ಮಂಗಳೂರು: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿ ಇಬ್ಬರು ಮಹಿಳೆಯರು ಸಾವು!
Team Udayavani, Aug 21, 2021, 10:11 AM IST
ಮಂಗಳೂರು: ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಗರದ ಜಪ್ಪು ಮಹಾಕಾಳಿಪಡ್ಪು ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ಸ್ಥಳೀಯ ನಿವಾಸಿಗಳಾದ ವಸಂತಿ (50 ವ) ಮತ್ತು ಪ್ರೇಮಾ (48 ವ) ಮೃತಪಟ್ಟವರು.
ಇದನ್ನೂ ಓದಿ:ಉಗ್ರರಿಗೆ ಕಾಲಿಡಲೂ ಬಿಡಲ್ಲ…ತಾಲಿಬಾನಿಗಳ ಪಾಲಿಗೆ ಪಂಜ್ಶೀರ್ ದುಃಸ್ವಪ್ನ!
ಬೀಡಿ ಕಾರ್ಮಿಕರಾಗಿದ್ದ ಇವರಿಬ್ಬರು ದಿನನಿತ್ಯ ಕುಡುಪ್ಪಾಡಿ ದೋಟ ಎಂಬಲ್ಲಿಂದ ಮಹಾಕಾಳಿಪಡ್ಪುವಿನಲ್ಲಿರುವ ಬ್ರ್ಯಾಂಚ್ ಗೆ ರೈಲು ಹಳಿಯನ್ನು ದಾಟಿ ಬೀಡಿ ಕೊಂಡೊಯ್ಯುತ್ತಿದ್ದರು. ಅದರಂತೆ ಇಂದು ಬೆಳಗ್ಗೆಯೂ ಹಳಿ ದಾಟುತ್ತಿದ್ದಾಗ ಕೇರಳ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಡಿಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ