ರಸ್ತೆ ಗುಂಡಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದ ಟ್ರಾಫಿಕ್ ಪೊಲೀಸ್
Team Udayavani, Nov 3, 2019, 6:53 AM IST
ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್ ಸರ್ಕಲ್ ಸಮೀಪ ರಸ್ತೆ ಬದಿಯ ಗುಂಡಿಯೊಂದನ್ನು ಶುಕ್ರವಾರ ಟ್ರಾಫಿಕ್ ಪೂರ್ವ ಠಾಣೆ (ಕದ್ರಿ)ಯ ಸಿಬಂದಿ ಪುಟ್ಟರಾಮ ಅವರು ತಾನೇ ಕಲ್ಲು, ಮಣ್ಣು ಹಾಕಿ ಮುಚ್ಚುವ ಮೂಲಕ ಜನಪರ ಕಾಳಜಿ ಮೆರೆದಿದ್ದಾರೆ.
ಈ ಗುಂಡಿಯಲ್ಲಿ ದ್ವಿಚಕ್ರ ವಾಹನ ಮತ್ತು ರಿಕ್ಷಾ ಚಾಲಕರು ಭಾರೀ ಪ್ರಯಾಸ ಪಡುತ್ತಿದ್ದರು. ದ್ವಿಚಕ್ರ ಸವಾರರು ಅಪಘಾತಕ್ಕೂ ಈಡಾಗುತ್ತಿದ್ದರು. ಈ ದುರವಸ್ಥೆಯ ಬಗ್ಗೆ ಟ್ರಾಫಿಕ್ ಪೊಲೀಸ್ ಸಿಬಂದಿ ಪುಟ್ಟರಾಮ ವಿಡಿಯೋ ಮಾಡಿ ಮನಪಾ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು ಈ ದೂರಿಗೆ ಸ್ಪಂದಿಸಿರಲಿಲ್ಲ. ಬಳಿಕ ಪುಟ್ಟರಾಮ ಅವರು ತಾನೇ ಗುಂಡಿ ಮುಚ್ಚಲು ನಿರ್ಧರಿಸಿದರು.
ಅವರ ಸಾಮಾಜಿಕ ಕಾಳಜಿಗೆ ನಗರ ಪೊಲೀಸ್ ಆಯುಕ್ತ ಡಾ| ಹರ್ಷ ಪಿ.ಎಸ್. ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಹಾಗೂ ಸೋಮವಾರ ಬೆಳಗ್ಗೆ 11.30ಕ್ಕೆ ಕಚೇರಿಗೆ ಕರೆದು ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?