![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಚಾರ್ಮಾಡಿ: 3 ತಾಸು ಟ್ರಾಫಿಕ್ ಜಾಮ್
Team Udayavani, Oct 22, 2018, 11:30 AM IST
![ghati.jpg](https://www.udayavani.com/wp-content/uploads/2018/10/22/ghati-620x349.jpg)
ಬೆಳ್ತಂಗಡಿ/ಮೂಡಿಗೆರೆ: ಚಾರ್ಮಾಡಿ ಘಾಟಿ ರಸ್ತೆಯ 10ನೇ ತಿರುವಿನಲ್ಲಿ ರವಿವಾರ ತರಕಾರಿ ಸಾಗಿಸುವ ಲಾರಿ ಮಗುಚಿ ಬಿದ್ದು, ಸಂಚಾರಕ್ಕೆ ತೊಂದರೆಯಾಯಿತು.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಹೊತ್ತು ಬರುತ್ತಿದ್ದ ಲಾರಿ ರವಿವಾರ ಮುಂಜಾನೆ 5.30ರ ವೇಳೆಗೆ 10ನೇ ತಿರುವಿನಲ್ಲಿ ಮಗುಚಿ ಬಿತ್ತು. ಈ ಸಂದರ್ಭ ಒಂದು ಬದಿಯ ವಾಹನ ಸಂಚಾರಕ್ಕೆ ತೊಂದರೆ ಇರಲಿಲ್ಲ. ಆದರೆ ಕೊಟ್ಟಿಗೆಹಾರದಿಂದ ಕ್ರೇನ್ ತರಿಸಿ ಲಾರಿಯನ್ನು ಸಹಜ ಸ್ಥಿತಿಗೆ ತರುವ ಸಂದರ್ಭ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದ ಸುಮಾರು ಮೂರು ತಾಸು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಪರಿಣಾಮ ರಸ್ತೆಯ ಎರಡೂ ಕಡೆ 10 ಕಿ.ಮೀ. ವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಬಣಕಲ್ ಪೊಲೀಸರು, ಹಸನಬ್ಬ ಚಾರ್ಮಾಡಿ ಮತ್ತು ಸಾರ್ವಜನಿಕರು ಲಾರಿಯನ್ನು ಸಹಜ ಸ್ಥಿತಿಗೆ ತರುವಲ್ಲಿ ನೆರವಾಗಿ ಸಂಚಾರ ಪುನರಾರಂಭಕ್ಕೆ ಅನುವು ಮಾಡಿಕೊಟ್ಟರು. ಬೆಳಗ್ಗೆ 10 ಗಂಟೆಯ ವೇಳೆಗೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು.
ಪ್ರಸ್ತುತ ಚಾರ್ಮಾಡಿ ಘಾಟಿ ರಸ್ತೆಯುದ್ದಕ್ಕೂ ಬೃಹತ್ ಹೊಂಡಗಳು ಸೃಷ್ಟಿಯಾಗಿದ್ದು, ವಾಹನ ಚಾಲಕರು ಹರಸಾಹಸ ಪಡಬೇಕಾದ ಸ್ಥಿತಿ ಇದೆ. ತಿರುವುಗಳಲ್ಲಿ ಚರಂಡಿಗಳು ನಿರ್ಮಾಣವಾಗಿವೆ. ಹೊಂಡಗಳಿಂದಾಗಿಯೇ ಕಳೆದ ವಾರ ಮೂರು ಲಾರಿಗಳು ಪಲ್ಟಿಯಾಗಿವೆ. ಹೀಗಾಗಿ ತತ್ಕ್ಷಣ ಹೊಂಡಗಳಿಗೆ ಮುಕ್ತಿ ನೀಡುವ ಕಾರ್ಯವನ್ನು ರಾ.ಹೆ. ಇಲಾಖೆ ಮಾಡಬೇಕಿದೆ ಎಂದು ಆಗ್ರಹ ಕೇಳಿಬರುತ್ತಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.