ಕಡಿಯಬೇಕಾಗಿದ್ದ ಮರ ಬುಡ ಸಮೇತ ಸ್ಥಳಾಂತರ
Team Udayavani, Aug 7, 2018, 2:44 PM IST
ಮಂಗಳೂರು: ನಗರದ ಲೇಡಿಹಿಲ್ನ ರಸ್ತೆ ತಿರುವಿನಲ್ಲಿದ್ದ ಮರವೊಂದನ್ನು ಬುಡಸಮೇತ ಬೇರೆಡೆಗೆ ಸ್ಥಳಾಂತರಗೊಳಿಸಿ ಪರಿಸರ ಪ್ರೀತಿ ಮೆರೆಯಲಾಗಿದೆ. ಲೇಡಿಹಿಲ್ ಬಳಿ ಚಿಲಿಂಬಿಗೆ ತಿರುಗುವ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ “ಪೆಲ್ಟೋಫೋರಂ’ ಜಾತಿಗೆ ಸೇರಿದ ಮರವನ್ನು ಕಡಿಯಲು ಮಹಾನಗರ ಪಾಲಿಕೆ ನಿರ್ಧರಿಸಿತ್ತು.
ಆದರೆ ಇದಕ್ಕೆ ಸ್ಥಳೀಯರಿಂದ ಹಾಗೂ ಎನ್ಇಸಿಎಫ್ ಪರಿಸರ ಪರ ಸಂಘಟನೆ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯು ಮರ ಕಡಿಯುವ ನಿರ್ಧಾರವನ್ನು ಕೈಬಿಟ್ಟು ಅದನ್ನು ಬುಡಸಮೇತ ಜೀವಂತವಾಗಿ ಇನ್ನೊಂದಡೆಗೆ ಸ್ಥಳಾಂತರಿಸಲು ನಿರ್ಧರಿಸಿತು.
ಸೋಮವಾರ ಪಾಲಿಕೆ ಸಿಬಂದಿ ಕಾರ್ಯಾಚರಣೆ ನಡೆಸಿ ಕ್ರೇನ್ ಮೂಲಕ ಮರವನ್ನು ಪಕ್ಕದ ಖಾಲಿ ಜಾಗಕ್ಕೆ ಸ್ಥಳಾಂತರಿಸಿ ನೆಡಲಾಯಿತು. ಪಾಲಿಕೆಯ ಅಧಿಕಾರಿಗಳು, ಎನ್ಇಸಿಎಫ್ನ ಕಾರ್ಯಕರ್ತರಾದ ಶಶಿಧರ ಶೆಟ್ಟಿ , ಜೀತ್ ಮಿಲನ್, ರೋಹನ್ ಸಿರಿ ಮತ್ತಿತರರು ಈ ವೇಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ