ಮರಳು ಲಾರಿಗಳ ಓಡಾಟ: ಸವಾರರಿಗೆ ಸಂಕಷ್ಟ


Team Udayavani, Mar 8, 2019, 5:56 AM IST

8-march-6.jpg

ನಗರ : ಮರಳು, ಮಣ್ಣು ಸಾಗಾಟದ ಲಾರಿಗಳ ಅಕ್ರಮ ಓಡಾಟದಿಂದ ದ್ವಿಚಕ್ರ ವಾಹನ ಸವಾರರು ಸಂಕಷ್ಟು ಅನುಭವಿಸುವಂತಾಗಿದೆ. ಲೋಡ್‌ ಲಾರಿಗಳ ಮೇಲೆ ಟಾರ್ಪಾಲು ಹೊದಿಸದೇ ಇರುವುದೇ ಸಮಸ್ಯೆಗೆ ಮೂಲ ಕಾರಣ.

ಮರಳು ಹಾಗೂ ಮಣ್ಣು ಸಾಗಾಟದ ಲಾರಿಗಳು, ಲೋಡ್‌ ಕೊಂಡೊಯ್ಯುವಾಗ ಮೇಲ್ಗಡೆ ಟಾರ್ಪಾಲು ಹೊದಿಸಿಯೇ ಸಾಗಾಟ ಮಾಡಬೇಕು ಎನ್ನುವ ನಿಯಮವಿದೆ. ಇದರ ಬಗ್ಗೆ ಹಿಂದೊಮ್ಮೆ ಕ್ರಮ ಕೈಗೊಳ್ಳುವ ಕಾಯಕಕ್ಕೂ ಪೊಲೀಸರು ಮುಂದಾಗಿದ್ದರು. ಆದರೆ ಇದೀಗ ಕ್ರಮ ಕೈಗೊಳ್ಳುವ ಕಾರ್ಯ ನಿಂತು ಹೋಗಿದೆ. ಪರಿಣಾಮ ಲಾರಿಗಳ ಬೇಕಾಬಿಟ್ಟಿ ವರ್ತನೆ ಮುಂದುವರಿದಿದೆ.

ಲೋಡ್‌ ಲಾರಿ ವೇಗವಾಗಿ ಸಾಗುವಾಗ ಮಣ್ಣು ಅಥವಾ ಮರಳು ಎರಚುವುದು ಸಾಮಾನ್ಯ. ಹಿಂಬದಿಯಿಂದ ಬರುತ್ತಿರುವ ದ್ವಿಚಕ್ರ, ತ್ರಿಚಕ್ರ ವಾಹನಗಳ ಸವಾರರಿಗೆ ಇದೇ ದೊಡ್ಡ ಅಪಾಯ. ಮುಖಕ್ಕೆ ಮಣ್ಣು ಅಥವಾ ಮರಳು ಬಿದ್ದರೆ, ಅಪಘಾತ ತಪ್ಪಿದ್ದಲ್ಲ. ಎಷ್ಟೋ ಸಂದರ್ಭದಲ್ಲಿ ಲಾರಿ ಗಳ ಹಿಂಭಾಗದಿಂದ ಹೋಗಲು ಸಾಧ್ಯವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣ ಆಗಿರುತ್ತದೆ. ಜಲ್ಲಿ ಕಲ್ಲುಗಳು ಅಥವಾ ಮರಳಿನ ಜತೆಗೆ ಬರುವ ದೊಡ್ಡ ಹರಳುಗಳು ವಾಹನಗಳ ಗಾಜಿನ ಮೇಲೆ ಬಿದ್ದರೂ ಗಾಜು ಒಡೆಯುತ್ತದೆ. ಮರಳಿನ ಕಣಗಳು ಸಿಡಿದು ಸವಾರರ ಮೈಗೆ ಸೂಜಿಗಳಿಂದ ಚುಚ್ಚಿದಂತಹ ಅನುಭವ ಆಗುತ್ತಿದೆ.

ಅಪಾಯಕಾರಿ ರಾಡ್‌
ರಾಡ್‌ಗಳನ್ನು ಸಾಗಿಸುವ ಲಾರಿಗಳು ನಿಯಮವನ್ನು ಉಲ್ಲಂಘಿಸುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎನ್ನುವ ದೂರುಗಳು ಕೇಳಿ ಬಂದಿವೆ. ಕೆಲ ಲಾರಿಗಳಲ್ಲಿ ಲೋಡ್‌ ಮಾಡಿರುವ ರಾಡ್‌ಗಳು ಹೊರ ಭಾಗಕ್ಕೆ ಚಾಚಿಕೊಂಡಿರುತ್ತವೆ. ರಾತ್ರಿ ಸಮಯವಂತೂ ಇವು ಗಮನಕ್ಕೆ ಬರುವುದಿಲ್ಲ. ಹಿಂಬದಿಯಿಂದ ಬರುವ ವಾಹನಗಳಿಗೆ ಇದು ತೀರಾ ಅಪಾಯಕಾರಿ. ರಾಡ್‌ ಇರುವುದು ಸ್ಪಷ್ಟವಾಗಿ ಕಾಣುವಂತೆ ಲೇಸರ್‌ ಪಟ್ಟಿ, ಕೆಂಪು ಬಟ್ಟೆ ಅಥವಾ ಸ್ಟಿಕ್ಕರ್‌ಗಳನ್ನು ಹಾಕುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವ ಅಗತ್ಯವಿದೆ.

ಕಣ್ಣ ಮುಂದೆಯೇ ಅಪಘಾತ
ಮಣ್ಣು, ಮರಳು ತುಂಬಿದ ಲಾರಿಗಳು ಟಾರ್ಪಾಲು ಹೊದಿಸದೇ ಸಾಗಾಟ ಮಾಡುತ್ತಿವೆ. ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ತುಂಬಾ ತೊಂದರೆ ಆಗಿದೆ. ನನ್ನ ಕಣ್ಣ ಮುಂದೆ ಅಪಘಾತ ನಡೆದಿರುವುದನ್ನು ಕಂಡಿದ್ದೇನೆ. ಇದರ ಜತೆಗೆ ರಾಡ್‌ ತುಂಬಿದ ಲಾರಿಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
 - ಸಲೀಂ ಬರೆಪ್ಪಾಡಿ,
     ಕೂರ್ನಡ್ಕ

ಕಂಡಲ್ಲಿ ದಂಡ
ಹೆಚ್ಚಾಗಿ ಟಾರ್ಪಾಲು ಹೊದಿಸಿ, ಮರಳು ಮತ್ತು ಮಣ್ಣನ್ನು ಸಾಗಿಸಲಾಗುತ್ತಿದೆ. ಕೆಲವು ಕಡೆಗಳಲ್ಲಿ ಟಾರ್ಪಾಲು ಹೊದಿಸದೆ ಸಂಚರಿಸುವ ಘಟನೆಗಳೂ ಆಗುತ್ತಿವೆ. ಇಂತಹ ಲಾರಿಗಳು ಕಂಡುಬಂದಲ್ಲಿ ದಂಡ ವಿಧಿಸಲಾಗುವುದು.
– ಶ್ರೀಧರ್‌
ಆರ್‌ಟಿಒ, ಪುತ್ತೂರು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.