ಸಾರಿಗೆ,ಪ್ರವಾಸೋದ್ಯಮ ಪ್ರದರ್ಶನ 


Team Udayavani, Oct 28, 2017, 11:55 AM IST

28-Mng–6.jpg

ಮಹಾನಗರ: ಇಂಡಿಯಾ ಇಂಟರ್‌ ನ್ಯಾಷನಲ್‌ ಟ್ರಾವೆಲ್‌ಎಕ್ಸಿಬಿಷನ್‌ ಅನ್ನು ಶುಕ್ರವಾರ ನಗರದ ನವಭಾರತ ಸರ್ಕಲ್‌ ಬಳಿಯಿರುವ ಟಿ.ವಿ. ರಮಣ ಪೈ ಕನ್ವೆನ್ಶನ್‌ ಸೆಂಟರ್‌ನಲ್ಲಿ ಮೇಯರ್‌ ಕವಿತಾ ಸನಿಲ್‌ ಉದ್ಘಾಟಿಸಿದರು.

ಐಐಟಿಇ ಬೆಂಗಳೂರಿನ ನಿರ್ದೇಶಕ ಅನುರಾಗ್‌ ಗುಪ್ತಾ, ಕಲ್ಕೂರ ಜಾಹೀರಾತು ಸಂಸ್ಥೆಯ ಎಂ. ನಾರಾಯಣ ಭಟ್‌
ಮೊದಲಾದವರು ಉಪಸ್ಥಿತರಿದ್ದರು.

ಐಐಟಿಟಿಇ ವತಿಯಿಂದ ಏರ್ಪಡಿಸಲಾಗಿರುವ ಎಕ್ಸಿಬಿಷನ್‌ನಲ್ಲಿ ಸಾರಿಗೆ, ಪ್ರವಾಸ, ರೈಲ್ವೇ, ಆತಿಥ್ಯ ಮತ್ತಿತರ ಇದಕ್ಕೆ ಪೂರಕವಾದ ಸಂಗತಿಗಳನ್ನು ಜನರಿಗೆ ಪರಿಚಯಿಸಲಾಗುತ್ತದೆ. ಈ 3 ದಿನಗಳ ಪ್ರವಾಸಿ ಪ್ರದರ್ಶನದಲ್ಲಿ ಮುಖ್ಯವಾಗಿ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಪ್ರವಾಸಿ ಕೇಂದ್ರಗಳು, ಹೊಟೇಲ್‌ಗ‌ಳು, ರೆಸಾರ್ಟ್‌ಗಳು ಹಾಗೂ ಇನ್ನಿತರ ಸೇವೆಗಳು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರವಾಸದ ಸಂಯೋಜಕರು ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸೇವೆಗಳನ್ನು ಪೂರೈಸುವವರ ಕುರಿತಾದ ವಿಸ್ತೃತ ಮಾಹಿತಿ ಒದಗಿಸಲಾಗುತ್ತದೆ.

ಮಧ್ಯ ಪ್ರದೇಶದ ಪ್ರವಾಸೋದ್ಯಮ, ಜಾರ್ಖಂಡ್‌ ಪ್ರವಾಸೋದ್ಯಮ, ಉತ್ತರಾಖಂಡ ಪ್ರವಾಸೋದ್ಯಮ, ಗುಜರಾತ್‌ ಪ್ರವಾಸೋದ್ಯಮ ಮತ್ತು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಗಳು ಇನ್ನಿತರ ರಾಜ್ಯ ಪ್ರವಾಸೋದ್ಯಮ ಇಲಾಖೆಗಳು ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಗಳು ಈ ಎಕ್ಸಿಬಿಷನ್‌ನಲ್ಲಿ ಪ್ರಸ್ತುತಗೊಳ್ಳಲಿರುವುದು. ಮಾತ್ರವಲ್ಲ ಅನೇಕ ಪ್ರಮುಖ ಟ್ರಾವೆಲ್‌ ಏಜೆಂಟ್‌ಗಳು, ಹೊಟೇಲ್‌ಗ‌ಳು, ರೆಸಾರ್ಟ್‌ಗಳು ಪಾಲ್ಗೊಳ್ಳುತ್ತಲಿವೆ. ಅಡಿಗಾಸ್‌ ಯಾತ್ರಾ, ಟ್ರೀಬೋ ಹೊಟೇಲ್ಸ್‌, ರಾಶಿ ಎಕೊಟ್ಯೂರಿಸಂ, ಮುಸ್ಲಿಂ ಟ್ರಾವೆಲ್‌ ಆ್ಯಂಡ್‌ ಟೂರ್ ಇತ್ಯಾದಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ಅವರ ಪ್ಯಾಕೇಜ್‌ಗಳು, ಸೇವೆಗಳ ಮಾಹಿತಿ ಒದಗಿಸಲಿದ್ದಾರೆ.

ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರವಾಸೋದ್ಯಮವನ್ನು ಉತ್ತೇಜಿಸುವುದೇ ಎಕ್ಸಿಬಿಷನ್‌ನ
ಮೂಲ ಉದ್ದೇಶವಾಗಿದೆ. ಜನರ ಆಸಕ್ತಿಗೆ ತಕ್ಕಂತೆ ಪ್ರವಾಸೋದ್ಯಮದ ಕುರಿತಾದ ಮಾಹಿತಿಗಳನ್ನು ಒಂದೇ ಸೂರಿನಡಿ ಒದಗಿಸುವ ಪ್ರಯತ್ನ ಇದಾಗಿದೆ. ಕ್ರಿಸ್‌ ಮಸ್‌ ಸಂಭ್ರಮ, ವಾರದ ಪ್ರವಾಸ, ಹನಿಮೂನ್‌ ವೆಕೇಷನ್‌ ಮತ್ತು ಬ್ಯುಸಿನೆಸ್‌ ಟೂರುಗಳನ್ನು ನಡೆಸಲು ಈ ಚಳಿಗಾಲವು ಪ್ರಶಸ್ತವಾಗಿದ್ದು, ಈ ಸೌಲಭ್ಯವನ್ನು ಬಳಸಿಕೊಳ್ಳುವುದು ಸೂಕ್ತವಾಗಿದೆ.

ವಿವಿಧ ಅತ್ಯಾಕರ್ಷಣೀಯ ಪ್ರವಾಸೋದ್ಯಮ ಪ್ಯಾಕೇಜ್‌ಗಳಿದ್ದು, ಈಗಾಗಲೇ ಪ್ರವಾಸದ ಪ್ಲಾನಿಂಗ್‌ ಮಾಡುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಕಾರ್ಪೊರೇಟ್‌ ಸಂಸ್ಥೆಗಳು, ಟ್ರಾವೆಲರ್‌ ಸಂಸ್ಥೆಗಳು ಕೂಡ ವಿಸ್ತತವಾದ ಮಾಹಿತಿಯನ್ನು ಈ ಪ್ರದರ್ಶನದಲ್ಲಿ ಪಡೆದುಕೊಳ್ಳಬಹುದಾಗಿದೆ. ಅ.29ರ ವರೆಗೆ ಪ್ರತಿ ದಿನ ಬೆಳಗ್ಗೆ 11.30ರಿಂದ ರಾತ್ರಿ 7.30ರ ವರೆಗೆ ಪ್ರದರ್ಶನ ತೆರೆದುಕೊಂಡಿದ್ದು, ಪ್ರವೇಶ ಉಚಿತವಾಗಿರುತ್ತದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.