ಮಹಿಳೆಯರ ಸಂರಕ್ಷಣೆ ಕುರಿತು ತರಬೇತಿ


Team Udayavani, Jan 20, 2018, 3:10 PM IST

20-Jan-16.jpg

ದರ್ಬೆ : ಈಗಿನ ಸಮಾಜದಲ್ಲಿ ಮಕ್ಕಳಿಗೆ ತಮ್ಮ ತಂದೆ -ತಾಯಿಯರ ಮೇಲೆ ಇರುವ ನಂಬಿಕೆ ಬಹಳಷ್ಟು ಕಡಿಮೆಯಾಗಿದೆ. ಮಕ್ಕಳು ತಮ್ಮ ವೈಯಕ್ತಿಕ ವಿಚಾರಗಳನ್ನು ಹೆತ್ತವರೊಂದಿಗೆ ತಿಳಿಸುವುದನ್ನು ಬಿಟ್ಟು ಸ್ನೇಹಿತರೊಂದಿಗೆ ಹಂಚಿಕೊಳ್ಳುವುದರಲ್ಲಿಯೇ ಇಷ್ಟ ಪಡುತ್ತಾರೆ ಎಂದು ಸ್ವರಕ್ಷ ಫಾರ್‌ ವಿಮೆನ್‌ ಟ್ರಸ್ಟ್‌ನ ಸಿಇಒ ಕಾರ್ತಿಕ್‌ ಎಸ್‌. ಕಟೀಲು ಹೇಳಿದರು.

ಅವರು ಸಂತ ಫಿಲೋಮಿನಾ ಕಾಲೇಜಿನ ವಜ್ರ ಮಹೋತ್ಸವ ಆಚರಣೆಯ ಅಂಗವಾಗಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮಹಿಳಾ ಸಬಲೀಕರಣ ಘಟಕವು ಮಹಿಳೆಯರ ಸ್ವರಕ್ಷಣೆ ಕುರಿತು ಆಯೋಜಿಸಿದ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

ವಿದ್ಯುನ್ಮಾನ ಯುಗದಲ್ಲಿ ಮಹಿಳೆಯರು ತಮ್ಮ ಫೋಟೋಗಳನ್ನು ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ಗ್ಳಂತಹ ಜಾಲತಾಣಗಳಲ್ಲಿ ಅಪ್‌ ಲೋಡ್‌ ಮಾಡುವುದರಲ್ಲಿ ಬಹಳಷ್ಟು ಆಸಕ್ತಿ ಹೊಂದಿರುತ್ತಾರೆ. ಇದು ಕೆಲವೊಂದು ಸಂದರ್ಭದಲ್ಲಿ ಅಪಾಯಗಳಿಗೆ ಆಹ್ವಾನ ನೀಡಿದಂತೆ ಆಗುತ್ತದೆ ಎಂದು ಹೇಳಿದರು.

ಸಂಕೋಚ ಬೇಡ
ಮಹಿಳೆಯರು ಜನಜಂಗುಳಿ ಇರುವ ಪ್ರದೇಶದಲ್ಲಿ ಸಣ್ಣ ಪ್ರಮಾಣದ ದೌರ್ಜನ್ಯವನ್ನು ಅನುಭವಿಸಿದರೆ, ನಿರ್ಜನ ಪ್ರದೇಶದಲ್ಲಿ ದೊಡ್ಡ ಮಟ್ಟಿನ ದೌರ್ಜನ್ಯವನ್ನು ಅನುಭವಿಸುವುದನ್ನು ಕಾಣುತ್ತೇವೆ. ದೌರ್ಜನ್ಯಕ್ಕೆ ಒಳಗಾದಾಗ ಯಾವುದೇ ಸಂಕೋಚವಿಲ್ಲದೆ ಬಿಚ್ಚು ಮನಸ್ಸಿನಿಂದ ಹೆತ್ತವರೊಂದಿಗೆ, ಶಿಕ್ಷಕರೊಂದಿಗೆ ಅಥವಾ ಆರಕ್ಷಕ ಇಲಾಖೆಗೆ ತತ್‌ಕ್ಷಣ ಮಾಹಿತಿ ನೀಡುವಲ್ಲಿ ಹಿಂಜರಿಯಬಾರದು. ದೌರ್ಜನ್ಯದಂತಹ ಪರಿಸ್ಥಿತಿ ಎದುರಾದಾಗ ಶಾಂತಿಯನ್ನು ಕಾಪಾಡುವುದು, ಚುರುಕುತನದಿಂದ ಇರುವುದು ಬಹಳ ಮುಖ್ಯ ಎಂದು ಹೇಳಿ, ಸ್ವರಕ್ಷಣೆಯ ವಿವಿಧ ವಿಧಾನಗಳ ಕುರಿತು ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು.

ಬಾಂಧವ್ಯ ನಿರ್ಮಾಣವಾಗಲಿ
ಅಧ್ಯಕ್ಷತೆ ವಹಿಸಿದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ ಮಾತನಾಡಿ, ನಮ್ಮ ಪ್ರಾಚೀನ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನವನ್ನು ಕಲ್ಪಿಸಲಾಗಿದೆ. ನಮ್ಮ ಸಮಾಜದಲ್ಲಿ ಸ್ತ್ರೀ -ಪುರುಷರು ಎನ್ನುವ ಯಾವುದೇ ತಾರತಮ್ಯವಿಲ್ಲದೆ ಪರಸ್ಪರ ಉತ್ತಮ ಬಾಂಧವ್ಯ ನಿರ್ಮಾಣವಾಗಬೇಕು. ಮಹಿಳೆಯರು ದೌರ್ಜನ್ಯದಂತಹ ಕಠಿಣ ಪರಿಸ್ಥಿತಿ ಬಂದಾಗ ಧೈರ್ಯಗುಂದದೆ, ಎದುರಿಸುವ ಶಕ್ತಿ ಸಾಮರ್ಥ್ಯವನ್ನು ಹೊಂದಬೇಕು. ಮಹಿಳೆಯರು ತಾವು ಕೈಗೊಳ್ಳುವ ಕೆಲಸಗಳಲ್ಲಿ ಆತ್ಮವಿಶ್ವಾಸ, ಕ್ರಿಯಾಶೀಲತೆ, ರಚನಾತ್ಮಕತೆ ಮುಂತಾದವುಗಳನ್ನು ಅಳವಡಿಸಿಕೊಂಡಾಗ ಯಶಸ್ಸನ್ನು ಕಾಣಬಹುದು ಎಂದು ಹೇಳಿದರು.

ಮಹಿಳಾ ಸಬಲೀಕರಣ ಘಟಕದ ಸಂಯೋಜಕಿ ಶ್ರೀಮಣಿ ಸ್ವಾಗತಿಸಿ, ಸಹ ಸಂಯೋಜಕಿ ನಮ್ರತಾ ಜಯರಾಮ್‌ ಶೆಣೈ ವಂದಿಸಿದರು. ವಿದ್ಯಾರ್ಥಿನಿ ಅಕ್ಷತಾ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-belthangady

Belthangady:ಅರಣ್ಯಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ;6ದಿನದ ಬಳಿಕ ಮನೆಗೆ ಕರೆತಂದ ಶೌರ್ಯತಂಡ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Puttur: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

Puttur: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

Charmady Ghat: ತಡೆಗೋಡೆಗೆ ಗುದ್ದಿದ ಬಸ್‌

Charmady Ghat: ತಡೆಗೋಡೆಗೆ ಗುದ್ದಿದ ಬಸ್‌

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

9-kodachadri

Kodachadri: ಮಳೆಯಲಿ ಕೊಡಚಾದ್ರಿ ಮಡಿಲಲಿ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

8-ipl

IPL: ಸನ್‌ ರೈಸರ್ಸ್‌ ಆದ ಡೆಕ್ಕನ್‌ ಚಾರ್ಜಸ್‌

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.