ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ: ಡಿಸಿ ಡಾ| ರಾಜೇಂದ್ರ


Team Udayavani, Oct 2, 2020, 1:30 AM IST

ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ: ಡಿಸಿ ಡಾ| ರಾಜೇಂದ್ರ

ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಸಭೆಯಲ್ಲಿ ಮಾತನಾಡಿದರು.

ಮಂಗಳೂರು: ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರ ಜತೆಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.

ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರ ಕೊಠಡಿಯಲ್ಲಿ ಗುರುವಾರ ನಡೆದ ಆರೋಗ್ಯ ರಕ್ಷಾ ಸಮಿತಿಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಡರೋಗಿಗಳು ಹೆಚ್ಚಾಗಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಬರುತ್ತಾರೆ. ರೋಗಿಗಳನ್ನು ಮಾನವೀಯತೆಯ ನೆಲೆಯಲ್ಲಿ ಪ್ರೀತಿ, ವಿಶ್ವಾಸದಿಂದ ನೋಡುವುದರ ಜತೆ ಒಳ್ಳೆಯ ಚಿಕಿತ್ಸೆ ನೀಡಿದರೆ ಬೇಗ ಗುಣಮುಖರಾಗುತ್ತಾರೆ ಎಂದರು.

ವೈದ್ಯಕೀಯ ನೆರವನ್ನು ಕೇಳಿ ಬರುವ ರೋಗಿಗಳಿಗೆ ಉಚಿತ ಔಷಧಗಳು ಸಿಗು ವಂತೆ ನೋಡಿಕೊಳ್ಳಬೇಕು. ಹೊರಗಡೆ ಔಷಧ ಪಡೆಯಲು ಚೀಟಿಯನ್ನು ನೀಡಬಾರದು ಇದಕ್ಕಾಗಿ ಔಷಧಗಳ ದಾಸ್ತಾನುಗಳು ಆಸ್ಪತ್ರೆಗಳಲ್ಲಿ ಇರುವಂತೆ ನೋಡಿಕೊಳ್ಳ ಬೇಕೆಂದು ಸೂಚನೆ ನೀಡಿದರು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಅಭಿಯಾನದಡಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಾಗ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಂದ ಅಭಿಪ್ರಾಯಗಳನ್ನು ಪಡೆದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲಾ ಆಸ್ಪತ್ರೆಗಳನ್ನು ಬೆಂಕಿ ಅವಘಡಗಳಿಂದ ತಪ್ಪಿಸಲು ಅಗತ್ಯ ಇರುವ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತೀ 6 ತಿಂಗಳಿಗೊಮ್ಮೆ ಅಗ್ನಿಶಾಮಕ ದಳದ ಸುರಕ್ಷಾ ಅಧಿಕಾರಿಯಿಂದ ಫೈರ್‌ ಸೇಫ್ಟಿಯ ಬಗ್ಗೆ ತಪಾಸಣೆ ನಡೆಸಿ, ಅವರು ನೀಡುವ ವರದಿಯನ್ನು ಆಧರಿಸಿ ಫೈರ್‌ ಸೇಫ್ಟಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.

ಸರಕಾರದ ನಿಯಮದಂತೆ ಖರೀದಿ
ಆಸ್ಪತ್ರೆಗೆ ತುರ್ತಾಗಿ ಆವಶ್ಯಕವಿರುವ ಔಷಧಗಳನ್ನು ಖರೀದಿಸುವಾಗ ಸರಕಾರದ ನಿಯಮಗಳನ್ನು ಪಾಲಿಸಿ ಖರೀದಿ ಮಾಡಬೇಕು. ಜಿಲ್ಲಾ ಆಸ್ಪತ್ರೆಯ ಪ್ರತೀ ವರ್ಷದ ಆದಾಯವನ್ನು ಕ್ರೋಡೀಕರಿಸುವ ಜತೆ ಹೆಚ್ಚುವರಿ ಹಣವನ್ನು ಆಸ್ಪತ್ರೆಯ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಬೇಕೆಂದು ಸೂಚನೆ ನೀಡಿದರು. ಮಂಗಳೂರು ಸ್ಮಾರ್ಟ್‌ ಸಿಟಿ ಲಿಮಿಟೆಡ್‌ ವತಿಯಿಂದ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಸಂಬಂಧ ಪ್ರತ್ಯೇಕ ಸಭೆಯನ್ನು ಮುಂದಿನ ದಿನಗಳಲ್ಲಿ ಕರೆಯುವುದರೊಂದಿಗೆ ಚರ್ಚಿಸಿ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳವಂತೆ ಸೂಚನೆ ನೀಡಿದರು.

ಕಾರ್ಡ್‌ ಇಲ್ಲದಿದ್ದರೂ ಚಿಕಿತ್ಸೆ ನೀಡಿ
ಜಿಲ್ಲಾ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ಕಾರ್ಯ ನಿರ್ವಹಿಸುತ್ತಿರುವ ಸಿಬಂದಿಗೆ ಇಎಸ್‌ಐ, ಪ್ರಾವಿಡೆಂಟ್‌ ಫಂಡ್‌ ಒಳಗೊಂಡಂತೆ ಟೆಂಡರ್‌ನಲ್ಲಿ ನಿಗದಿಪಡಿಸಿರುವ ವೇತನವನ್ನು ತಲಪುವಂತೆ ನೋಡಿಕೊಳ್ಳಬೇಕು. ಕೆಲವು ಅರ್ಹ ಬಡತನ ರೇಖೆಗಳಗಿಂತ ಕೆಳಗಿರುವವರು ಚಿಕಿತ್ಸೆಗೆ ಬಂದಾಗ ಬಿಪಿಎಲ್‌ ಕಾರ್ಡ್‌ ಹೊಂದಿಲ್ಲ ಎಂಬ ಕಾರಣಕ್ಕೆ ಚಿಕಿತ್ಸೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಮತ್ತು ಅವರ ನೆರವಿಗೆ ಸಮಾಲೋಚಕರನ್ನು ನೇಮಿಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಚಂದ್ರ ಬಾಯರಿ, ಲೇಡಿಗೋಶನ್‌ ಪ್ರಭಾರ ಅಧೀಕ್ಷಕಿ ದುರ್ಗಾಪ್ರಸಾದ್‌, ಕೆ.ಎಂ.ಸಿ. ಡೀನ್‌ ಎಂ.ವಿ. ಪ್ರಭು, ವೆನ್‌ಲಾಕ್‌ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ಅಧೀಕ್ಷಕ ಡಾ| ಸದಾಶಿವ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.