ವರ್ಷಗಳಿಂದ ನಡೆಯುತ್ತಿಲ್ಲ ಸಾರಿಗೆ ಅದಾಲತ್‌!

ಮಂಗಳೂರಿನ ಕೆಎಸ್ಸಾರ್ಟಿಸಿ ವಿಭಾಗ

Team Udayavani, Jan 23, 2021, 6:50 AM IST

ವರ್ಷಗಳಿಂದ ನಡೆಯುತ್ತಿಲ್ಲ  ಸಾರಿಗೆ ಅದಾಲತ್‌!

ಮಹಾನಗರ: ಸರಕಾರಿ ಬಸ್‌ ಕಾರ್ಯಾಚರಣೆಯಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಪ್ರಯಾಣಿಕರಿಗೆ ಎದುರಾಗುವ ಸಮಸ್ಯೆ, ಬೇಡಿಕೆಗಳ ಈಡೇರಿಕೆಗಾಗಿ ಕಡ್ಡಾಯವಾಗಿ ಪ್ರತಿ ತಿಂಗಳು ಜನ ಸಂಪರ್ಕ ಸಭೆ (ಸಾರಿಗೆ ಅದಾಲತ್‌) ಮಾಡಬೇಕೆಂಬ ರಾಜ್ಯ ರಸ್ತೆ ಸಾರಿಗೆ ನಿಗಮದ ಸೂಚನೆಯಿದೆ. ಆದರೆ ಮಂಗಳೂರಿನ ಕೆಎಸ್ಸಾರ್ಟಿಸಿ ವಿಭಾಗದಲ್ಲಿ ಕಳೆದ ಹಲವು ವರ್ಷಗಳಿಂದ ಪ್ರಯಾಣಿಕರ ಹಿತದೃಷ್ಟಿಯಿಂದ ಯಾವುದೇ ಸಾರಿಗೆ ಅದಾಲತ್‌ ನಡೆಯುತ್ತಿಲ್ಲ ಎನ್ನುವುದು ವಾಸ್ತವ.

ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಲ್ಲಿ ಕೆಲವು ವರ್ಷಗಳ ಹಿಂದೆ 2016-17ರಲ್ಲಿ ಅಕ್ಟೋಬರ್‌ ತಿಂಗಳಿನಲ್ಲಿ ಮಂಗಳೂರು ವಿಭಾಗ ನಿಯಂತ್ರಣಾಧಿಕಾರಿ ವಿವೇಕಾನಂದ ಹೆಗ್ಡೆ ಅವರ ನೇತೃತ್ವದಲ್ಲಿ ಸಭೆ ನಡೆದಿತ್ತು. ತಿಂಗಳಿಗೊಮ್ಮೆ ನಿಗಮದಲ್ಲಿ ನಡೆಯುತ್ತಿದ್ದ ಈ ಸಭೆಯಲ್ಲಿ ಪ್ರಯಾಣಿಕರ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು. ಆದರೆ ತಿಂಗಳುಗಳು ಕಳೆದಂತೆ ಸಭೆ ನಡೆಸಲು ಕೆಎಸ್ಸಾರ್ಟಿಸಿ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮವಾಗಿ ಮಂಗಳೂರು ವಿಭಾಗದಲ್ಲಿ ಸಭೆ ನಡೆಯದೆ ಕೆಲವು ತಿಂಗಳುಗಳೇ ಕಳೆದಿದೆ.

ಅದೇ ರೀತಿ ಸಾರಿಗೆ ಪ್ರಾಧಿಕಾರದ ಸಭೆಯನ್ನು ಕೂಡ ಪ್ರತೀ ತಿಂಗಳ ನಡೆಯಬೇಕು ಎಂಬ ಸೂಚನೆ ಇದೆ. ಆದರೆ ಅನೇಕ ತಿಂಗಳುಗಳಿಂದ ಈ ಸಭೆ ನಡೆದಿರಲಿಲ್ಲ. ಸಾರ್ವಜನಿಕ ಬೇಡಿಕೆಗೆ ಅನುಗುಣವಾಗಿ ಕಳೆದ ತಿಂಗಳು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿತ್ತು. ಇಲ್ಲಿ ಸಿಟಿ ಬಸ್‌, ಆಟೋ ರಿಕ್ಷಾದವರೆ ಸಮಸ್ಯೆ ಹೇಳಲು ವೇದಿಕೆಯಾಗಿತ್ತು.

ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್‌ ಕುಮಾರ್‌ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ಕೊರೊನಾ ಕಾರಣದಿಂದಾಗಿ ಕೆಲವು ತಿಂಗಳುಗಳಿಂದ ಕೆಎಸ್ಸಾರ್ಟಿಸಿ ಅದಾಲತ್‌ ನಡೆಯುತ್ತಿಲ್ಲ. ಆದರೆ ಪ್ರಯಾಣಿಕರು ಕಚೇರಿಗೆ ಬಂದು ಅಹವಾಲು ನೀಡುತ್ತಿದ್ದಾರೆ.

ನಿಗಮದ ವತಿಯಿಂದ ಅವರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಮ್ಮ ವಿಭಾಗದಲ್ಲಿಯೂ ಅದಾಲತ್‌ ನಡೆಸುತ್ತೇವೆ’ ಎಂದು ತಿಳಿಸಿದ್ದಾರೆ.

ಸಮಸ್ಯೆ ಇರ್ತ್ಯಕ್ಕೆ ಅದಾಲತ್‌ ಸಹಕಾರಿ :

ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗ 1982ರ ಅ. 2ರಿಂದ ಪ್ರಾರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಭಾಗಶಃ ಮತ್ತು ಉಡುಪಿ ಜಿಲ್ಲೆಯ ಪ್ರದೇಶವು ಆಡಳಿತಕ್ಕೆ ಒಳಪಟ್ಟಿರುತ್ತದೆ. ಒಟ್ಟು 603 ವಾಹನಗಳನ್ನು ಹೊಂದಿದ್ದು, 425 ಅನುಸೂಚಿಗಳಲ್ಲಿ ಪ್ರತೀ ದಿನ 1.57 ಲಕ್ಷ ಕಿ.ಮೀ. ಕಾರ್ಯಾಚರಣೆಗೊಳಿಸುತ್ತದೆ. ಇದೇ ಕಾರಣಕ್ಕೆ ಪ್ರಯಾಣಿಕರಿಗೆ ವಿಭಾಗದ ಮಟ್ಟದಲ್ಲಿ ಬಸ್‌ಗಳಲ್ಲಿನ ನಿರ್ವಹಣೆ, ಬಸ್‌ ಕಾರ್ಯಾಚರಣೆ ಕುರಿತಂತೆ ಸಮಸ್ಯೆಗಳಿರುತ್ತದೆ. ಸ್ಥಳದಲ್ಲೇ ಇದರ ಇತ್ಯರ್ಥಕ್ಕೆ ಅದಾಲತ್‌ ನಡೆಸುವುದರಿಂದ ಸಹಕಾರಿಯಾಗುತ್ತಿದೆ. ಈ ನಿಟ್ಟಿನಲ್ಲಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಲ್ಲಿಯೂ ಪ್ರತೀ ತಿಂಗಳು ಅದಾಲತ್‌ ನಡೆಸಬೇಕು ಎನ್ನುವುದು ಜನಾಭಿಪ್ರಾಯ.

ಕೆಎಸ್ಸಾರ್ಟಿಸಿ ಬಸ್‌ ಸಂಚಾರದ ಬಗ್ಗೆ ಜನರಿರುವ ಸಮಸ್ಯೆ, ಅವರ ಬೇಡಿಕೆಗೆ ವೇದಿಕೆ ರೂಪದಲ್ಲಿ ಕೆಎಸ್ಸಾರ್ಟಿಸಿ ಜನಸಂಪರ್ಕ ಸಭೆ (ಸಾರಿಗೆ ಅದಾಲತ್‌) ನಡೆಯಬೇಕು. ಇನ್ನೇನು ಕೆಲವು ದಿನಗಳಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳ ಸಮಕ್ಷಮದಲ್ಲಿ ನಾನು ಖುದ್ದಾಗಿ ಸಭೆ ಕರೆದು ಪ್ರಯಾಣಿಕರ ಸಮಸ್ಯೆಗಳನ್ನು ಈಡೇರಿಸುವಲ್ಲಿ ಪ್ರಯತ್ನಿಸುತ್ತೇನೆ.ಡಿ. ವೇದವ್ಯಾಸ ಕಾಮತ್‌, ಶಾಸಕರು

 

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.