ಕೋವಿಡ್ 19 ಚಿಕಿತ್ಸೆ: 12 ಆಸ್ಪತ್ರೆಗಳ ತ್ವರಿತ ಸ್ಪಂದನೆ
Team Udayavani, Jun 24, 2020, 6:35 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ಕೋವಿಡ್ 19 ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಕೊಡಿಸಲು ಸರಕಾರ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಆಸ್ಪತ್ರೆಗಳನ್ನು ಗುರುತಿಸಿದೆ.
ಈ ಪೈಕಿ 12 ಆಸ್ಪತ್ರೆಗಳು ತತ್ಕ್ಷಣಕ್ಕೇ ಸ್ಪಂದಿಸಿ ಕೋವಿಡ್ 19 ರೋಗಿಗಳ ಸೇವೆಗಿಳಿಯುವ ಭರವಸೆ ನೀಡಿವೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಕೊಡಿಸುವ ಉದ್ದೇಶ ಸರಕಾರದ್ದು. ರಾಜ್ಯದಲ್ಲಿ ಒಟ್ಟು 483 ಖಾಸಗಿ ಆಸ್ಪತ್ರೆಗಳನ್ನು ಗೊತ್ತುಪಡಿಸಲಾಗಿದೆ. ಜಿಲ್ಲೆಯ 18 ಆಸ್ಪತ್ರೆಗಳ ಮುಖ್ಯಸ್ಥರು ಸಮಯಾವಕಾಶ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಿಗದಿತ ದರದಲ್ಲೇ ಚಿಕಿತ್ಸೆ
ಎಲ್ಲ ಆಸ್ಪತ್ರೆಗಳಲ್ಲಿಯೂ ಸರಕಾರ ನಿಗದಿ ಪಡಿಸಿದ ದರದಲ್ಲಿಯೇ ಚಿಕಿತ್ಸೆ ಸಿಗುತ್ತದೆ. ಆಸ್ಪತ್ರೆಗಳಿಗೆ ಆಯಾ ಜಿಲ್ಲೆಗಳ ಆರೋಗ್ಯ ಇಲಾಖೆಗಳ ಶಿಫಾರಸಿನೊಂದಿಗೆ ತೆರಳಿದರೆ ಚಿಕಿತ್ಸಾ ಶುಲ್ಕ ಕಡಿಮೆಯಾಗುತ್ತದೆ.
ನೇರವಾಗಿ ತೆರಳಿದರೆ ಸರಕಾರ ನಿಗದಿಪಡಿಸಿದ ತುಸು ಹೆಚ್ಚಿನ ಶುಲ್ಕವನ್ನು ನೀಡಬೇಕಾಗುತ್ತದೆ. ಎಲ್ಲ ಆಸ್ಪತ್ರೆಗಳಲ್ಲಿ ಶೇ. 50 ಹಾಸಿಗೆಗಳನ್ನು ಆರೋಗ್ಯ ಇಲಾಖೆಯಿಂದ ಶಿಫಾರಸು ಮಾಡಿದ ಕೋವಿಡ್ 19 ರೋಗಿಗಳ ಚಿಕಿತ್ಸೆಗೆಂದೇ ಮೀಸಲಿಡಬೇಕು. ರೋಗಿಗಳಿಗೆ ಸರಕಾರ ನಿಗದಿಪಡಿಸಿದ ದರದಲ್ಲೇ ಚಿಕಿತ್ಸೆ ನೀಡಬೇಕು.
ಯಾವುದೇ ಕಾರಣಕ್ಕೂ ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ ಎಂದು ನಿರ್ದೇಶನ ನೀಡಲಾಗಿದೆ. ಆರೋಗ್ಯ ವಿಮೆ ಹೊಂದಿರುವವರಿಗೆ ಈ ದರ ಅನ್ವಯವಾಗುವುದಿಲ್ಲ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ