ನಿರ್ವಹಣೆಯಿಲ್ಲದೆ ನಗರದ ಸರ್ವಿಸ್‌ ರಸ್ತೆಗಳಲ್ಲಿ  ಸಂಚಾರ ಸಂಕಷ್ಟ


Team Udayavani, Sep 25, 2021, 3:40 AM IST

ನಿರ್ವಹಣೆಯಿಲ್ಲದೆ ನಗರದ ಸರ್ವಿಸ್‌ ರಸ್ತೆಗಳಲ್ಲಿ  ಸಂಚಾರ ಸಂಕಷ್ಟ

ಮಹಾನಗರ: ಮಂಗಳೂರು ನಗರದ ಫ್ಲೈಓವರ್‌ ಸಂಪರ್ಕಿತ ಸರ್ವಿಸ್‌ ರಸ್ತೆ ಅಭಿವೃದ್ಧಿಯ ಬಗ್ಗೆ ಮಹಾನಗರ ಪಾಲಿಕೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಡುವೆ ಪರಸ್ಪರ ಹೊಂದಾಣಿಕೆ ಇರದ ಕಾರಣ ಸಾರ್ವಜನಿಕರು ಇದೀಗ ತೊಂದರೆ ಪಡುವಂತಾಗಿದೆ.

ಮನಪಾ ವ್ಯಾಪ್ತಿಯ ಸರ್ವಿಸ್‌ ರಸ್ತೆಗಳು ಗುಂಡಿ ಬಿದ್ದರೆ ಅಥವಾ ಸರ್ವಿಸ್‌ ರಸ್ತೆಗಳಲ್ಲಿ ಯಾವುದೇ ಕಾಮಗಾರಿ ನಡೆಯಬೇಕಾಗಿದ್ದರೆ ಅದಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಯ ಅನುಮತಿ ಅಗತ್ಯ. ಹೀಗೆ ಮನಪಾ ಅನುಮತಿ ಪಡೆಯಲು ಕೆಲವು ದಿನಗಳವರೆಗೆ ಕಾಯಬೇಕಾದ ಅನಿವಾರ್ಯ ಎದುರಾಗಿದೆ.

ಇತ್ತೀಚೆಗಷ್ಟೇ ಕುಂಟಿಕಾನ ಬಳಿಯ ಫ್ಲೈಓವರ್‌ ಬಳಿಯ ಸರ್ವಿಸ್‌ ರಸ್ತೆಯಲ್ಲಿ ನೀರಿನ ಪೈಪ್‌ಲೈನ್‌ ಒಡೆದು ಹೋಗಿತ್ತು. ಪೈಪ್‌ಲೈನ್‌ ಕಾಮಗಾರಿಗೆ ಮನಪಾದಿಂದ ರಸ್ತೆ ಅಗೆಯುತ್ತಿದ್ದಾಗ ಅನುಮತಿ ಪಡೆದಿಲ್ಲ ಎಂಬ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಾಮಗಾರಿ ನಡೆಸಲು ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಮನಪಾದಿಂದ ಇಲಾಖೆಗೆ ಪತ್ರ ಬರೆದು ಅನುಮತಿ ಪಡೆಯುವಷ್ಟರಲ್ಲಿ ಮೂರ್‍ನಾಲ್ಕು ದಿನ ಕಳೆದಿತ್ತು. ಅಷ್ಟೇಅಲ್ಲ ರಸ್ತೆ ಕಾಮಗಾರಿ ಕೂಡ ಅರ್ಧದಲ್ಲಿಯೇ ನಿಂತು ರಸ್ತೆ ತುಂಬಾ ನೀರು ಹರಿಯುತ್ತಿತ್ತು.

ಕುಂಟಿಕಾನ ಫ್ಲೈಓವರ್‌ನಿಂದ ಲೋಹಿತ್‌ನಗರಕ್ಕೆ ಸಂಪರ್ಕ ಕಲ್ಪಿಸುವ ಕಾರು ಶೋರೂಂ ಎದುರಿನ ಸರ್ವಿಸ್‌ ರಸ್ತೆ ಮಧ್ಯೆ ದೊಡ್ಡ ದೊಡ್ಡ ಗುಂಡಿಯಾಗಿದ್ದು, ಇದರಿಂದಾಗಿ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಈ ರಸ್ತೆಯಲ್ಲಿ ಕೆಲವು ಸಮಯಗಳ ಹಿಂದೆ ಪಾಲಿಕೆಯು ಒಳಚರಂಡಿ ಕಾಮಗಾರಿ ನಡೆಸಿದ್ದು, ರಸ್ತೆ ಅಗೆದು ಅರ್ಧಂಬರ್ಧ ಬಿಡಲಾಗಿದೆ. ಡಾಮರು ಕಾಮಗಾರಿ ಮನಪಾ ನಡೆಸಬೇಕು ಎಂಬ ಪಟ್ಟು ಎನ್‌ಎಚ್‌ಎಐ ಹಿಡಿದಿತ್ತು. ಮನಪಾ ಈಗಾಗಲೇ ಟೆಂಡರ್‌ ಕರೆದರೂ ಕಾಮಗಾರಿ ಇನ್ನೂ ಆರಂಭವಾಗಿಲ್ಲ.

ಹಲವಾರು ಬಾರಿ ಡಾಮರು ತೇಪೆ ಕಾಮಗಾರಿ ನಡೆಸಲಾದ ಪಂಪ್‌ವೆಲ್‌ ಸರ್ವಿಸ್‌ ರಸ್ತೆ ಇದೀಗ ಮತ್ತೆ ಗುಂಡಿ ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಪಂಪ್‌ವೆಲ್‌ ಮೇಲ್ಸೇತುವೆ ಆರಂಭದಿಂದ ಅಂತ್ಯದವರೆಗೆ ಎರಡೂ ಕಡೆ ಇರುವ ಸರ್ವಿಸ್‌ ರಸ್ತೆಯ ಅಲ್ಲಲ್ಲಿ ಗುಂಡಿಬಿದ್ದಿದ್ದು, ಮಳೆಗಾಲದಲ್ಲಂತೂ ರಸ್ತೆ ಪೂರ್ತಿ ನೀರು ತುಂಬಿಕೊಂಡಿರುತ್ತದೆ. ಸದ್ಯ ಸರ್ವಿಸ್‌ ರಸ್ತೆ ಇಕ್ಕೆಲದಲ್ಲಿರುವ ನೀರು ಹರಿಯುವ ಚರಂಡಿ ನಿರ್ವಹಣೆ ಕೊರತೆಯೂ ಎದ್ದು ಕಾಣುತ್ತದೆ.

50 ಲಕ್ಷ ರೂ. ಅನುದಾನಕ್ಕೆ ಆಗ್ರಹ:

ಪ್ರದೇಶಾಭಿವೃದ್ಧಿ ನಿಧಿಯ ಮೊದಲನೇ ಹಂತದದಲ್ಲಿ ಸಾಮಾನ್ಯವಾಗಿ ಪ್ರತೀ ವಾರ್ಡ್‌ ಗೆ  ಸುಮಾರು 50 ಲಕ್ಷ ರೂ. ಬಿಡುಗಡೆಯಾಗುತ್ತಿತ್ತು. ಆದರೆ, ಈ ಬಾರಿ ಕೇವಲ 25 ಲಕ್ಷ ರೂ. ಹಣ ಮಾತ್ರ ಮಂಜೂರು ಮಾಡಲಾಗಿದೆ. ಇದಕ್ಕೆ ವಿಪಕ್ಷದ ಸದಸ್ಯರು ಈಗಾಗಲೇ ಆಕ್ಷೇಪ ವ್ಯಕ್ತಪಡಿಸಿದ್ದು, 50 ಲಕ್ಷ ರೂ. ನೀಡಬೇಕೆಂದು ಆಗ್ರಹಿಸಿದ್ದಾರೆ. ಆದರೆ ಕೊರೊನಾ ನೆಪವೊಡ್ಡಿ ಉಳಿದ ಹಣ ಮಂಜೂರಾಗುವುದು ಅನುಮಾನ ಎನ್ನಲಾಗಿದೆ. ಅನುದಾನದ ಕೊರತೆಯಿಂದಾಗಿ ಈ ಬಾರಿ ಬಹುತೇಕ ಕಾಮಗಾರಿಗಳು ಅರ್ಧಕ್ಕೇ ನಿಂತಿವೆ. ಈಗಾಗಲೇ ಆರಂಭಿಸಿದ ಕಾಮಗಾರಿ ನಡೆಯುತ್ತಿದೆಯೇ ವಿನಾ ಹೊಸ ಕಾಮಗಾರಿಗಳು ಆರಂಭವಾಗಿಲ್ಲ. ಇನ್ನು, ಪಾಲಿಕೆ ಬಜೆಟ್‌ನಲ್ಲಿ ಘೋಷಣೆ ಮಾಡಿದಂತ ಹಲವಾರು ಯೋಜನೆಗಳು ಕೂಡ ಇನ್ನೂ ಟೇಕಾಫ್‌ ಆಗಿಲ್ಲ.

ಹಣ ಸಂಗ್ರಹವಾಗಿಲ್ಲ; ಬಿಡುಗಡೆಯಾಗಿಲ್ಲ :

ಕೊರೊನಾ ಕಾರಣದಿಂದಾಗಿ ಈ ಬಾರಿ ಪಾಲಿಕೆ ಆದಾಯ ಕುಸಿದಿದೆ. ಆಸ್ತಿ ತೆರಿಗೆ, ಘನತ್ಯಾಜ್ಯ ನಿರ್ವಹಣೆ ಶುಲ್ಕ, ಉದ್ದಿಮೆ ಪರವಾನಿಗೆ ಸಹಿತ ಪಾಲಿಕೆಯ ವಿವಿಧ ಶುಲ್ಕಗಳು ಸಮರ್ಪಕವಾಗಿ ಸಂಗ್ರಹವಾಗಿಲ್ಲ. ಇದರಿಂದಾಗಿ ಪಾಲಿಕೆಯ ಆದಾಯಕ್ಕೆ ಕೊರತೆಯಾಗಿದೆ. ಬಹುತೇಕ ಕಾಮಗಾರಿಗಳಿಗೆ ಹೊಸದಾಗಿ ಅನುದಾನ ಬಿಡುಗಡೆಯಾಗುತ್ತಿಲ್ಲ. ಇನ್ನು, 2021-22ನೇ ಸಾಲಿನ ಪ್ರದೇಶಾಭಿವೃದ್ಧಿ ನಿಧಿಯ ಮೊದಲನೇ ಹಂತದ ಅನುದಾನದಲ್ಲಿಯೂ ಶೇ. 50ರಷ್ಟು ಕಡಿತ ಮಾಡಲಾಗಿದೆ.

 

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.