ಕೂಳೂರು ಸೇತುವೆಯಲ್ಲಿ ನಿತ್ಯ ಟ್ರಾಫಿಕ್‌ ಜಾಮ್‌


Team Udayavani, Aug 27, 2018, 1:22 PM IST

kuloor.jpg

ಪಣಂಬೂರು: ಕೂಳೂರಿನ ಫ‌ಲ್ಗುಣಿ ನದಿಯ ಹಳೆಯ ಸೇತುವೆಯ ಮೇಲಿನ ಡಾಮರು ಕಿತ್ತು ಹೋಗಿ ಸೇತುವೆಯ ತಳ ಕಾಣುವಂತೆ ಹೊಂಡಗಳು ಎದ್ದಿವೆ. ರಸ್ತೆಯಿಂದ ಎದ್ದ ಪುಡಿ ಒಂದೆಡೆ ಸೇರಿ ದಿಣ್ಣೆಗಳಾಗಿದ್ದು, ವಾಹನ ಓಡಾಟ ದುಸ್ತರವಾಗಿದೆ. ಶಾಲೆ, ಕಾಲೇಜು, ಕಚೇರಿ ಬಿಡುವ ಸಮಯದಲ್ಲಿ ನಿತ್ಯ ಸೇತುವೆ ದಾಟಲು ಕನಿಷ್ಠ ಒಂದೆರಡು ತಾಸು ಬೇಕು. ಉಡುಪಿ ಕಡೆಯಿಂದ ಬರುವ ವಾಹನಗಳು ಪಣಂಬೂರು, ಎಂಸಿಎಫ್‌ ಮುಂಭಾಗದಿಂದಲೇ ಸರತಿಯಲ್ಲಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ.

ಮಳೆ ನೀರು ನಿಂತು ಹೊಂಡದ ಆಳ ತಿಳಿಯದೆ ದ್ವಿಚಕ್ರ ಸವಾರರು ಎದ್ದು ಬಿದ್ದು ಸಂಚರಿಸುವ ಸ್ಥಿತಿಯಾದರೆ, ಘನ ವಾಹನಗಳು ಆಮೆಗತಿಯಲ್ಲಿ ಸೇತುವೆ ದಾಟುತ್ತಿವೆ. ಸದ್ಯ ಮಳೆ ತನ್ನ ಆರ್ಭಟವನ್ನು ಕೊಂಚ ಸಡಿಲಿಸಿದ್ದರೂ ತಾತ್ಕಾಲಿಕ ದುರಸ್ತಿಗೂ ಇಲಾಖೆ ಮುಂದಾಗಿಲ್ಲ. ಮಳೆಗಾಲದ ಕೆಲವೇ ತಿಂಗಳ ಮೊದಲು ಪೇವರ್‌ ಫಿನಿಶ್‌ನೊಂದಿಗೆ ಕಂಗೊಳಿಸುವ ಕೂಳೂರು ಸೇತುವೆ ಹಾಗೂ ಪಣಂಬೂರು ಸುರತ್ಕಲ್‌ ಹೆದ್ದಾರಿ ಒಂದು ಮಳೆ ಬಂದರೆ ತನ್ನ ನೈಜ ರೂಪ ತೋರಿಸುತ್ತದೆ. ಪೇವರ್‌ ಫಿನಿಶ್‌ ಎದ್ದು ಹೋಗಿ ಅಲ್ಲಲ್ಲಿ ಹೊಂಡ, ಇನ್ನು ಕೆಲವೆಡೆ ಡಾಮರಿನ ದಿಣ್ಣೆ ಎದ್ದು ನಿಲ್ಲುತ್ತದೆ. ಆ್ಯಂಬುಲೆನ್ಸ್‌ನಂಥ ತುರ್ತು ಸೇವೆಯ ವಾಹನಗಳು ಈ ಟ್ರಾಫಿಕ್‌ ಬ್ಲಾಕ್‌ನಲ್ಲಿ ಸಿಲುಕಿದರೆ ಅಸಹಾಯವಾಗಿ ನಿಲ್ಲುವುದನ್ನು ಬಿಟ್ಟರೆ ಬೇರೇನೂ ಮಾಡಲಾಗದು. ವಿಮಾನ ರೈಲು ಯಾನಿಗಳು ಒಂದೆರಡು ತಾಸು ಬೇಗನೇ ಮನೆ ಬಿಡದಿದ್ದರೆ ನಿಗದಿತ ಪ್ರಯಾಣ ಕೈ ತಪ್ಪುವುದು ಖಚಿತ.

ಇನ್ನೆಷ್ಟು  ಸಮಯ ಬೇಕು?
ಸೇತುವೆಯಲ್ಲಿ ಇಂತಹ ಅವಾಂತರ ಪ್ರತೀ ವರ್ಷ ಸೃಷ್ಟಿಯಾಗುತ್ತಿದ್ದರೂ ಶಾಶ್ವತ ಪರಿಹಾರ ಇನ್ನೂ ಕನಸು. ಸೇತುವೆಗಳ ಇಕ್ಕೆಲಗಳಲ್ಲಿ ಇರುವ ತಡೆಗೋಡೆ ಈಗಾಗಲೇ ಫ‌ಲ್ಗುಣಿ ಒಡಲು ಸೇರಿ ಹಲವು ತಿಂಗಳುಗಳೇ ಕಳೆದಿದ್ದರೂ ದುರಸ್ತಿಯಾಗಿಲ್ಲ. ಈ ರಸ್ತೆ ಶಾಶ್ವತವಾಗಿ ದುರಸ್ತಿಯಾಗಲು ಇನ್ನೆಷ್ಟು ಸಮಯ ಬೇಕು ಎಂಬುದೇ ಯಕ್ಷ ಪ್ರಶ್ನೆ.

ಅಪಾಯಕ್ಕೆ ಆಹ್ವಾನ
ಫ‌ಲ್ಗುಣಿ ನದಿಯ ಸೇತುವೆ ತಡೆಗೋಡೆ ಕೂಡ ದುರ್ಬಲವಾಗಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಹಿಂದೆ ಅಪಾಯಕಾರಿ ತಿರುವು ಇರುವಲ್ಲಿ ಒಂದು ಕಾರು ಹಾಗೂ ಸಿಮೆಂಟು ಸಾಗಿಸುತ್ತಿದ್ದ ಲಾರಿ ಉರುಳಿ ಬಿದ್ದು ಚಾಲಕರು ಹಾಗೂ ಪ್ರಯಾಣಿಕರು ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದರು. ಮಳೆಗಾಲದಲ್ಲಿ ನೀರು ನಿಲ್ಲುತ್ತಿದ್ದು, ರಾತ್ರಿ ವೇಳೆ ಅಪಘಾತ ನಡೆದರೂ ತಿಳಿಯದ ಸ್ಥಿತಿ ಇದೆ.
 ಉಡುಪಿಯಿಂದ ಮಂಗಳೂರು ಕಡೆ ಬರುವಲ್ಲಿ ಸೇತುವೆ ಬಳಿ ಕಡಿದಾದ ತಿರುವು ಇದ್ದು, ಕೆಲವು ವಾಹನಗಳು ನಿಯಂತ್ರಣ ಕಳೆದುಕೊಂಡು ತಡೆಗೋಡೆಗೆ ಢಿಕ್ಕಿ ಹೊಡೆಯುತ್ತವೆ. ಈ ಭಾಗದಲ್ಲಿ ಸುಮಾರು 15-20 ಅಡಿ ಆಳವಿದ್ದು, ಈ ಕಡಿದಾದ ತಿರುವು ಬಹಳ ಅಪಾಯಕಾರಿ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.