೃತ್ತ, ಮಲ್ಲಿಕಟ್ಟೆ ವೃತ್ತಗಳ ಅಭಿವೃದ್ಧಿಗೆ 3.50 ಕೋ.ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸಿಟಿ ಆಸ್ಪತ್ರೆ ಮುಂಭಾಗದಲ್ಲಿ ಕಾಮಗಾರಿ ಆರಂಭವಾಗಿದೆ. ಇದು ಪೂರ್ಣಗೊಂಡರೆ, ಇಲ್ಲಿ ವಾಹನ ಸವಾರರಿಗೆ ಫ್ರೀ ಲೆಫ್ಟ್ ಸೌಕರ್ಯ ಸಿಗಲಿದೆ. ವಾಹನದ ಒತ್ತಡ ಹಾಗೂ ತಿರುವಿನಲ್ಲಿ ಆತಂಕ ಪಡುವ ವಾತಾವರಣ ಇರದು ಎಂಬುದು ಮನಪಾ ಅಧಿಕಾರಿಗಳ ಅಭಿಪ್ರಾಯ. 

ಟಾಪ್ ನ್ಯೂಸ್

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.