ಚಾರ್ಮಾಡಿ: 3 ತಾಸು ಟ್ರಾಫಿಕ್ ಜಾಮ್
Team Udayavani, Oct 22, 2018, 11:30 AM IST
ಬೆಳ್ತಂಗಡಿ/ಮೂಡಿಗೆರೆ: ಚಾರ್ಮಾಡಿ ಘಾಟಿ ರಸ್ತೆಯ 10ನೇ ತಿರುವಿನಲ್ಲಿ ರವಿವಾರ ತರಕಾರಿ ಸಾಗಿಸುವ ಲಾರಿ ಮಗುಚಿ ಬಿದ್ದು, ಸಂಚಾರಕ್ಕೆ ತೊಂದರೆಯಾಯಿತು.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಹೊತ್ತು ಬರುತ್ತಿದ್ದ ಲಾರಿ ರವಿವಾರ ಮುಂಜಾನೆ 5.30ರ ವೇಳೆಗೆ 10ನೇ ತಿರುವಿನಲ್ಲಿ ಮಗುಚಿ ಬಿತ್ತು. ಈ ಸಂದರ್ಭ ಒಂದು ಬದಿಯ ವಾಹನ ಸಂಚಾರಕ್ಕೆ ತೊಂದರೆ ಇರಲಿಲ್ಲ. ಆದರೆ ಕೊಟ್ಟಿಗೆಹಾರದಿಂದ ಕ್ರೇನ್ ತರಿಸಿ ಲಾರಿಯನ್ನು ಸಹಜ ಸ್ಥಿತಿಗೆ ತರುವ ಸಂದರ್ಭ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದ ಸುಮಾರು ಮೂರು ತಾಸು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಪರಿಣಾಮ ರಸ್ತೆಯ ಎರಡೂ ಕಡೆ 10 ಕಿ.ಮೀ. ವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಬಣಕಲ್ ಪೊಲೀಸರು, ಹಸನಬ್ಬ ಚಾರ್ಮಾಡಿ ಮತ್ತು ಸಾರ್ವಜನಿಕರು ಲಾರಿಯನ್ನು ಸಹಜ ಸ್ಥಿತಿಗೆ ತರುವಲ್ಲಿ ನೆರವಾಗಿ ಸಂಚಾರ ಪುನರಾರಂಭಕ್ಕೆ ಅನುವು ಮಾಡಿಕೊಟ್ಟರು. ಬೆಳಗ್ಗೆ 10 ಗಂಟೆಯ ವೇಳೆಗೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು.
ಪ್ರಸ್ತುತ ಚಾರ್ಮಾಡಿ ಘಾಟಿ ರಸ್ತೆಯುದ್ದಕ್ಕೂ ಬೃಹತ್ ಹೊಂಡಗಳು ಸೃಷ್ಟಿಯಾಗಿದ್ದು, ವಾಹನ ಚಾಲಕರು ಹರಸಾಹಸ ಪಡಬೇಕಾದ ಸ್ಥಿತಿ ಇದೆ. ತಿರುವುಗಳಲ್ಲಿ ಚರಂಡಿಗಳು ನಿರ್ಮಾಣವಾಗಿವೆ. ಹೊಂಡಗಳಿಂದಾಗಿಯೇ ಕಳೆದ ವಾರ ಮೂರು ಲಾರಿಗಳು ಪಲ್ಟಿಯಾಗಿವೆ. ಹೀಗಾಗಿ ತತ್ಕ್ಷಣ ಹೊಂಡಗಳಿಗೆ ಮುಕ್ತಿ ನೀಡುವ ಕಾರ್ಯವನ್ನು ರಾ.ಹೆ. ಇಲಾಖೆ ಮಾಡಬೇಕಿದೆ ಎಂದು ಆಗ್ರಹ ಕೇಳಿಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ